Homeಮುಖಪುಟಉತ್ತರ ಪ್ರದೇಶ: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಬುಲ್ಡೋಜರ್; ಮಹ್ಮದಾಬಾದ್‌ನ ಸಮಾಧಿ, ಅಂಗಡಿಗಳು ಧ್ವಂಸ

ಉತ್ತರ ಪ್ರದೇಶ: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಬುಲ್ಡೋಜರ್; ಮಹ್ಮದಾಬಾದ್‌ನ ಸಮಾಧಿ, ಅಂಗಡಿಗಳು ಧ್ವಂಸ

- Advertisement -
- Advertisement -

ಸೀತಾಪುರಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹ್ಮದಾಬಾದ್ ತಾಲ್ಲೂಕಿನಲ್ಲಿ ನಡೆದ ವಿವಾದಾತ್ಮಕ ಕಾರ್ಯಾಚರಣೆಯಲ್ಲಿ, ಸೋಮವಾರ ಮಿಯಾ ಸರಾಯ್ ವೃತ್ತದಲ್ಲಿ ಆಡಳಿತವು ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ದಶಕಗಳಿಂದಲೂ ಇದ್ದ ಅಂಗಡಿಗಳು ಮತ್ತು ಮಜಾರ್ಗಳನ್ನು (ಸಮಾಧಿ) ತೆರವುಗೊಳಿಸಿತು. ಜಿಲ್ಲಾಧಿಕಾರಿ ಅಭಿಷೇಕ್ ಆನಂದ್ ಅವರ ಆದೇಶದ ಮೇರೆಗೆ ಕ್ರಮ ಕೈಗೊಳ್ಳಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಭಾರಿ ಸಂಖ್ಯೆಯ ಪೊಲೀಸ್ ಮತ್ತು ಪಿಎಸಿ (PAC) ಪಡೆಗಳನ್ನು ನಿಯೋಜಿಸಲಾಗಿತ್ತು.

ಅಧಿಕಾರಿಗಳ ಪ್ರಕಾರ, ಕಟ್ಟಡಗಳು ಇದ್ದ ಭೂಮಿಯು ಕಳೆದ 30 ವರ್ಷಗಳಿಂದ ಒತ್ತುವರಿಯಾಗಿರುವ ಬಂಜರು ಸರ್ಕಾರಿ ಜಾಗವಾಗಿದೆ. ಆಡಳಿತವು ಆಸ್ತಿಯ ಮೌಲ್ಯವನ್ನು ಸುಮಾರು ಎರಡು ಕೋಟಿ ರೂಪಾಯಿ ಎಂದು ಅಂದಾಜಿಸಿದೆ. ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ADM) ನಿತೀಶ್ ಕುಮಾರ್ ಸಿಂಗ್ ಮಾತನಾಡಿ, “ದಶಕಗಳಿಂದಲೂ ಇರುವ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸಲು ಕ್ರಮ ಅಗತ್ಯವಾಗಿತ್ತು. ನಿರ್ಮಾಣದ ಸ್ವರೂಪ ಏನೇ ಇದ್ದರೂ, ಸರ್ಕಾರಿ ಭೂಮಿಯನ್ನು ಕಾನೂನುಬಾಹಿರವಾಗಿ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲಎಂದು ಹೇಳಿದರು.

ತೆರವು ಸ್ಥಳೀಯ ಮುಸ್ಲಿಮರಲ್ಲಿ ವ್ಯಾಪಕ ಕಳವಳಕ್ಕೆ ಕಾರಣವಾಗಿದೆ. ಅವರಲ್ಲಿ ಅನೇಕರು ಮಜಾರ್ ಅನ್ನು ಆಧ್ಯಾತ್ಮಿಕ ಮಹತ್ವದ ಸ್ಥಳವೆಂದು ಭಾವಿಸಿದ್ದರು. ಸ್ಥಳೀಯ ನಿವಾಸಿ ಮೊಹಮ್ಮದ್ ಇಕ್ಬಾಲ್ ತಮ್ಮ ದುಃಖ ವ್ಯಕ್ತಪಡಿಸಿ, “ ಮಜಾರ್ (ಸಮಾಧಿ) ನಮ್ಮ ಸಮುದಾಯದ ಭಾಗವಾಗಿ ಹಲವು ತಲೆಮಾರುಗಳಿಂದ ಇತ್ತು. ಇದನ್ನು ನಾಶ ಮಾಡಿರುವುದು ಹೃದಯ ವಿದ್ರಾವಕವಾಗಿದ್ದು, ಇದು ನಮ್ಮ ನಂಬಿಕೆಯ ಮೇಲಿನ ದಾಳಿಯಂತೆ ಭಾಸವಾಗುತ್ತಿದೆಎಂದು ಹೇಳಿದರು.

