Homeಮುಖಪುಟಉತ್ತರ ಪ್ರದೇಶ ಉಪಚುನಾವಣೆ | ಕಾಂಗ್ರೆಸ್ ಜೊತೆ ಒಗ್ಗಟ್ಟಿನ ಹೋರಾಟ ಎಂದ ಅಖಿಲೇಶ್; ಏಕಾಂಗಿಯಾಗಿ ಅಭ್ಯರ್ಥಿ...

ಉತ್ತರ ಪ್ರದೇಶ ಉಪಚುನಾವಣೆ | ಕಾಂಗ್ರೆಸ್ ಜೊತೆ ಒಗ್ಗಟ್ಟಿನ ಹೋರಾಟ ಎಂದ ಅಖಿಲೇಶ್; ಏಕಾಂಗಿಯಾಗಿ ಅಭ್ಯರ್ಥಿ ಘೋಷಣೆ!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿದ್ದೇವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಎರಡು ದಿನಗಳ ನಂತರ ಅಖಿಲೇಶ್ ಯಾದವ್ ಅವರು ಗುರುವಾರ ಈ ಹೇಳಿಕೆ ನೀಡಿದ್ದಾರೆ.ಯುಪಿ ಉಪಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಮಾಜವಾದಿ ಪಕ್ಷವು ರಾಜ್ಯದ ಆರು ಉಪಚುನಾವಣೆ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಒಂದು ದಿನದ ನಂತರ ಅಖಿಲೇಶ್‌ ಅವರು ಈ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟ ಅಖಂಡವಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಉಪಚುನಾವಣೆಯ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.

ಇದನ್ನೂ ಓದಿ: ಬೆಂಗಳೂರು | ಮಹಿಳೆಗೆ ಆ್ಯಸಿಡ್ ಎರಚುವ ಬೆದರಿಕೆ : ಆರೋಪಿ ಕೆಲಸದಿಂದ ವಜಾ, ಪ್ರಕರಣ ದಾಖಲು

ರಾಜ್ಯದ 10 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಒಂಬತ್ತು ಸ್ಥಾನಗಳು ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ತಮ್ಮ ಶಾಸಕರು ಸಂಸದರಾಗಿ ಆಯ್ಕೆಯಾದ ನಂತರ ತೆರವಾದ ಕ್ಷೇತ್ರಗಳಾಗಿವೆ. ಉಳಿದ ಒಂದು ಕ್ಷೇತ್ರವಾದ ಸಿಸಮಾವು ಕ್ಷೇತ್ರದ ಹಾಲಿ ಶಾಸಕ ಇರ್ಫಾನ್ ಸೋಲಂಕಿ ಅವರನ್ನು ಬೆಂಕಿ ಹಚ್ಚಿದ ಪ್ರಕರಣದಲ್ಲಿ ದೋಷಿ ಎಂದು ಅನರ್ಹಗೊಳಿಸಿದ್ದರಿಂದ ಅಲ್ಲಿ ಉಪಚುನಾವಣೆ ನಡೆಯುತ್ತಿದೆ.

ಬುಧವಾರದಂದು ಸಮಾಜವಾದಿ ಪಕ್ಷವು ಕರ್ಹಾಲ್ ಕ್ಷೇತ್ರದಿಂದ ತೇಜ್ ಪ್ರತಾಪ್ ಸಿಂಗ್ ಯಾದವ್, ಕಟೆಹ್ರಿಯಿಂದ ಶೋಭಾವತಿ ವರ್ಮಾ, ಸಿಸಾಮೌದಿಂದ ನಸೀಮ್ ಸೋಲಂಕಿ, ಮಿಲ್ಕಿಪುರದಿಂದ ಅಜೀತ್ ಪ್ರಸಾದ್, ಫುಲ್ಪುರದಿಂದ ಮುಸ್ತಫಾ ಸಿದ್ದಿಕಿ ಮತ್ತು ಮಜ್ವಾದಿಂದ ಜ್ಯೋತಿ ಬಿಂದ್ ಅವರನ್ನು ಅಭ್ಯರ್ಥಿಯನ್ನಾಗಿ ಪಟ್ಟಿ ಮಾಡಿದೆ.ಯುಪಿ ಉಪಚುನಾವಣೆ

ಈ ಘೋಷಣೆಯ ನಂತರ, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅವಿನಾಶ್ ಪಾಂಡೆ ಅವರು ಈ ನಿರ್ಧಾರದ ಬಗ್ಗೆ ಸಮಾಜವಾದಿ ಪಕ್ಷವು ನಮಗೆ ತಿಳಿಸಿಲ್ಲ ಎಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಉಪ ಚುನಾವಣೆ ಬಗ್ಗೆ ಇಂಡಿಯಾ ಒಕ್ಕೂಟದ ಸಮನ್ವಯ ಸಮಿತಿಯೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಬೈರುತ್‌ ಮೇಲೆ ಮುಂದುವರಿದ ಇಸ್ರೇಲ್ ವೈಮಾನಿಕ ದಾಳಿ; ಕನಿಷ್ಠ 22 ಮಂದಿ ಸಾವು, ಯುಎನ್ ಶಾಂತಿಪಾಲಕರ ಮೇಲೆ ಗುಂಡು!

“ಸೀಟುಗಳ ಘೋಷಣೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ, ಇಂಡಿಯಾ ಒಕ್ಕೂಟದ ಸಮನ್ವಯ ಸಮಿತಿಯು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಅದನ್ನು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು ಒಪ್ಪಿಕೊಳ್ಳುತ್ತದೆ” ಎಂದು ಪಾಂಡೆ ಹೇಳಿದ್ದಾರೆ.

ಇತ್ತಿಚೆಗೆ ನಡೆದ 90 ಸದಸ್ಯ ಬಲದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಕಾಂಗ್ರೆಸ್ 37 ಸ್ಥಾನಗಳನ್ನು ಗೆದ್ದಿದೆ. 2019 ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 40 ಸ್ಥಾನಗಳಷ್ಟೆ ಗೆದ್ದಿತ್ತು.

ಆದರೆ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಾಜ್ಯದ 80 ಸ್ಥಾನಗಳ ಪೈಕಿ 43 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

2019 ರ ಲೋಕಸಭೆ ಚುನಾವಣೆಯಲ್ಲಿ 62 ಸಂಸದೀಯ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, 2024 ಲೋಕಸಭೆಯಲ್ಲಿ ಕೇಲವ 33 ಕ್ಷೇತ್ರಗಳಲ್ಲಿ ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಪಕ್ಷದ ಮತಗಳ ಪ್ರಮಾಣವು 2019 ರಲ್ಲಿ ಸಾರ್ವಕಾಲಿಕ ಗರಿಷ್ಠವಾದ 49.9% ರಿಂದ 41.3% ಕ್ಕೆ ಇಳಿದಿದೆ.

ವಿಡಿಯೊ ನೋಡಿ: ಇದ್ರೀಸ್ ಪಾಷರನ್ನು ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಲಿ; ಸ್ಥಳೀಯ ನಿವಾಸಿಗಳ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...