Homeಮುಖಪುಟಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

ಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

- Advertisement -
- Advertisement -

ತಾನು ಕೊಟ್ಟಿದ್ದ ₹200 ವಾಪಸ್ ಕೊಡುವಂತೆ ಕೇಳಿದ 16 ವರ್ಷದ ಬಾಲಕನಿಗೆ ಬಲವಂತವಾಗಿ ಮದ್ಯ ಕುಡಿಸಿ, ಆತನತ ಸಹಪಾಠಿಗಳೆ ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಸೋಮವಾರ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ವಿವಸ್ತ್ರಗೊಳಿಸಿ ಥಳಿಸಿರುವ ವಿಡಿಯೋಗಳನ್ನು ಆರೋಪಿತ ಬಾಲಕರು ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ‘ಬೆಲ್ಟ್ ಮತ್ತು ದೊಣ್ಣೆಗಳಿಂದ ಹೊಡೆದು, ತಮ್ಮ ಫೋನ್‌ಗಳಲ್ಲಿ ಹಲ್ಲೆ ನಡೆಸಿರುವುದನ್ನು ರೆಕಾರ್ಡ್ ಮಾಡಿಕೊಂಡರು. ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ’ ಎಂದು ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.

ಆರೋಪಿತ ಬಾಲಕರು ಸಂತ್ರಸ್ತನನ್ನು ಅವಾಚ್ಯವಾಗಿ ನಿಂದಿಸುತ್ತಾ, ಬಟ್ಟೆ ಕಳಚುವಂತೆ ಬಲವಂತ ಮಾಡಿದ್ದಾರೆ. ಬಟ್ಟೆ ಬಿಚ್ಚಿಸದಂತೆ ಆತ ಮನವಿ ಮಾಡಿದಾಗ, ಅವರು ಬಾಲಕನ ಮುಖಕ್ಕೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆಯಾಗಿದೆ.

‘ವಿಡಿಯೋ ವೈರಲ್ ಆಗಿರುವುದು ನನಗೆ ಮುಜುಗರ ಉಂಟುಮಾಡಿದ್ದು, ತಾನು ತುಂಬಾ ನೊಂದಿದ್ದೇನೆ’ ಎಂದು ಹೇಳಿರುವ ಬಾಲಕ, ತನ್ನ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಇದೀಗ ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತನಿಗೆ ನೀಡಿದ್ದ ₹200 ಸಾಲವನ್ನು ವಾಪಸ್ ಕೊಡುವಂತೆ ಕೇಳಿದ್ದಾಗಿ ಬಾಲಕ ಪೊಲೀಸರಿಗೆ ತಿಳಿಸಿದ್ದು, ಸುಮಾರು ಎರಡು ತಿಂಗಳ ಹಿಂದೆ ಹಣ ಕೇಳಿದ್ದಕ್ಕೆ ಜಗಳ ನಡೆದಿತ್ತು ಎಂದು ಆತ ಮಾಹಿತಿ ನೀಡಿದ್ದಾನೆ. ಕಳೆದ ಸೋಮವಾರ ಬಾಲಕ ಮತ್ತು ಅವನ ಸ್ನೇಹಿತ ಉದ್ಯಾನವನದಲ್ಲಿ ಹರಟೆ ಹೊಡೆಯುತ್ತಿದ್ದರು. ಹಣ ಪಡೆದಿದ್ದ ಆತನ ಸಹಪಾಠಿ ಸೇರಿದಂತೆ ನಾಲ್ವರು ಕಾರಿನಲ್ಲಿ ಪಾರ್ಕಿಗೆ ಬಂದು ಅವನನ್ನು ಕರೆದರು. ಅವನು ಕಾರಿನ ಬಳಿಗೆ ಬಂದ ತಕ್ಷಣ, ಹುಡುಗರು ಅವನನ್ನು ಒಳಗೆ ಎಳೆದುಕೊಂಡು ಸೈನಿಕರ ಅಭ್ಯಾಸವನ್ನು ವೀಕ್ಷಿಸಲು ಹತ್ತಿರದ ಅರಣ್ಯ ಪ್ರದೇಶಕ್ಕೆ ಹೋಗುವುದಾಗಿ ಹೇಳಿದರು ಎಂದು ಬಾಲಕ ಹೇಳಿದ್ದಾನೆ.

ಅರಣ್ಯಕ್ಕೆ ತಲುಪಿದಾಗ, ಅಲ್ಲಿ ಇನ್ನಿಬ್ಬರು ಕಾಯುತ್ತಿರುವುದನ್ನು ಬಾಲಕ ಕಂಡಿದ್ದಾನೆ. ಅವರು ಕುಡಿದು ಹುಡುಗನನ್ನು ಕುಡಿಯಲು ಒತ್ತಾಯಿಸಿದ್ದು, ನಂತರ ಹಲ್ಲೆ ಆರಂಭಿಸಿದ್ದಾರೆ. ಆರು ಮಂದಿ ಹುಡುಗರು ದೊಣ್ಣೆ ಮತ್ತು ಬೆಲ್ಟ್‌ಗಳಿಂದ ಹೊಡೆದು ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದರು ಎಂದು ಬಾಲಕ ಆರೋಪಿಸಿದ್ದಾನೆ. ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುತ್ತಲೇ ಇದ್ದೆ, ಆದರೆ ಅವರು ಥಳಿಸುವುದನ್ನು ಮುಂದುವರೆಸಿದ್ದಾರೆ. ಜತೆಗೆ, ಹಲ್ಲೆ ನಡೆಸಿದ್ದನ್ನು ಚಿತ್ರೀಕರಿಸಿದರು ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಾಲಕ ಹೇಗೋ ಸ್ಥಳದಿಂದ ತಪ್ಪಿಸಿಕೊಂಡು ತನ್ನ ಮನೆಗೆ ತಲುಪಿದ್ದಾನೆ. ಎರಡು ದಿನಗಳ ನಂತರ, ಹಲ್ಲೆ ನಡೆಸಿದ್ದ ಹುಡುಗರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾರೆ. ‘ವಿಡಿಯೋ ವೈರಲ್ ಆದ ನಂತರ ನನಗೆ ಮನೆಯಿಂದ ಹೊರಗಡೆ ಕಾಲಿಡಲು ಕೂಡ ಮುಜುಗರವಾಗುತ್ತಿದೆ’ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ; ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...