Homeಮುಖಪುಟಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ...

ಉತ್ತರ ಪ್ರದೇಶ ಉಪ ಚುನಾವಣೆ | 9ರಲ್ಲಿ 7 ಕ್ಷೇತ್ರಗಳು ಬಿಜೆಪಿಯ ಎನ್‌ಡಿಎ ಪಾಲು; ಎಸ್‌ಪಿಗೆ 2!

- Advertisement -
- Advertisement -

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಆಡಳಿತರೂಢ ಬಿಜೆಪಿ 6 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಒಂದು ಕ್ಷೇತ್ರ ಬಿಜೆಪಿಯ ಮಿತ್ರ ಪಕ್ಷವಾದ ರಾಷ್ಟ್ರೀಯ ಲೋಕದಳ ತನ್ನದಾಗಿಸಿದೆ. ಉಳಿದ ಎರಡು ಕ್ಷೇತ್ರಗಳಲ್ಲಿ ರಾಜ್ಯ ಪ್ರಮುಖ ವಿಪಕ್ಷವಾದ ಸಮಾಜವಾದಿ ಪಕ್ಷ ಗೆದ್ದುಕೊಂಡಿದೆ. ಉತ್ತರ ಪ್ರದೇಶ

ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದ ಶಾಸಕರಾಗಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂಸದರಾಗಿ ಆಯ್ಕೆಯಾದ ನಂತರ ಕ್ಷೇತ್ರವೂ ತೆರವುಗೊಂಡಿತ್ತು. ಇದೀಗ ಅವರ ಸೋದರಳಿಯ ತೇಜ್ ಪ್ರತಾಪ್ ಸಿಂಗ್ ಅವರು 1,04,304 ಮತಗಳನ್ನು ಪಡೆದು 14,725) ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. ಸಿಸಮಾವು ಕ್ಷೇತ್ರದಲ್ಲಿ ಕೂಡಾ ಸಮಾಜವಾದಿ ಪಕ್ಷವೂ ಗೆಲುವು ಕಂಡಿದ್ದು ಪಕ್ಷದ ಅಭ್ಯರ್ಥಿ ನಸೀಮ್ ಸೋಲಂಕಿ ಅವರು 69,714 ಮತಗಳನ್ನು ಪಡೆದು 8,564 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿ ಒಟ್ಟು 6 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದ್ದು, ಕುಂದರ್ಕಿಯಲ್ಲಿ ಪಕ್ಷದ ಅಭ್ಯರ್ಥಿಯಾದ ರಾಮ್‌ವೀರ್ ಸಿಂಗ್, ಗಾಜಿಯಾಬಾದ್‌ನಲ್ಲಿ ಸಂಜೀವ್ ಶರ್ಮಾ, ಖೇರ್‌ನಲ್ಲಿ ಸುರೇಂದರ್ ದಿಲೇರ್, ಫೂಲ್ಪುರ್‌ನಲ್ಲಿ ದೀಪಕ್ ಪಟೇಲ್, ಕತಿಹಾರಿಯಲ್ಲಿ ಧರ್ಮರಾಜ್ ನಿಶಾದ್, ಮಜ್ವಾನ್‌ನಲ್ಲಿ ಸುಚಿಸ್ಮಿತ ಮೌರ್ಯ ಅವರು ಗೆದ್ದಿದ್ದಾರೆ.

ಉಳಿದಂತೆ ಮೀರಾಪುರದಲ್ಲಿ ರಾಷ್ಟ್ರೀಯ ಲೋಕದಳದ ಮಿಥಿಲೇಶ್ ಪಾಲ್ ಅವರು 84,304 ಮತಗಳನ್ನು ಪಡೆದು 30 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದದ್ದಾರೆ. ರಾಷ್ಟ್ರೀಯ ಲೋಕದಳವು ಈ ಹಿಂದೆ ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿಯಲ್ಲಿತ್ತು. ಈ ಮೈತ್ರಿಯನ್ನು ಮುರಿದು ಇತ್ತಿಚೆಗಷ್ಟೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಯನ್ನು ಸೇರಿಕೊಂಡಿತ್ತು.

ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಗೆಲುವಿನ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅದಿತ್ಯನಾಥ್, “ಉತ್ತರ ಪ್ರದೇಶ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಗೆಲುವು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ಯಶಸ್ವಿ ನಾಯಕತ್ವ ಮತ್ತು ಮಾರ್ಗದರ್ಶನದ ಮೇಲೆ ಜನರ ಅಚಲ ನಂಬಿಕೆಗೆ ಸಾಕ್ಷಿಯಾಗಿದೆ. ಈ ಗೆಲುವು ಡಬಲ್ ಇಂಜಿನ್ ಸರ್ಕಾರದ ಭದ್ರತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣ ನೀತಿಗಳು ಮತ್ತು ಸಮರ್ಪಿತ ಕಾರ್ಯಕರ್ತರ ದಣಿವರಿಯದ ಕಠಿಣ ಪರಿಶ್ರಮದ ಫಲಿತಾಂಶ.” ಎಂದು ಹೇಳಿದ್ದು, ಗೆಲುವಿಗಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ

ಒಟ್ಟು 9 ಕ್ಷೇತ್ರಗಳ ಉಪ ಚುನಾವಣೆ ಇದ್ದರೂ ಕಾಂಗ್ರೆಸ್ ಯಾವುದೇ ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ಇಂಡಿಯಾ ಮೈತ್ರಿಯ ಮಿತ್ರ ಪಕ್ಷವಾದ ಸಮಾಜವಾದಿ ಪಕ್ಷಕ್ಕೆ ತನ್ನ ಬೆಂಬಲ ಘೋಷಿಸಿತ್ತು.

ಅದಾಗ್ಯೂ, ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಾಜ್ಯದ 80 ಸ್ಥಾನಗಳ ಪೈಕಿ 43 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

2019 ರ ಲೋಕಸಭೆ ಚುನಾವಣೆಯಲ್ಲಿ 62 ಸಂಸದೀಯ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, 2024 ಲೋಕಸಭೆಯಲ್ಲಿ ಕೇಲವ 33 ಕ್ಷೇತ್ರಗಳಲ್ಲಿ ಗೆದ್ದಿತ್ತು. ಉತ್ತರ ಪ್ರದೇಶದಲ್ಲಿ ಪಕ್ಷದ ಮತಗಳ ಪ್ರಮಾಣವು 2019 ರಲ್ಲಿ ಸಾರ್ವಕಾಲಿಕ ಗರಿಷ್ಠವಾದ 49.9% ರಿಂದ 41.3% ಕ್ಕೆ ಇಳಿದಿತ್ತು.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...