Homeಮುಖಪುಟಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ...

ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

- Advertisement -
- Advertisement -

ಪತ್ನಿಯ ಜಡೆಹಿಡಿದು ಹೊಲದೆಲ್ಲೆಡೆ ದರದರನೆ ಎಳೆದಾಡಿದ ದುಷ್ಕರ್ಮಿಗಳು

ಉತ್ತರಪ್ರದೇಶದ ಭದೋಹಿ ಜಿಲ್ಲೆಯಲ್ಲಿ ದನ ಮೇಯಿಸುವ ವಿವಾದದ ಹಿನ್ನೆಲೆಯಲ್ಲಿ ದಲಿತ ರೈತ ಮತ್ತು ಅವರ ಪತ್ನಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಊಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಅನೈಚ್ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ದೀಪಕ್ ಎಂಬ ಸಂತ್ರಸ್ತ ದಲಿತನ ದೂರಿನ ಆಧಾರದ ಮೇಲೆ ರಾಜಾರಾಮ್ ಯಾದವ್, ದಿಲಜೀತ್ ಯಾದವ್, ಅರವಿಂದ್ ಯಾದವ್, ರಾಜೇಂದ್ರ ಯಾದವ್, ಪಾರ್ವತಿ ದೇವಿ ಮತ್ತು ತಾರಾ ದೇವಿ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ದಲಿತ ರೈತ ಮತ್ತು ಅವರ ಪತ್ನಿಯ ಮೇಲೆ ದೊಣ್ಣೆ, ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಲಾಗಿದೆ  ಮತ್ತು ಜಾತಿ ಆಧಾರಿತವಾಗಿ ಬೈಗುಳ ನಡೆಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಇನ್ನೊಬ್ಬ ಗ್ರಾಮಸ್ಥರ ಹೊಲದಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ದಿನ ಬೇಳೆ ಬೆಳೆಯುವ ಭೂಹೀನ ದಲಿತ ರೈತ ದೀಪಕ್ ಕುಮಾರ್ ಪಾಸಿ, ಸ್ಥಳೀಯ ಗ್ರಾಮಸ್ಥರೊಬ್ಬರು ತಮ್ಮ ಬೆಳೆ ಪ್ರದೇಶದಲ್ಲಿ ದನ ಮೇಯಿಸುತ್ತಿದ್ದರು ಎಂದು ಆರೋಪಿಸಿ ದೂರು ನೀಡಿದ್ದಾರೆ. ಈ ದೂರಿನ ನಂತರ ದೀಪಕ್, ಅವರ ಪತ್ನಿ ಸುಮಿತ್ರಾ, ಅಣ್ಣ ಮತ್ತು ಅವರ ತಾಯಿಯ ಮೇಲೆ ಈ ವ್ಯಕ್ತಿಗಳು ಹಲ್ಲೆ ನಡೆಸಿದರು ಎಂದು ದೂರಲಾಗಿದೆ.

“ರಾಜಾರಾಮ್ ಯಾದವ್ ಅವರ ದನಗಳು ತಮ್ಮ ಹೊಲದಲ್ಲಿ ಮೇಯುತ್ತಿದ್ದವು ಎಂದು ದೀಪಕ್ ದೂರು ನೀಡಿದಾಗ, ರಾಜಾರಾಮ್ ಕೋಪಗೊಂಡರು. ಅವರು ನಮ್ಮನ್ನು ಜಾತಿ ಹಿಡಿದು ನಿಂದಿಸಿದರು ಮತ್ತು ಇತರರೊಂದಿಗೆ ದೀಪಕ್ ಅವರನ್ನು ದೊಣ್ಣೆ ಮತ್ತು ಕಬ್ಬಿಣದ ಸರಳುಗಳಿಂದ ಹೊಡೆದರು” ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ಹೇಳಿದ್ದಾರೆ.

ದೂರದಾರರ ಪತ್ನಿ ಸುಮಿತ್ರಾ ಅವರ ಜಡೆ ಹಿಡಿದು ಹೊಲದಾದ್ಯಂತ ಎಳೆದುಕೊಂಡು ಹೋಗಿ, ಹೊಡೆದು, ಬಟ್ಟೆಗಳನ್ನು ಹರಿದು ಹಾಕಲಾಯಿತು ಎಂದು ದೂರಿನಲ್ಲಿ ಹೇಳಲಾಗಿದೆ. ದೀಪಕ್ ಮತ್ತು ಸುಮಿತ್ರಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಟುಂಬದ ಇತರ ನಾಲ್ವರು ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ.

ಮಧ್ಯಪ್ರದೇಶ| ಸಾಮೂಹಿಕ ಅತ್ಯಾಚಾರದ ಬಳಿಕ ಬುಡಕಟ್ಟು ಮಹಿಳೆ ಸಾವು; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...