Homeಮುಖಪುಟಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ...

ಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ ಏಜೆನ್ಸಿ

- Advertisement -
- Advertisement -

ಉತ್ತರ ಪ್ರದೇಶದ ಉದ್ಯಮಿ ಪಿಯೂಷ್ ಜೈನ್ ಮೇಲಿನ ದಾಳಿಗೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ. ಬಿಜೆಪಿ, ಸಮಾಜವಾದಿ ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸುತ್ತಿವೆ. ಇದಕ್ಕೆ ಸ್ಪಷ್ಟನೆ ನೀಡಿರುವ ಏಜೆನ್ಸಿಯ ಮೂಲಗಳು, ಇದು ತಪ್ಪಾಗಿ ನಡೆದ ದಾಳಿ ಪ್ರಕರಣವಲ್ಲ ಎಂದಿವೆ.

ಜಿಎಸ್‌ಟಿ ವಂಚನೆಗಳ ತನಿಖೆ ನಡೆಸುತ್ತಿರುವ ಏಜೆನ್ಸಿಯು ಉದ್ಯಮಿ ಪಿಯೂಷ್ ಜೈನ್ ಅವರ ಮನೆಯಿಂದ ಲೆಕ್ಕಕ್ಕೆ ಸಿಗದ ಹಣದ ರಾಶಿಯನ್ನು ಪತ್ತೆಹಚ್ಚಿದೆ. ಆದಾಯ ತೆರಿಗೆ ಇಲಾಖೆ ಸುಗಂಧ ದ್ರವ್ಯದ ಉದ್ಯಮಿ ಪಿಯೂಷ್ ಜೈನ್ ಅವರ ಮೇಲೆ ನಡೆಸಿದ ದಾಳಿಯಲ್ಲಿ 200 ಕೋಟಿ ರೂ.ಗೂ ಹೆಚ್ಚು ನಗದು ಮತ್ತು ದೊಡ್ಡ ಪ್ರಮಾಣದ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದೆ.

ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇದು ಯಾರ ಮೇಲೋ ದಾಳಿ ನಡೆಸಲು ಹೋಗಿ ಮತ್ತೊಬ್ಬರ ಮೇಲೆ ನಡೆಸಿರುವ ದಾಳಿಯಲ್ಲ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: 5 ನೇ ದಿನವೂ ಮುಂದುವರೆದ ಐಟಿ ದಾಳಿ; 200 ಕೋಟಿ ರೂ. ನಗದು ವಶಕ್ಕೆ!

ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದ ನಡುವೆ ಈ ದಾಳಿ ಕೂಡ ರಾಜಕೀಯ ನಾಯಕರಿಗೆ ವಿಪಕ್ಷಗಳ ವಿರುದ್ಧ ಬಳಸಲು ದಾಳವಾಗಿದೆ. ಬಿಜೆಪಿ ಮತ್ತು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ರ್‍ಯಾಲಿಗಳ ಭಾಷಣಗಳಲ್ಲಿ ಈ ವಿಷಯ ಮುಖ್ಯವಾಗುತ್ತಿದೆ.

ನಿನ್ನೆ ಕಾನ್ಪುರದಲ್ಲಿ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, “ನೋಟು ತುಂಬಿದ ಬಾಕ್ಸ್‌ಗಳು ಹೊರಬಂದಿವೆ. ಕಾನ್ಪುರದ ಜನರು ವ್ಯಾಪಾರ ಮತ್ತು ವ್ಯಾಪಾರವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. 2017 ರ ಮೊದಲು ಅವರು ಉತ್ತರದಾದ್ಯಂತ ಎರಚಿದ್ದ ಭ್ರಷ್ಟಾಚಾರದ ಸುಗಂಧ ದ್ರವ್ಯ ಇದು” ಎಂದು ಆರೋಪಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಅಖಿಲೇಶ್ ಯಾದವ್, ’ಬಿಜೆಪಿಯು ಉದ್ಯಮಿ ಪಿಯೂಷ್ ಜೈನ್ ಅವರನ್ನು ಸಮಾಜವಾದಿ ಪಕ್ಷದ ಪುಷ್ಪರಾಜ್ ಜೈನ್ ಅವರು ಎಂದು ಗೊಂದಲ ಮಾಡಿಕೊಂಡಿದೆ. ತಮ್ಮದೆ ಉದ್ಯಮಿ ಮೇಲೆ ತಪ್ಪಾಗಿ ದಾಳಿ ನಡೆಸಿದೆ’ ಎಂದು ಹೇಳಿದ್ದಾರೆ.

ಇವರ ರಾಜಕೀಯ ಕೆಸರೆರಚಾಟದ ಮಧ್ಯೆ ಬಂದಿರುವ ಕಾಂಗ್ರೆಸ್ ನಾಯಕ ಪಿ ಚಿದಂಬರಂ, “ಈ ಕಾಮಿಡಿ ಇಲ್ಲಿಗೆ ಮುಗಿಯುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಬಿಜೆಪಿ ಮತ್ತು ಎಸ್‌ಪಿ ನಡುವೆ ಹೆಚ್ಚಿನ ಆರೋಪಗಳು ಹೆಚ್ಚಾದಹಾಗೆ ಇನ್ನಷ್ಟು ಪಾತ್ರಗಳು ಹೊರಹೊಮ್ಮುತ್ತವೆ” ಎಂದಿದ್ದಾರೆ.


ಇದನ್ನೂ ಓದಿ: ‘ಪಶ್ಚಾತ್ತಾಪವಿಲ್ಲ’: ಮಹಾತ್ಮ ಗಾಂಧಿ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಳಿಚರಣ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...