Homeಮುಖಪುಟಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ...

ಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ 2!

- Advertisement -
- Advertisement -

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಆಡಳಿತರೂಢ ಬಿಜೆಪಿ 6 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಒಂದು ಕ್ಷೇತ್ರ ಬಿಜೆಪಿಯ ಮಿತ್ರ ಪಕ್ಷವಾದ ರಾಷ್ಟ್ರೀಯ ಲೋಕದಳ ತನ್ನದಾಗಿಸಿದೆ. ಉಳಿದ ಎರಡು ಕ್ಷೇತ್ರಗಳಲ್ಲಿ ರಾಜ್ಯ ಪ್ರಮುಖ ವಿಪಕ್ಷವಾದ ಸಮಾಜವಾದಿ ಪಕ್ಷ ಗೆದ್ದುಕೊಂಡಿದೆ. ಉತ್ತರ ಪ್ರದೇಶ

ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದ ಶಾಸಕರಾಗಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂಸದರಾಗಿ ಆಯ್ಕೆಯಾದ ನಂತರ ಕ್ಷೇತ್ರವೂ ತೆರವುಗೊಂಡಿತ್ತು. ಇದೀಗ ಅವರ ಸೋದರಳಿಯ ತೇಜ್ ಪ್ರತಾಪ್ ಸಿಂಗ್ ಅವರು 1,04,304 ಮತಗಳನ್ನು ಪಡೆದು 14,725) ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. ಸಿಸಮಾವು ಕ್ಷೇತ್ರದಲ್ಲಿ ಕೂಡಾ ಸಮಾಜವಾದಿ ಪಕ್ಷವೂ ಗೆಲುವು ಕಂಡಿದ್ದು ಪಕ್ಷದ ಅಭ್ಯರ್ಥಿ ನಸೀಮ್ ಸೋಲಂಕಿ ಅವರು 69,714 ಮತಗಳನ್ನು ಪಡೆದು 8,564 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿ ಒಟ್ಟು 6 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದ್ದು, ಕುಂದರ್ಕಿಯಲ್ಲಿ ಪಕ್ಷದ ಅಭ್ಯರ್ಥಿಯಾದ ರಾಮ್‌ವೀರ್ ಸಿಂಗ್, ಗಾಜಿಯಾಬಾದ್‌ನಲ್ಲಿ ಸಂಜೀವ್ ಶರ್ಮಾ, ಖೇರ್‌ನಲ್ಲಿ ಸುರೇಂದರ್ ದಿಲೇರ್, ಫೂಲ್ಪುರ್‌ನಲ್ಲಿ ದೀಪಕ್ ಪಟೇಲ್, ಕತಿಹಾರಿಯಲ್ಲಿ ಧರ್ಮರಾಜ್ ನಿಶಾದ್, ಮಜ್ವಾನ್‌ನಲ್ಲಿ ಸುಚಿಸ್ಮಿತ ಮೌರ್ಯ ಅವರು ಗೆದ್ದಿದ್ದಾರೆ.

ಉಳಿದಂತೆ ಮೀರಾಪುರದಲ್ಲಿ ರಾಷ್ಟ್ರೀಯ ಲೋಕದಳದ ಮಿಥಿಲೇಶ್ ಪಾಲ್ ಅವರು 84,304 ಮತಗಳನ್ನು ಪಡೆದು 30 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದದ್ದಾರೆ. ರಾಷ್ಟ್ರೀಯ ಲೋಕದಳವು ಈ ಹಿಂದೆ ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿಯಲ್ಲಿತ್ತು. ಈ ಮೈತ್ರಿಯನ್ನು ಮುರಿದು ಇತ್ತಿಚೆಗಷ್ಟೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಯನ್ನು ಸೇರಿಕೊಂಡಿತ್ತು.

ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಗೆಲುವಿನ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅದಿತ್ಯನಾಥ್, “ಉತ್ತರ ಪ್ರದೇಶ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಗೆಲುವು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ಯಶಸ್ವಿ ನಾಯಕತ್ವ ಮತ್ತು ಮಾರ್ಗದರ್ಶನದ ಮೇಲೆ ಜನರ ಅಚಲ ನಂಬಿಕೆಗೆ ಸಾಕ್ಷಿಯಾಗಿದೆ. ಈ ಗೆಲುವು ಡಬಲ್ ಇಂಜಿನ್ ಸರ್ಕಾರದ ಭದ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣ ನೀತಿಗಳು ಮತ್ತು ಸಮರ್ಪಿತ ಕಾರ್ಯಕರ್ತರ ದಣಿವರಿಯದ ಕಠಿಣ ಪರಿಶ್ರಮದ ಫಲಿತಾಂಶ.” ಎಂದು ಹೇಳಿದ್ದು, ಗೆಲುವಿಗಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ

ಒಟ್ಟು 9 ಕ್ಷೇತ್ರಗಳ ಉಪ ಚುನಾವಣೆ ಇದ್ದರೂ ಕಾಂಗ್ರೆಸ್ ಯಾವುದೇ ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ಇಂಡಿಯಾ ಮೈತ್ರಿಯ ಮಿತ್ರ ಪಕ್ಷವಾದ ಸಮಾಜವಾದಿ ಪಕ್ಷಕ್ಕೆ ತನ್ನ ಬೆಂಬಲ ಘೋಷಿಸಿತ್ತು.

ಅದಾಗ್ಯೂ, ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಾಜ್ಯದ 80 ಸ್ಥಾನಗಳ ಪೈಕಿ 43 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

2019 ರ ಲೋಕಸಭೆ ಚುನಾವಣೆಯಲ್ಲಿ 62 ಸಂಸದೀಯ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, 2024 ಲೋಕಸಭೆಯಲ್ಲಿ ಕೇಲವ 33 ಕ್ಷೇತ್ರಗಳಲ್ಲಿ ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಪಕ್ಷದ ಮತಗಳ ಪ್ರಮಾಣವು 2019 ರಲ್ಲಿ ಸಾರ್ವಕಾಲಿಕ ಗರಿಷ್ಠವಾದ 49.9% ರಿಂದ 41.3% ಕ್ಕೆ ಇಳಿದಿತ್ತು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...