Homeಮುಖಪುಟಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ...

ಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ ಏಜೆನ್ಸಿ

- Advertisement -
- Advertisement -

ಉತ್ತರ ಪ್ರದೇಶದ ಉದ್ಯಮಿ ಪಿಯೂಷ್ ಜೈನ್ ಮೇಲಿನ ದಾಳಿಗೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ. ಬಿಜೆಪಿ, ಸಮಾಜವಾದಿ ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸುತ್ತಿವೆ. ಇದಕ್ಕೆ ಸ್ಪಷ್ಟನೆ ನೀಡಿರುವ ಏಜೆನ್ಸಿಯ ಮೂಲಗಳು, ಇದು ತಪ್ಪಾಗಿ ನಡೆದ ದಾಳಿ ಪ್ರಕರಣವಲ್ಲ ಎಂದಿವೆ.

ಜಿಎಸ್‌ಟಿ ವಂಚನೆಗಳ ತನಿಖೆ ನಡೆಸುತ್ತಿರುವ ಏಜೆನ್ಸಿಯು ಉದ್ಯಮಿ ಪಿಯೂಷ್ ಜೈನ್ ಅವರ ಮನೆಯಿಂದ ಲೆಕ್ಕಕ್ಕೆ ಸಿಗದ ಹಣದ ರಾಶಿಯನ್ನು ಪತ್ತೆಹಚ್ಚಿದೆ. ಆದಾಯ ತೆರಿಗೆ ಇಲಾಖೆ ಸುಗಂಧ ದ್ರವ್ಯದ ಉದ್ಯಮಿ ಪಿಯೂಷ್ ಜೈನ್ ಅವರ ಮೇಲೆ ನಡೆಸಿದ ದಾಳಿಯಲ್ಲಿ 200 ಕೋಟಿ ರೂ.ಗೂ ಹೆಚ್ಚು ನಗದು ಮತ್ತು ದೊಡ್ಡ ಪ್ರಮಾಣದ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದೆ.

ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇದು ಯಾರ ಮೇಲೋ ದಾಳಿ ನಡೆಸಲು ಹೋಗಿ ಮತ್ತೊಬ್ಬರ ಮೇಲೆ ನಡೆಸಿರುವ ದಾಳಿಯಲ್ಲ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: 5 ನೇ ದಿನವೂ ಮುಂದುವರೆದ ಐಟಿ ದಾಳಿ; 200 ಕೋಟಿ ರೂ. ನಗದು ವಶಕ್ಕೆ!

ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದ ನಡುವೆ ಈ ದಾಳಿ ಕೂಡ ರಾಜಕೀಯ ನಾಯಕರಿಗೆ ವಿಪಕ್ಷಗಳ ವಿರುದ್ಧ ಬಳಸಲು ದಾಳವಾಗಿದೆ. ಬಿಜೆಪಿ ಮತ್ತು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ರ್‍ಯಾಲಿಗಳ ಭಾಷಣಗಳಲ್ಲಿ ಈ ವಿಷಯ ಮುಖ್ಯವಾಗುತ್ತಿದೆ.

ನಿನ್ನೆ ಕಾನ್ಪುರದಲ್ಲಿ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, “ನೋಟು ತುಂಬಿದ ಬಾಕ್ಸ್‌ಗಳು ಹೊರಬಂದಿವೆ. ಕಾನ್ಪುರದ ಜನರು ವ್ಯಾಪಾರ ಮತ್ತು ವ್ಯಾಪಾರವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. 2017 ರ ಮೊದಲು ಅವರು ಉತ್ತರದಾದ್ಯಂತ ಎರಚಿದ್ದ ಭ್ರಷ್ಟಾಚಾರದ ಸುಗಂಧ ದ್ರವ್ಯ ಇದು” ಎಂದು ಆರೋಪಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಅಖಿಲೇಶ್ ಯಾದವ್, ’ಬಿಜೆಪಿಯು ಉದ್ಯಮಿ ಪಿಯೂಷ್ ಜೈನ್ ಅವರನ್ನು ಸಮಾಜವಾದಿ ಪಕ್ಷದ ಪುಷ್ಪರಾಜ್ ಜೈನ್ ಅವರು ಎಂದು ಗೊಂದಲ ಮಾಡಿಕೊಂಡಿದೆ. ತಮ್ಮದೆ ಉದ್ಯಮಿ ಮೇಲೆ ತಪ್ಪಾಗಿ ದಾಳಿ ನಡೆಸಿದೆ’ ಎಂದು ಹೇಳಿದ್ದಾರೆ.

ಇವರ ರಾಜಕೀಯ ಕೆಸರೆರಚಾಟದ ಮಧ್ಯೆ ಬಂದಿರುವ ಕಾಂಗ್ರೆಸ್ ನಾಯಕ ಪಿ ಚಿದಂಬರಂ, “ಈ ಕಾಮಿಡಿ ಇಲ್ಲಿಗೆ ಮುಗಿಯುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಬಿಜೆಪಿ ಮತ್ತು ಎಸ್‌ಪಿ ನಡುವೆ ಹೆಚ್ಚಿನ ಆರೋಪಗಳು ಹೆಚ್ಚಾದಹಾಗೆ ಇನ್ನಷ್ಟು ಪಾತ್ರಗಳು ಹೊರಹೊಮ್ಮುತ್ತವೆ” ಎಂದಿದ್ದಾರೆ.


ಇದನ್ನೂ ಓದಿ: ‘ಪಶ್ಚಾತ್ತಾಪವಿಲ್ಲ’: ಮಹಾತ್ಮ ಗಾಂಧಿ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಳಿಚರಣ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...