ಇನ್ನೊಬ್ಬ ಅಂಗಡಿಯವರಾದ ತಾರಿಕ್ ಅನ್ಸಾರಿ, “ನಾವು ಇಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿದ್ದೇವೆ ಮತ್ತು ಕೆಲಸ ಮಾಡುತ್ತಿದ್ದೇವೆ. ನೋಟಿಸ್ಗಳು ಬಂದಿದ್ದವು, ಆದರೆ ಹೊಂದಿಕೊಳ್ಳಲು ನಮಗೆ ಸಾಕಷ್ಟು ಸಮಯ ನೀಡಲಿಲ್ಲ. ನಮ್ಮ ಜೀವನೋಪಾಯ ಮತ್ತು ನಂಬಿಕೆಗೆ ಧಕ್ಕೆಯಾಗಿದೆಎಂದು ತಿಳಿಸಿದರು.

ಮಹಮ್ಮದಾಬಾದ್ ತಹಸೀಲ್ದಾರ್ ನೇತೃತ್ವದಲ್ಲಿ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಯಿತು. ಒತ್ತುವರಿಗಳನ್ನು ಶಾಂತಿಯುತವಾಗಿ ತೆರವುಗೊಳಿಸುವ ಹಿಂದಿನ ಪ್ರಯತ್ನಗಳು ವಿಫಲವಾಗಿದ್ದವು ಎಂದು ಆಡಳಿತವು ಹೇಳಿಕೊಂಡಿದೆ. “ಸ್ವಯಂಪ್ರೇರಿತವಾಗಿ ಜಾಗ ಖಾಲಿ ಮಾಡುವಂತೆ ಜನರನ್ನು ಮನವೊಲಿಸಲು ನಾವು ಪ್ರಯತ್ನಿಸಿದೆವು. ಅದು ಸಾಧ್ಯವಾಗದಿದ್ದಾಗ, ಕಾನೂನನ್ನು ಜಾರಿಗೊಳಿಸಲು ಕೆಡವುವಿಕೆಯನ್ನು ಮುಂದುವರಿಸುವುದನ್ನು ಬಿಟ್ಟು ಆಡಳಿತಕ್ಕೆ ಬೇರೆ ದಾರಿಯಿರಲಿಲ್ಲಎಂದು ಸ್ಥಳೀಯ ಅಧಿಕಾರಿಯೊಬ್ಬರು ಹೇಳಿದರು.

ಭದ್ರತಾ ಕ್ರಮಗಳು ಕಟ್ಟುನಿಟ್ಟಾಗಿದ್ದವು. ಪ್ರತಿಭಟನೆಗಳು ಅಥವಾ ಅಹಿತಕರ ಘಟನೆಗಳನ್ನು ತಡೆಯಲು ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದರು. ಬಹು ಠಾಣೆಗಳ ಸಿಬ್ಬಂದಿ ಜೊತೆಗೆ ಪಿಎಸಿ ಪಡೆಗಳನ್ನು ನಿಯೋಜಿಸಲಾಗಿತ್ತು. ಸೀತಾಪುರ ಜಿಲ್ಲೆಯ ಯಾವುದೇ ಸ್ಥಳದಲ್ಲಿ ಸರ್ಕಾರಿ ಭೂಮಿಯಲ್ಲಿ ಅಕ್ರಮ ನಿರ್ಮಾಣವನ್ನು ಸಹಿಸುವುದಿಲ್ಲ ಎಂದು ಆಡಳಿತ ಸ್ಪಷ್ಟಪಡಿಸಿದೆ.

ಆದರೆ, ಕ್ರಮವು ಧಾರ್ಮಿಕ ಸ್ಥಳಗಳ ಬಗ್ಗೆ ಸರ್ಕಾರದ ವರ್ತನೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹಲವು ಸ್ಥಳೀಯರು, ದಶಕಗಳ ಹಿಂದೆ ಔಪಚಾರಿಕ ಅನುಮತಿಯಿಲ್ಲದೆ ನಿರ್ಮಿಸಿದ್ದರೂ, ಆಧ್ಯಾತ್ಮಿಕ ಸ್ಥಳಗಳಿಗೆ ಸೂಕ್ಷ್ಮವಾದ ನಿರ್ವಹಣೆ ಅಗತ್ಯ ಎಂದು ವಾದಿಸುತ್ತಾರೆ. ಸಮುದಾಯದ ಹಿರಿಯರಾದ ಮೌಲಾನಾ ಶಾಹಿದ್, “ಇಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಮೊದಲು ಆಡಳಿತವು ನಮ್ಮ ಸಮುದಾಯದೊಂದಿಗೆ ಮಾತುಕತೆ ನಡೆಸಬಹುದಿತ್ತು. ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವ ಹೊಂದಿರುವ ಮಜಾರ್ ಅನ್ನು ಕೆಡವಿರುವುದು ಕೋಮು ಸೌಹಾರ್ದಕ್ಕೆ ಧಕ್ಕೆ ತರುತ್ತದೆಎಂದು ಹೇಳಿದರು.

