Homeಮುಖಪುಟಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

ಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

- Advertisement -
- Advertisement -

ತಾನು ಕೊಟ್ಟಿದ್ದ ₹200 ವಾಪಸ್ ಕೊಡುವಂತೆ ಕೇಳಿದ 16 ವರ್ಷದ ಬಾಲಕನಿಗೆ ಬಲವಂತವಾಗಿ ಮದ್ಯ ಕುಡಿಸಿ, ಆತನತ ಸಹಪಾಠಿಗಳೆ ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಸೋಮವಾರ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ವಿವಸ್ತ್ರಗೊಳಿಸಿ ಥಳಿಸಿರುವ ವಿಡಿಯೋಗಳನ್ನು ಆರೋಪಿತ ಬಾಲಕರು ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ‘ಬೆಲ್ಟ್ ಮತ್ತು ದೊಣ್ಣೆಗಳಿಂದ ಹೊಡೆದು, ತಮ್ಮ ಫೋನ್‌ಗಳಲ್ಲಿ ಹಲ್ಲೆ ನಡೆಸಿರುವುದನ್ನು ರೆಕಾರ್ಡ್ ಮಾಡಿಕೊಂಡರು. ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ’ ಎಂದು ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.

ಆರೋಪಿತ ಬಾಲಕರು ಸಂತ್ರಸ್ತನನ್ನು ಅವಾಚ್ಯವಾಗಿ ನಿಂದಿಸುತ್ತಾ, ಬಟ್ಟೆ ಕಳಚುವಂತೆ ಬಲವಂತ ಮಾಡಿದ್ದಾರೆ. ಬಟ್ಟೆ ಬಿಚ್ಚಿಸದಂತೆ ಆತ ಮನವಿ ಮಾಡಿದಾಗ, ಅವರು ಬಾಲಕನ ಮುಖಕ್ಕೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆಯಾಗಿದೆ.

‘ವಿಡಿಯೋ ವೈರಲ್ ಆಗಿರುವುದು ನನಗೆ ಮುಜುಗರ ಉಂಟುಮಾಡಿದ್ದು, ತಾನು ತುಂಬಾ ನೊಂದಿದ್ದೇನೆ’ ಎಂದು ಹೇಳಿರುವ ಬಾಲಕ, ತನ್ನ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಇದೀಗ ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತನಿಗೆ ನೀಡಿದ್ದ ₹200 ಸಾಲವನ್ನು ವಾಪಸ್ ಕೊಡುವಂತೆ ಕೇಳಿದ್ದಾಗಿ ಬಾಲಕ ಪೊಲೀಸರಿಗೆ ತಿಳಿಸಿದ್ದು, ಸುಮಾರು ಎರಡು ತಿಂಗಳ ಹಿಂದೆ ಹಣ ಕೇಳಿದ್ದಕ್ಕೆ ಜಗಳ ನಡೆದಿತ್ತು ಎಂದು ಆತ ಮಾಹಿತಿ ನೀಡಿದ್ದಾನೆ. ಕಳೆದ ಸೋಮವಾರ ಬಾಲಕ ಮತ್ತು ಅವನ ಸ್ನೇಹಿತ ಉದ್ಯಾನವನದಲ್ಲಿ ಹರಟೆ ಹೊಡೆಯುತ್ತಿದ್ದರು. ಹಣ ಪಡೆದಿದ್ದ ಆತನ ಸಹಪಾಠಿ ಸೇರಿದಂತೆ ನಾಲ್ವರು ಕಾರಿನಲ್ಲಿ ಪಾರ್ಕಿಗೆ ಬಂದು ಅವನನ್ನು ಕರೆದರು. ಅವನು ಕಾರಿನ ಬಳಿಗೆ ಬಂದ ತಕ್ಷಣ, ಹುಡುಗರು ಅವನನ್ನು ಒಳಗೆ ಎಳೆದುಕೊಂಡು ಸೈನಿಕರ ಅಭ್ಯಾಸವನ್ನು ವೀಕ್ಷಿಸಲು ಹತ್ತಿರದ ಅರಣ್ಯ ಪ್ರದೇಶಕ್ಕೆ ಹೋಗುವುದಾಗಿ ಹೇಳಿದರು ಎಂದು ಬಾಲಕ ಹೇಳಿದ್ದಾನೆ.

ಅರಣ್ಯಕ್ಕೆ ತಲುಪಿದಾಗ, ಅಲ್ಲಿ ಇನ್ನಿಬ್ಬರು ಕಾಯುತ್ತಿರುವುದನ್ನು ಬಾಲಕ ಕಂಡಿದ್ದಾನೆ. ಅವರು ಕುಡಿದು ಹುಡುಗನನ್ನು ಕುಡಿಯಲು ಒತ್ತಾಯಿಸಿದ್ದು, ನಂತರ ಹಲ್ಲೆ ಆರಂಭಿಸಿದ್ದಾರೆ. ಆರು ಮಂದಿ ಹುಡುಗರು ದೊಣ್ಣೆ ಮತ್ತು ಬೆಲ್ಟ್‌ಗಳಿಂದ ಹೊಡೆದು ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದರು ಎಂದು ಬಾಲಕ ಆರೋಪಿಸಿದ್ದಾನೆ. ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುತ್ತಲೇ ಇದ್ದೆ, ಆದರೆ ಅವರು ಥಳಿಸುವುದನ್ನು ಮುಂದುವರೆಸಿದ್ದಾರೆ. ಜತೆಗೆ, ಹಲ್ಲೆ ನಡೆಸಿದ್ದನ್ನು ಚಿತ್ರೀಕರಿಸಿದರು ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಾಲಕ ಹೇಗೋ ಸ್ಥಳದಿಂದ ತಪ್ಪಿಸಿಕೊಂಡು ತನ್ನ ಮನೆಗೆ ತಲುಪಿದ್ದಾನೆ. ಎರಡು ದಿನಗಳ ನಂತರ, ಹಲ್ಲೆ ನಡೆಸಿದ್ದ ಹುಡುಗರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾರೆ. ‘ವಿಡಿಯೋ ವೈರಲ್ ಆದ ನಂತರ ನನಗೆ ಮನೆಯಿಂದ ಹೊರಗಡೆ ಕಾಲಿಡಲು ಕೂಡ ಮುಜುಗರವಾಗುತ್ತಿದೆ’ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ; ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...