Homeಮುಖಪುಟಉತ್ತರಪ್ರದೇಶ: ಡ್ರಿಪ್‌ನಲ್ಲಿ ರಕ್ತಕಣಗಳ ಬದಲಿಗೆ ಹಣ್ಣಿನ ಜ್ಯೂಸ್ ನೀಡಿದ ಆಸ್ಪತ್ರೆಗೆ ಬುಲ್ಡೋಜರ್‌ ಬೆದರಿಕೆ

ಉತ್ತರಪ್ರದೇಶ: ಡ್ರಿಪ್‌ನಲ್ಲಿ ರಕ್ತಕಣಗಳ ಬದಲಿಗೆ ಹಣ್ಣಿನ ಜ್ಯೂಸ್ ನೀಡಿದ ಆಸ್ಪತ್ರೆಗೆ ಬುಲ್ಡೋಜರ್‌ ಬೆದರಿಕೆ

- Advertisement -
- Advertisement -

ರಕ್ತದ ಪ್ಲೇಟ್‌ಲೆಟ್‌ಗಳ ಬದಲು ಹಣ್ಣಿನ ರಸವನ್ನು ಡ್ರಿಪ್‌ನಲ್ಲಿ ನೀಡಿದೆ ಎಂದು ಎಂದು ಆರೋಪಿಸಲಾಗಿರುವ ಉತ್ತರ ಪ್ರದೇಶದ ಖಾಸಿಗಿ ಆಸ್ಪತ್ರೆ ಇದೀಗ ಬುಲ್ಡೋಜರ್‌‌ ಬೆದರಿಕೆ ಎದುರಿಸುತ್ತಿದೆ. ರಾಜ್ಯದ ಪ್ರಯಾಗ್‌ರಾಜ್‌ನಲ್ಲಿರುವ “ಗ್ಲೋಬಲ್‌ ಹಾಸ್ಪಿಟಲ್ ಮತ್ತು ಟ್ರಾಮ್ ಸೆಂಟರ್‌‌‌” ಅನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಅದನ್ನು ನೆಲಸಮಗೊಳಿಸುವ ಬಗ್ಗೆ ಸರ್ಕಾರ ನೋಟಿಸ್ ನೀಡಿದೆ.

ಆಸ್ಪತ್ರೆಯನ್ನು ಅನುಮತಿಯಿಲ್ಲದೆ ನಿರ್ಮಿಸಲಾಗಿದೆ ಮತ್ತು ಅದನ್ನು ಶುಕ್ರವಾರದ ವೇಳೆಗೆ ಖಾಲಿ ಮಾಡಬೇಕು ಎಂದು ನೋಟಿಸ್ ತಿಳಿಸಿದೆ. ಆಸ್ಪತ್ರೆ ಕಡೆಯಿಂದ ತಪ್ಪುಗಳಾಗಿರುವ ಬಗ್ಗೆ ಪ್ರಾಥಮಿಕ ವಿಚಾರಣೆಯ ವೇಳೆ ತಿಳಿದು ಬಂದ ನಂತರ ಆಸ್ಪತ್ರೆಯನ್ನು ಕಳೆದ ವಾರ ಮುಚ್ಚಲಾಗಿದ್ದು, ಪ್ರಸ್ತುತ ಅಲ್ಲಿ ಯಾವುದೆ ರೋಗಿಗಳು ಇಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೆಲಸಮಗೊಳಿಸುವ ಬಗ್ಗೆ ಈ ಹಿಂದೆ ನೀಡಿದ್ದ ನೋಟಿಸ್‌ಗೆ ಆಸ್ಪತ್ರೆಯ ಅಧಿಕಾರಿಗಳು ಉತ್ತರಿಸಿರಲಿಲ್ಲ ಎಂದು ಹೇಳಿರುವ ನೋಟಿಸ್‌, ಈ ವರ್ಷದ ಆರಂಭದಲ್ಲಿ ಆಸ್ಪತ್ರೆಯನ್ನು ನೆಲಸಮಗೊಳಿಸುವ ಬಗ್ಗೆ ಆದೇಶವನ್ನು ರವಾನಿಸಲಾಗಿದೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಡ್ರಿಪ್‌ನಲ್ಲಿ ರಕ್ತ ಕಣಗಳ ಬದಲಿಗೆ ಹಣ್ಣಿನ ಜ್ಯೂಸ್ ನೀಡಿದ ಆಸ್ಪತ್ರೆ; ರೋಗಿ ಸಾವು

ಆಸ್ಪತ್ರೆಗೆ ದಾಖಲಾಗಿದ್ದ 32 ವರ್ಷದ ಡೆಂಗ್ಯೂ ರೋಗಿಗೆ ರಕ್ತಕಣಗಳ ಬದಲಿಗೆ ಮೂಸಂಬಿ ಜ್ಯೂಸ್‌ ಅನ್ನು ಡ್ರಿಪ್‌ನಲ್ಲಿ ನೀಡಲಾಗಿದ್ದು, ಇದರಿಂದಾಗಿ ರೋಗಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿತ್ತು. ಡ್ರಿಪ್‌ ನೀಡಿದ ನಂತರ ರೋಗಿಯ ಆರೋಗ್ಯ ಹದಗೆಟ್ಟಿತ್ತು, ಇದರ ನಂತರ ಅವರನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಅಲ್ಲಿ ಅವರು ಸಾವನ್ನಪ್ಪಿದರು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.

ರೋಗಿಯನ್ನು ಸೇರಿಸಿದ್ದ ಆಸ್ಪತ್ರೆಯ ವೈದ್ಯರು ವಿವಾದಿತ ರಕ್ತಕಣಗಳ ಯುನಿಟ್‌ನಲ್ಲಿ ರಾಸಾಯನಿಕಗಳ ಮಿಶ್ರಣ ಮತ್ತು ಮೊಸಾಂಬಿ ಜ್ಯೂಸ್‌ನಂತಹ ಸಿಹಿ ಏನೊ ಇದೆ ಎಂದು ಹೇಳಿದ್ದಾರೆ ಎಂದು ಕುಟುಂಬಿಕರು ಹೇಳಿದ್ದಾರೆ.

ಆದರೆ ವಿವಾದಿತ ‘‘ರಕ್ತಕಣಗಳ ಚೀಲ”ದಲ್ಲಿ ನಿಜವಾಗಿಯೂ ಜ್ಯೂಸ್‌ ಇತ್ತೆ ಎಂಬ ವೈದ್ಯಕೀಯ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿಲ್ಲ. ಆಸ್ಪತ್ರೆಯ ಸಿಬ್ಬಂದಿಯ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕೆಂದು ರೋಗಿಯ ಕುಟುಂಬವು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿತ್ತು.

ಇದನ್ನೂ ಓದಿ:  ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

ಈ ಮಧ್ಯೆ, ಡೆಂಗ್ಯೂ ರೋಗಿಯ ಮರಣದ ಒಂದು ದಿನದ ನಂತರ, ಪ್ರಯಾಗ್‌ರಾಜ್ ಪೊಲೀಸರು “ನಕಲಿ ರಕ್ತಕಣ”ಗಳನ್ನು ಪೂರೈಸುವ ಗ್ಯಾಂಗ್‌ನ 10 ಜನರನ್ನು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...