Homeಮುಖಪುಟಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ...

ಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ 2!

- Advertisement -
- Advertisement -

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಆಡಳಿತರೂಢ ಬಿಜೆಪಿ 6 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಒಂದು ಕ್ಷೇತ್ರ ಬಿಜೆಪಿಯ ಮಿತ್ರ ಪಕ್ಷವಾದ ರಾಷ್ಟ್ರೀಯ ಲೋಕದಳ ತನ್ನದಾಗಿಸಿದೆ. ಉಳಿದ ಎರಡು ಕ್ಷೇತ್ರಗಳಲ್ಲಿ ರಾಜ್ಯ ಪ್ರಮುಖ ವಿಪಕ್ಷವಾದ ಸಮಾಜವಾದಿ ಪಕ್ಷ ಗೆದ್ದುಕೊಂಡಿದೆ. ಉತ್ತರ ಪ್ರದೇಶ

ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದ ಶಾಸಕರಾಗಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂಸದರಾಗಿ ಆಯ್ಕೆಯಾದ ನಂತರ ಕ್ಷೇತ್ರವೂ ತೆರವುಗೊಂಡಿತ್ತು. ಇದೀಗ ಅವರ ಸೋದರಳಿಯ ತೇಜ್ ಪ್ರತಾಪ್ ಸಿಂಗ್ ಅವರು 1,04,304 ಮತಗಳನ್ನು ಪಡೆದು 14,725) ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. ಸಿಸಮಾವು ಕ್ಷೇತ್ರದಲ್ಲಿ ಕೂಡಾ ಸಮಾಜವಾದಿ ಪಕ್ಷವೂ ಗೆಲುವು ಕಂಡಿದ್ದು ಪಕ್ಷದ ಅಭ್ಯರ್ಥಿ ನಸೀಮ್ ಸೋಲಂಕಿ ಅವರು 69,714 ಮತಗಳನ್ನು ಪಡೆದು 8,564 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿ ಒಟ್ಟು 6 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದ್ದು, ಕುಂದರ್ಕಿಯಲ್ಲಿ ಪಕ್ಷದ ಅಭ್ಯರ್ಥಿಯಾದ ರಾಮ್‌ವೀರ್ ಸಿಂಗ್, ಗಾಜಿಯಾಬಾದ್‌ನಲ್ಲಿ ಸಂಜೀವ್ ಶರ್ಮಾ, ಖೇರ್‌ನಲ್ಲಿ ಸುರೇಂದರ್ ದಿಲೇರ್, ಫೂಲ್ಪುರ್‌ನಲ್ಲಿ ದೀಪಕ್ ಪಟೇಲ್, ಕತಿಹಾರಿಯಲ್ಲಿ ಧರ್ಮರಾಜ್ ನಿಶಾದ್, ಮಜ್ವಾನ್‌ನಲ್ಲಿ ಸುಚಿಸ್ಮಿತ ಮೌರ್ಯ ಅವರು ಗೆದ್ದಿದ್ದಾರೆ.

ಉಳಿದಂತೆ ಮೀರಾಪುರದಲ್ಲಿ ರಾಷ್ಟ್ರೀಯ ಲೋಕದಳದ ಮಿಥಿಲೇಶ್ ಪಾಲ್ ಅವರು 84,304 ಮತಗಳನ್ನು ಪಡೆದು 30 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದದ್ದಾರೆ. ರಾಷ್ಟ್ರೀಯ ಲೋಕದಳವು ಈ ಹಿಂದೆ ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿಯಲ್ಲಿತ್ತು. ಈ ಮೈತ್ರಿಯನ್ನು ಮುರಿದು ಇತ್ತಿಚೆಗಷ್ಟೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಯನ್ನು ಸೇರಿಕೊಂಡಿತ್ತು.

ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಗೆಲುವಿನ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅದಿತ್ಯನಾಥ್, “ಉತ್ತರ ಪ್ರದೇಶ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಗೆಲುವು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ಯಶಸ್ವಿ ನಾಯಕತ್ವ ಮತ್ತು ಮಾರ್ಗದರ್ಶನದ ಮೇಲೆ ಜನರ ಅಚಲ ನಂಬಿಕೆಗೆ ಸಾಕ್ಷಿಯಾಗಿದೆ. ಈ ಗೆಲುವು ಡಬಲ್ ಇಂಜಿನ್ ಸರ್ಕಾರದ ಭದ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣ ನೀತಿಗಳು ಮತ್ತು ಸಮರ್ಪಿತ ಕಾರ್ಯಕರ್ತರ ದಣಿವರಿಯದ ಕಠಿಣ ಪರಿಶ್ರಮದ ಫಲಿತಾಂಶ.” ಎಂದು ಹೇಳಿದ್ದು, ಗೆಲುವಿಗಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ

ಒಟ್ಟು 9 ಕ್ಷೇತ್ರಗಳ ಉಪ ಚುನಾವಣೆ ಇದ್ದರೂ ಕಾಂಗ್ರೆಸ್ ಯಾವುದೇ ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ಇಂಡಿಯಾ ಮೈತ್ರಿಯ ಮಿತ್ರ ಪಕ್ಷವಾದ ಸಮಾಜವಾದಿ ಪಕ್ಷಕ್ಕೆ ತನ್ನ ಬೆಂಬಲ ಘೋಷಿಸಿತ್ತು.

ಅದಾಗ್ಯೂ, ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಾಜ್ಯದ 80 ಸ್ಥಾನಗಳ ಪೈಕಿ 43 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

2019 ರ ಲೋಕಸಭೆ ಚುನಾವಣೆಯಲ್ಲಿ 62 ಸಂಸದೀಯ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, 2024 ಲೋಕಸಭೆಯಲ್ಲಿ ಕೇಲವ 33 ಕ್ಷೇತ್ರಗಳಲ್ಲಿ ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಪಕ್ಷದ ಮತಗಳ ಪ್ರಮಾಣವು 2019 ರಲ್ಲಿ ಸಾರ್ವಕಾಲಿಕ ಗರಿಷ್ಠವಾದ 49.9% ರಿಂದ 41.3% ಕ್ಕೆ ಇಳಿದಿತ್ತು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...