ಚರ್ಚೆಗಳು ಮುಂದುವರಿದಂತೆ, ಘಟನೆಯು ಭೂ ಕಾನೂನುಗಳನ್ನು ಜಾರಿಗೊಳಿಸುವುದು ಮತ್ತು ಧಾರ್ಮಿಕ ಸಮುದಾಯಗಳ ಭಾವನೆಗಳನ್ನು ಗೌರವಿಸುವುದರ ನಡುವಿನ ಉದ್ವಿಗ್ನತೆಯನ್ನು ಎತ್ತಿ ತೋರಿಸುತ್ತದೆ. ಆಡಳಿತವು ತನ್ನ ಕ್ರಮಗಳು ಸಂಪೂರ್ಣವಾಗಿ ಕಾನೂನುಬದ್ಧವಾಗಿದ್ದು, ಸರ್ಕಾರಿ ಆಸ್ತಿಯನ್ನು ರಕ್ಷಿಸುವ ಉದ್ದೇಶವನ್ನು ಹೊಂದಿವೆ ಎಂದು ಸಮರ್ಥಿಸಿಕೊಂಡಿದೆ. ಆದಾಗ್ಯೂ, ಸೀತಾಪುರದ ಸ್ಥಳೀಯ ಮುಸ್ಲಿಮರಿಗೆ, ಬುಲ್ಡೋಜರ್ ಕಾರ್ಯಾಚರಣೆಯು ಪರಂಪರೆ ಮತ್ತು ಜೀವನೋಪಾಯ ಎರಡರ ನೋವಿನ ನಷ್ಟವನ್ನು ಪ್ರತಿನಿಧಿಸುತ್ತದೆ.

ಇಲ್ಲಿಯವರೆಗೆ…

ಉತ್ತರ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಬುಲ್ಡೋಜರ್ ಕಾರ್ಯಾಚರಣೆಗಳು ಸರ್ಕಾರದ ಪ್ರಮುಖ ಕಾರ್ಯತಂತ್ರದ ಭಾಗವಾಗಿ ಮಾರ್ಪಟ್ಟಿವೆ. ಈ ಕಾರ್ಯಾಚರಣೆಗಳನ್ನು ಮುಖ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಸರ್ಕಾರಿ ಆಸ್ತಿಗಳನ್ನು ಅಕ್ರಮ ಒತ್ತುವರಿಗಳಿಂದ ಮುಕ್ತಗೊಳಿಸಲು ನಡೆಸಲಾಗುತ್ತಿದೆ ಎಂದು ಸರಕಾರ ಹೇಳಿಕೊಳ್ಳುತ್ತಿದೆ. ಸೀತಾಪುರದ ಮಹ್ಮದಾಬಾದ್‌ನಲ್ಲಿ ನಡೆದ ಘಟನೆಯು ಈ ದೊಡ್ಡ ಅಭಿಯಾನದ ಒಂದು ಭಾಗವಾಗಿದೆ. ಈ ಸಂದರ್ಭದಲ್ಲಿ, ದಶಕಗಳಿಂದ ಇದ್ದ ಮಜಾರ್ ಮತ್ತು ಅಂಗಡಿಗಳನ್ನು ಅಕ್ರಮ ಒತ್ತುವರಿ ಎಂದು ಕೆಡವಲಾಗಿದೆ. ಸರ್ಕಾರಿ ಭೂಮಿಯ ಮೇಲೆ ನಿರ್ಮಿಸಲಾದ ಈ ಕಟ್ಟಡಗಳನ್ನು ತೆರವುಗೊಳಿಸುವುದು ಅಗತ್ಯ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಗಳ ಹಿಂದಿನ ಉದ್ದೇಶಗಳು ಬಹುಮುಖಿಯಾಗಿವೆ. ಮೊದಲನೆಯದಾಗಿ, ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಆಸ್ತಿಗಳನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸಲಾಗುತ್ತದೆ. ಇದು ವಿವಾದಕ್ಕೆ ಕಾರಣವಾಗಿದೆ. ಎರಡನೆಯದಾಗಿ, ಸರ್ಕಾರಿ ಭೂಮಿ, ನದಿ ಪಾತ್ರಗಳು, ಅರಣ್ಯ ಪ್ರದೇಶಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸಲು ಈ ಕಾರ್ಯಾಚರಣೆಗಳು ನಡೆಯುತ್ತವೆ. ಇಂತಹ ಕ್ರಮಗಳಿಂದ ಸರ್ಕಾರಿ ಭೂಮಿಯನ್ನು ರಕ್ಷಿಸುವುದು ಮತ್ತು ಅದನ್ನು ಸಾರ್ವಜನಿಕ ಉಪಯೋಗಕ್ಕೆ ಲಭ್ಯವಾಗುವಂತೆ ಮಾಡುವುದು ಉದ್ದೇಶ ಎಂದು ಸರಕಾರ ಹೇಳುತ್ತಿದೆ. ಮೂರನೆಯದಾಗಿ, ಇತ್ತೀಚೆಗೆ ಧಾರ್ಮಿಕ ಸ್ಥಳಗಳೂ ಸೇರಿದಂತೆ ಅನಧಿಕೃತವಾಗಿ ನಿರ್ಮಿಸಲಾದ ಕಟ್ಟಡಗಳನ್ನೂ ತೆರವುಗೊಳಿಸಲಾಗುತ್ತಿದೆ. ನೂರಾರು ಮಸೀದಿಗಳು, ಮದರಸಾಗಳು ಮತ್ತು ಮಜಾರ್‌ಗಳನ್ನು ಈ ರೀತಿ ತೆರವುಗೊಳಿಸಲಾಗಿದೆ. ಇದು ‘ಆಯ್ದ ಗುರಿ’ ಎಂಬ ಆರೋಪಗಳು ಕೇಳಿಬರುತ್ತಿವೆ.

