Homeಮುಖಪುಟಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ...

ಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ 2!

- Advertisement -
- Advertisement -

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಆಡಳಿತರೂಢ ಬಿಜೆಪಿ 6 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಒಂದು ಕ್ಷೇತ್ರ ಬಿಜೆಪಿಯ ಮಿತ್ರ ಪಕ್ಷವಾದ ರಾಷ್ಟ್ರೀಯ ಲೋಕದಳ ತನ್ನದಾಗಿಸಿದೆ. ಉಳಿದ ಎರಡು ಕ್ಷೇತ್ರಗಳಲ್ಲಿ ರಾಜ್ಯ ಪ್ರಮುಖ ವಿಪಕ್ಷವಾದ ಸಮಾಜವಾದಿ ಪಕ್ಷ ಗೆದ್ದುಕೊಂಡಿದೆ. ಉತ್ತರ ಪ್ರದೇಶ

ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದ ಶಾಸಕರಾಗಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂಸದರಾಗಿ ಆಯ್ಕೆಯಾದ ನಂತರ ಕ್ಷೇತ್ರವೂ ತೆರವುಗೊಂಡಿತ್ತು. ಇದೀಗ ಅವರ ಸೋದರಳಿಯ ತೇಜ್ ಪ್ರತಾಪ್ ಸಿಂಗ್ ಅವರು 1,04,304 ಮತಗಳನ್ನು ಪಡೆದು 14,725) ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. ಸಿಸಮಾವು ಕ್ಷೇತ್ರದಲ್ಲಿ ಕೂಡಾ ಸಮಾಜವಾದಿ ಪಕ್ಷವೂ ಗೆಲುವು ಕಂಡಿದ್ದು ಪಕ್ಷದ ಅಭ್ಯರ್ಥಿ ನಸೀಮ್ ಸೋಲಂಕಿ ಅವರು 69,714 ಮತಗಳನ್ನು ಪಡೆದು 8,564 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿ ಒಟ್ಟು 6 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದ್ದು, ಕುಂದರ್ಕಿಯಲ್ಲಿ ಪಕ್ಷದ ಅಭ್ಯರ್ಥಿಯಾದ ರಾಮ್‌ವೀರ್ ಸಿಂಗ್, ಗಾಜಿಯಾಬಾದ್‌ನಲ್ಲಿ ಸಂಜೀವ್ ಶರ್ಮಾ, ಖೇರ್‌ನಲ್ಲಿ ಸುರೇಂದರ್ ದಿಲೇರ್, ಫೂಲ್ಪುರ್‌ನಲ್ಲಿ ದೀಪಕ್ ಪಟೇಲ್, ಕತಿಹಾರಿಯಲ್ಲಿ ಧರ್ಮರಾಜ್ ನಿಶಾದ್, ಮಜ್ವಾನ್‌ನಲ್ಲಿ ಸುಚಿಸ್ಮಿತ ಮೌರ್ಯ ಅವರು ಗೆದ್ದಿದ್ದಾರೆ.

ಉಳಿದಂತೆ ಮೀರಾಪುರದಲ್ಲಿ ರಾಷ್ಟ್ರೀಯ ಲೋಕದಳದ ಮಿಥಿಲೇಶ್ ಪಾಲ್ ಅವರು 84,304 ಮತಗಳನ್ನು ಪಡೆದು 30 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದದ್ದಾರೆ. ರಾಷ್ಟ್ರೀಯ ಲೋಕದಳವು ಈ ಹಿಂದೆ ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿಯಲ್ಲಿತ್ತು. ಈ ಮೈತ್ರಿಯನ್ನು ಮುರಿದು ಇತ್ತಿಚೆಗಷ್ಟೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಯನ್ನು ಸೇರಿಕೊಂಡಿತ್ತು.

ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಗೆಲುವಿನ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅದಿತ್ಯನಾಥ್, “ಉತ್ತರ ಪ್ರದೇಶ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಗೆಲುವು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ಯಶಸ್ವಿ ನಾಯಕತ್ವ ಮತ್ತು ಮಾರ್ಗದರ್ಶನದ ಮೇಲೆ ಜನರ ಅಚಲ ನಂಬಿಕೆಗೆ ಸಾಕ್ಷಿಯಾಗಿದೆ. ಈ ಗೆಲುವು ಡಬಲ್ ಇಂಜಿನ್ ಸರ್ಕಾರದ ಭದ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣ ನೀತಿಗಳು ಮತ್ತು ಸಮರ್ಪಿತ ಕಾರ್ಯಕರ್ತರ ದಣಿವರಿಯದ ಕಠಿಣ ಪರಿಶ್ರಮದ ಫಲಿತಾಂಶ.” ಎಂದು ಹೇಳಿದ್ದು, ಗೆಲುವಿಗಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ

ಒಟ್ಟು 9 ಕ್ಷೇತ್ರಗಳ ಉಪ ಚುನಾವಣೆ ಇದ್ದರೂ ಕಾಂಗ್ರೆಸ್ ಯಾವುದೇ ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ಇಂಡಿಯಾ ಮೈತ್ರಿಯ ಮಿತ್ರ ಪಕ್ಷವಾದ ಸಮಾಜವಾದಿ ಪಕ್ಷಕ್ಕೆ ತನ್ನ ಬೆಂಬಲ ಘೋಷಿಸಿತ್ತು.

ಅದಾಗ್ಯೂ, ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಾಜ್ಯದ 80 ಸ್ಥಾನಗಳ ಪೈಕಿ 43 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

2019 ರ ಲೋಕಸಭೆ ಚುನಾವಣೆಯಲ್ಲಿ 62 ಸಂಸದೀಯ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, 2024 ಲೋಕಸಭೆಯಲ್ಲಿ ಕೇಲವ 33 ಕ್ಷೇತ್ರಗಳಲ್ಲಿ ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಪಕ್ಷದ ಮತಗಳ ಪ್ರಮಾಣವು 2019 ರಲ್ಲಿ ಸಾರ್ವಕಾಲಿಕ ಗರಿಷ್ಠವಾದ 49.9% ರಿಂದ 41.3% ಕ್ಕೆ ಇಳಿದಿತ್ತು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...