ಉತ್ತರ ಪ್ರದೇಶದಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿದ್ದೇವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಎರಡು ದಿನಗಳ ನಂತರ ಅಖಿಲೇಶ್ ಯಾದವ್ ಅವರು ಗುರುವಾರ ಈ ಹೇಳಿಕೆ ನೀಡಿದ್ದಾರೆ.ಯುಪಿ ಉಪಚುನಾವಣೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸಮಾಜವಾದಿ ಪಕ್ಷವು ರಾಜ್ಯದ ಆರು ಉಪಚುನಾವಣೆ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಒಂದು ದಿನದ ನಂತರ ಅಖಿಲೇಶ್ ಅವರು ಈ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟ ಅಖಂಡವಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಉಪಚುನಾವಣೆಯ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.
ಇದನ್ನೂ ಓದಿ: ಬೆಂಗಳೂರು | ಮಹಿಳೆಗೆ ಆ್ಯಸಿಡ್ ಎರಚುವ ಬೆದರಿಕೆ : ಆರೋಪಿ ಕೆಲಸದಿಂದ ವಜಾ, ಪ್ರಕರಣ ದಾಖಲು
ರಾಜ್ಯದ 10 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಒಂಬತ್ತು ಸ್ಥಾನಗಳು ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ತಮ್ಮ ಶಾಸಕರು ಸಂಸದರಾಗಿ ಆಯ್ಕೆಯಾದ ನಂತರ ತೆರವಾದ ಕ್ಷೇತ್ರಗಳಾಗಿವೆ. ಉಳಿದ ಒಂದು ಕ್ಷೇತ್ರವಾದ ಸಿಸಮಾವು ಕ್ಷೇತ್ರದ ಹಾಲಿ ಶಾಸಕ ಇರ್ಫಾನ್ ಸೋಲಂಕಿ ಅವರನ್ನು ಬೆಂಕಿ ಹಚ್ಚಿದ ಪ್ರಕರಣದಲ್ಲಿ ದೋಷಿ ಎಂದು ಅನರ್ಹಗೊಳಿಸಿದ್ದರಿಂದ ಅಲ್ಲಿ ಉಪಚುನಾವಣೆ ನಡೆಯುತ್ತಿದೆ.
ಬುಧವಾರದಂದು ಸಮಾಜವಾದಿ ಪಕ್ಷವು ಕರ್ಹಾಲ್ ಕ್ಷೇತ್ರದಿಂದ ತೇಜ್ ಪ್ರತಾಪ್ ಸಿಂಗ್ ಯಾದವ್, ಕಟೆಹ್ರಿಯಿಂದ ಶೋಭಾವತಿ ವರ್ಮಾ, ಸಿಸಾಮೌದಿಂದ ನಸೀಮ್ ಸೋಲಂಕಿ, ಮಿಲ್ಕಿಪುರದಿಂದ ಅಜೀತ್ ಪ್ರಸಾದ್, ಫುಲ್ಪುರದಿಂದ ಮುಸ್ತಫಾ ಸಿದ್ದಿಕಿ ಮತ್ತು ಮಜ್ವಾದಿಂದ ಜ್ಯೋತಿ ಬಿಂದ್ ಅವರನ್ನು ಅಭ್ಯರ್ಥಿಯನ್ನಾಗಿ ಪಟ್ಟಿ ಮಾಡಿದೆ.ಯುಪಿ ಉಪಚುನಾವಣೆ
ಈ ಘೋಷಣೆಯ ನಂತರ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅವಿನಾಶ್ ಪಾಂಡೆ ಅವರು ಈ ನಿರ್ಧಾರದ ಬಗ್ಗೆ ಸಮಾಜವಾದಿ ಪಕ್ಷವು ನಮಗೆ ತಿಳಿಸಿಲ್ಲ ಎಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಉಪ ಚುನಾವಣೆ ಬಗ್ಗೆ ಇಂಡಿಯಾ ಒಕ್ಕೂಟದ ಸಮನ್ವಯ ಸಮಿತಿಯೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂಓದಿ: ಬೈರುತ್ ಮೇಲೆ ಮುಂದುವರಿದ ಇಸ್ರೇಲ್ ವೈಮಾನಿಕ ದಾಳಿ; ಕನಿಷ್ಠ 22 ಮಂದಿ ಸಾವು, ಯುಎನ್ ಶಾಂತಿಪಾಲಕರ ಮೇಲೆ ಗುಂಡು!
“ಸೀಟುಗಳ ಘೋಷಣೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ, ಇಂಡಿಯಾ ಒಕ್ಕೂಟದ ಸಮನ್ವಯ ಸಮಿತಿಯು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಅದನ್ನು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು ಒಪ್ಪಿಕೊಳ್ಳುತ್ತದೆ” ಎಂದು ಪಾಂಡೆ ಹೇಳಿದ್ದಾರೆ.
ಇತ್ತಿಚೆಗೆ ನಡೆದ 90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಕಾಂಗ್ರೆಸ್ 37 ಸ್ಥಾನಗಳನ್ನು ಗೆದ್ದಿದೆ. 2019 ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 40 ಸ್ಥಾನಗಳಷ್ಟೆ ಗೆದ್ದಿತ್ತು.
ಆದರೆ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಾಜ್ಯದ 80 ಸ್ಥಾನಗಳ ಪೈಕಿ 43 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.
2019 ರ ಲೋಕಸಭೆ ಚುನಾವಣೆಯಲ್ಲಿ 62 ಸಂಸದೀಯ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, 2024 ಲೋಕಸಭೆಯಲ್ಲಿ ಕೇಲವ 33 ಕ್ಷೇತ್ರಗಳಲ್ಲಿ ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಪಕ್ಷದ ಮತಗಳ ಪ್ರಮಾಣವು 2019 ರಲ್ಲಿ ಸಾರ್ವಕಾಲಿಕ ಗರಿಷ್ಠವಾದ 49.9% ರಿಂದ 41.3% ಕ್ಕೆ ಇಳಿದಿದೆ.
ವಿಡಿಯೊ ನೋಡಿ: ಇದ್ರೀಸ್ ಪಾಷರನ್ನು ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಲಿ; ಸ್ಥಳೀಯ ನಿವಾಸಿಗಳ ಆಗ್ರಹ