ಮಾಧ್ಯಮ ವರದಿಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ ನೂರಾರು ಬುಲ್ಡೋಜರ್ ಕಾರ್ಯಾಚರಣೆಗಳು ನಡೆದಿವೆ. 350ಕ್ಕೂ ಹೆಚ್ಚು ಧಾರ್ಮಿಕ ಕಟ್ಟಡಗಳನ್ನು (ಮಸೀದಿಗಳು, ಮದರಸಾಗಳು ಮತ್ತು ಮಜಾರ್‌ಗಳು ಸೇರಿದಂತೆ) ಗುರುತಿಸಿ ಅವುಗಳ ವಿರುದ್ಧ ಸರಕಾರ ಕ್ರಮ ಕೈಗೊಂಡಿದೆ. ಈ ಕ್ರಮಗಳು ಕಾನೂನುಬಾಹಿರ ನಿರ್ಮಾಣಗಳನ್ನು ತೆರವುಗೊಳಿಸುವ ಗುರಿ ಹೊಂದಿದ್ದರೂ, ಇದು ಜನಸಾಮಾನ್ಯರ ಮೇಲೆ, ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಗಂಭೀರ ಪರಿಣಾಮಗಳನ್ನು ಬೀರಿವೆ. ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವದ ಸ್ಥಳಗಳನ್ನು ಕೆಡವಿರುವುದು ಭಾವನಾತ್ಮಕ ನೋವು ಮತ್ತು ಕೋಮು ಸೌಹಾರ್ದಕ್ಕೆ ಧಕ್ಕೆ ತಂದಿದೆ ಎಂದು ವಿಮರ್ಶಕರು ಆರೋಪಿಸಿದ್ದಾರೆ.

ಸೀತಾಪುರದಲ್ಲಿ ನಡೆದಂತಹ ಪ್ರತಿಯೊಂದು ಕಾರ್ಯಾಚರಣೆಯೂ ಕಾನೂನು ಪಾಲನೆ ಮತ್ತು ಧಾರ್ಮಿಕ ಭಾವನೆಗಳ ನಡುವಿನ ಉದ್ವಿಗ್ನತೆಯನ್ನು ಎತ್ತಿ ತೋರಿಸುತ್ತಿವೆ. ಈ ಕಾರಣಕ್ಕಾಗಿಯೇ ಬುಲ್ಡೋಜರ್ ರಾಜಕೀಯವು ರಾಷ್ಟ್ರಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಅಸ್ಸಾಂ ಮುಖ್ಯಮಂತ್ರಿಯಿಂದ  ಬರಾಕ್ ವ್ಯಾಲಿಯ ಅರಣ್ಯ ಪ್ರದೇಶಗಳಲ್ಲಿ ಮುಸ್ಲಿಂ ‘ಒತ್ತುವರಿಗಳ’ ತೆರವುಗೊಳಿಸಲು ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...