Homeಮುಖಪುಟಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

ಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

- Advertisement -
- Advertisement -

ತಾನು ಕೊಟ್ಟಿದ್ದ ₹200 ವಾಪಸ್ ಕೊಡುವಂತೆ ಕೇಳಿದ 16 ವರ್ಷದ ಬಾಲಕನಿಗೆ ಬಲವಂತವಾಗಿ ಮದ್ಯ ಕುಡಿಸಿ, ಆತನತ ಸಹಪಾಠಿಗಳೆ ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಸೋಮವಾರ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ವಿವಸ್ತ್ರಗೊಳಿಸಿ ಥಳಿಸಿರುವ ವಿಡಿಯೋಗಳನ್ನು ಆರೋಪಿತ ಬಾಲಕರು ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ‘ಬೆಲ್ಟ್ ಮತ್ತು ದೊಣ್ಣೆಗಳಿಂದ ಹೊಡೆದು, ತಮ್ಮ ಫೋನ್‌ಗಳಲ್ಲಿ ಹಲ್ಲೆ ನಡೆಸಿರುವುದನ್ನು ರೆಕಾರ್ಡ್ ಮಾಡಿಕೊಂಡರು. ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ’ ಎಂದು ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.

ಆರೋಪಿತ ಬಾಲಕರು ಸಂತ್ರಸ್ತನನ್ನು ಅವಾಚ್ಯವಾಗಿ ನಿಂದಿಸುತ್ತಾ, ಬಟ್ಟೆ ಕಳಚುವಂತೆ ಬಲವಂತ ಮಾಡಿದ್ದಾರೆ. ಬಟ್ಟೆ ಬಿಚ್ಚಿಸದಂತೆ ಆತ ಮನವಿ ಮಾಡಿದಾಗ, ಅವರು ಬಾಲಕನ ಮುಖಕ್ಕೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆಯಾಗಿದೆ.

‘ವಿಡಿಯೋ ವೈರಲ್ ಆಗಿರುವುದು ನನಗೆ ಮುಜುಗರ ಉಂಟುಮಾಡಿದ್ದು, ತಾನು ತುಂಬಾ ನೊಂದಿದ್ದೇನೆ’ ಎಂದು ಹೇಳಿರುವ ಬಾಲಕ, ತನ್ನ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಇದೀಗ ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತನಿಗೆ ನೀಡಿದ್ದ ₹200 ಸಾಲವನ್ನು ವಾಪಸ್ ಕೊಡುವಂತೆ ಕೇಳಿದ್ದಾಗಿ ಬಾಲಕ ಪೊಲೀಸರಿಗೆ ತಿಳಿಸಿದ್ದು, ಸುಮಾರು ಎರಡು ತಿಂಗಳ ಹಿಂದೆ ಹಣ ಕೇಳಿದ್ದಕ್ಕೆ ಜಗಳ ನಡೆದಿತ್ತು ಎಂದು ಆತ ಮಾಹಿತಿ ನೀಡಿದ್ದಾನೆ. ಕಳೆದ ಸೋಮವಾರ ಬಾಲಕ ಮತ್ತು ಅವನ ಸ್ನೇಹಿತ ಉದ್ಯಾನವನದಲ್ಲಿ ಹರಟೆ ಹೊಡೆಯುತ್ತಿದ್ದರು. ಹಣ ಪಡೆದಿದ್ದ ಆತನ ಸಹಪಾಠಿ ಸೇರಿದಂತೆ ನಾಲ್ವರು ಕಾರಿನಲ್ಲಿ ಪಾರ್ಕಿಗೆ ಬಂದು ಅವನನ್ನು ಕರೆದರು. ಅವನು ಕಾರಿನ ಬಳಿಗೆ ಬಂದ ತಕ್ಷಣ, ಹುಡುಗರು ಅವನನ್ನು ಒಳಗೆ ಎಳೆದುಕೊಂಡು ಸೈನಿಕರ ಅಭ್ಯಾಸವನ್ನು ವೀಕ್ಷಿಸಲು ಹತ್ತಿರದ ಅರಣ್ಯ ಪ್ರದೇಶಕ್ಕೆ ಹೋಗುವುದಾಗಿ ಹೇಳಿದರು ಎಂದು ಬಾಲಕ ಹೇಳಿದ್ದಾನೆ.

ಅರಣ್ಯಕ್ಕೆ ತಲುಪಿದಾಗ, ಅಲ್ಲಿ ಇನ್ನಿಬ್ಬರು ಕಾಯುತ್ತಿರುವುದನ್ನು ಬಾಲಕ ಕಂಡಿದ್ದಾನೆ. ಅವರು ಕುಡಿದು ಹುಡುಗನನ್ನು ಕುಡಿಯಲು ಒತ್ತಾಯಿಸಿದ್ದು, ನಂತರ ಹಲ್ಲೆ ಆರಂಭಿಸಿದ್ದಾರೆ. ಆರು ಮಂದಿ ಹುಡುಗರು ದೊಣ್ಣೆ ಮತ್ತು ಬೆಲ್ಟ್‌ಗಳಿಂದ ಹೊಡೆದು ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದರು ಎಂದು ಬಾಲಕ ಆರೋಪಿಸಿದ್ದಾನೆ. ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುತ್ತಲೇ ಇದ್ದೆ, ಆದರೆ ಅವರು ಥಳಿಸುವುದನ್ನು ಮುಂದುವರೆಸಿದ್ದಾರೆ. ಜತೆಗೆ, ಹಲ್ಲೆ ನಡೆಸಿದ್ದನ್ನು ಚಿತ್ರೀಕರಿಸಿದರು ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಾಲಕ ಹೇಗೋ ಸ್ಥಳದಿಂದ ತಪ್ಪಿಸಿಕೊಂಡು ತನ್ನ ಮನೆಗೆ ತಲುಪಿದ್ದಾನೆ. ಎರಡು ದಿನಗಳ ನಂತರ, ಹಲ್ಲೆ ನಡೆಸಿದ್ದ ಹುಡುಗರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾರೆ. ‘ವಿಡಿಯೋ ವೈರಲ್ ಆದ ನಂತರ ನನಗೆ ಮನೆಯಿಂದ ಹೊರಗಡೆ ಕಾಲಿಡಲು ಕೂಡ ಮುಜುಗರವಾಗುತ್ತಿದೆ’ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ; ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...