Homeಮುಖಪುಟಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

ಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

- Advertisement -
- Advertisement -

ತಾನು ಕೊಟ್ಟಿದ್ದ ₹200 ವಾಪಸ್ ಕೊಡುವಂತೆ ಕೇಳಿದ 16 ವರ್ಷದ ಬಾಲಕನಿಗೆ ಬಲವಂತವಾಗಿ ಮದ್ಯ ಕುಡಿಸಿ, ಆತನತ ಸಹಪಾಠಿಗಳೆ ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಸೋಮವಾರ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ವಿವಸ್ತ್ರಗೊಳಿಸಿ ಥಳಿಸಿರುವ ವಿಡಿಯೋಗಳನ್ನು ಆರೋಪಿತ ಬಾಲಕರು ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ‘ಬೆಲ್ಟ್ ಮತ್ತು ದೊಣ್ಣೆಗಳಿಂದ ಹೊಡೆದು, ತಮ್ಮ ಫೋನ್‌ಗಳಲ್ಲಿ ಹಲ್ಲೆ ನಡೆಸಿರುವುದನ್ನು ರೆಕಾರ್ಡ್ ಮಾಡಿಕೊಂಡರು. ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ’ ಎಂದು ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.

ಆರೋಪಿತ ಬಾಲಕರು ಸಂತ್ರಸ್ತನನ್ನು ಅವಾಚ್ಯವಾಗಿ ನಿಂದಿಸುತ್ತಾ, ಬಟ್ಟೆ ಕಳಚುವಂತೆ ಬಲವಂತ ಮಾಡಿದ್ದಾರೆ. ಬಟ್ಟೆ ಬಿಚ್ಚಿಸದಂತೆ ಆತ ಮನವಿ ಮಾಡಿದಾಗ, ಅವರು ಬಾಲಕನ ಮುಖಕ್ಕೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆಯಾಗಿದೆ.

‘ವಿಡಿಯೋ ವೈರಲ್ ಆಗಿರುವುದು ನನಗೆ ಮುಜುಗರ ಉಂಟುಮಾಡಿದ್ದು, ತಾನು ತುಂಬಾ ನೊಂದಿದ್ದೇನೆ’ ಎಂದು ಹೇಳಿರುವ ಬಾಲಕ, ತನ್ನ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಇದೀಗ ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತನಿಗೆ ನೀಡಿದ್ದ ₹200 ಸಾಲವನ್ನು ವಾಪಸ್ ಕೊಡುವಂತೆ ಕೇಳಿದ್ದಾಗಿ ಬಾಲಕ ಪೊಲೀಸರಿಗೆ ತಿಳಿಸಿದ್ದು, ಸುಮಾರು ಎರಡು ತಿಂಗಳ ಹಿಂದೆ ಹಣ ಕೇಳಿದ್ದಕ್ಕೆ ಜಗಳ ನಡೆದಿತ್ತು ಎಂದು ಆತ ಮಾಹಿತಿ ನೀಡಿದ್ದಾನೆ. ಕಳೆದ ಸೋಮವಾರ ಬಾಲಕ ಮತ್ತು ಅವನ ಸ್ನೇಹಿತ ಉದ್ಯಾನವನದಲ್ಲಿ ಹರಟೆ ಹೊಡೆಯುತ್ತಿದ್ದರು. ಹಣ ಪಡೆದಿದ್ದ ಆತನ ಸಹಪಾಠಿ ಸೇರಿದಂತೆ ನಾಲ್ವರು ಕಾರಿನಲ್ಲಿ ಪಾರ್ಕಿಗೆ ಬಂದು ಅವನನ್ನು ಕರೆದರು. ಅವನು ಕಾರಿನ ಬಳಿಗೆ ಬಂದ ತಕ್ಷಣ, ಹುಡುಗರು ಅವನನ್ನು ಒಳಗೆ ಎಳೆದುಕೊಂಡು ಸೈನಿಕರ ಅಭ್ಯಾಸವನ್ನು ವೀಕ್ಷಿಸಲು ಹತ್ತಿರದ ಅರಣ್ಯ ಪ್ರದೇಶಕ್ಕೆ ಹೋಗುವುದಾಗಿ ಹೇಳಿದರು ಎಂದು ಬಾಲಕ ಹೇಳಿದ್ದಾನೆ.

ಅರಣ್ಯಕ್ಕೆ ತಲುಪಿದಾಗ, ಅಲ್ಲಿ ಇನ್ನಿಬ್ಬರು ಕಾಯುತ್ತಿರುವುದನ್ನು ಬಾಲಕ ಕಂಡಿದ್ದಾನೆ. ಅವರು ಕುಡಿದು ಹುಡುಗನನ್ನು ಕುಡಿಯಲು ಒತ್ತಾಯಿಸಿದ್ದು, ನಂತರ ಹಲ್ಲೆ ಆರಂಭಿಸಿದ್ದಾರೆ. ಆರು ಮಂದಿ ಹುಡುಗರು ದೊಣ್ಣೆ ಮತ್ತು ಬೆಲ್ಟ್‌ಗಳಿಂದ ಹೊಡೆದು ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದರು ಎಂದು ಬಾಲಕ ಆರೋಪಿಸಿದ್ದಾನೆ. ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುತ್ತಲೇ ಇದ್ದೆ, ಆದರೆ ಅವರು ಥಳಿಸುವುದನ್ನು ಮುಂದುವರೆಸಿದ್ದಾರೆ. ಜತೆಗೆ, ಹಲ್ಲೆ ನಡೆಸಿದ್ದನ್ನು ಚಿತ್ರೀಕರಿಸಿದರು ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಾಲಕ ಹೇಗೋ ಸ್ಥಳದಿಂದ ತಪ್ಪಿಸಿಕೊಂಡು ತನ್ನ ಮನೆಗೆ ತಲುಪಿದ್ದಾನೆ. ಎರಡು ದಿನಗಳ ನಂತರ, ಹಲ್ಲೆ ನಡೆಸಿದ್ದ ಹುಡುಗರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾರೆ. ‘ವಿಡಿಯೋ ವೈರಲ್ ಆದ ನಂತರ ನನಗೆ ಮನೆಯಿಂದ ಹೊರಗಡೆ ಕಾಲಿಡಲು ಕೂಡ ಮುಜುಗರವಾಗುತ್ತಿದೆ’ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ; ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...