Homeಮುಖಪುಟಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

ಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

- Advertisement -
- Advertisement -

ತಾನು ಕೊಟ್ಟಿದ್ದ ₹200 ವಾಪಸ್ ಕೊಡುವಂತೆ ಕೇಳಿದ 16 ವರ್ಷದ ಬಾಲಕನಿಗೆ ಬಲವಂತವಾಗಿ ಮದ್ಯ ಕುಡಿಸಿ, ಆತನತ ಸಹಪಾಠಿಗಳೆ ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಸೋಮವಾರ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ವಿವಸ್ತ್ರಗೊಳಿಸಿ ಥಳಿಸಿರುವ ವಿಡಿಯೋಗಳನ್ನು ಆರೋಪಿತ ಬಾಲಕರು ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ‘ಬೆಲ್ಟ್ ಮತ್ತು ದೊಣ್ಣೆಗಳಿಂದ ಹೊಡೆದು, ತಮ್ಮ ಫೋನ್‌ಗಳಲ್ಲಿ ಹಲ್ಲೆ ನಡೆಸಿರುವುದನ್ನು ರೆಕಾರ್ಡ್ ಮಾಡಿಕೊಂಡರು. ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ’ ಎಂದು ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.

ಆರೋಪಿತ ಬಾಲಕರು ಸಂತ್ರಸ್ತನನ್ನು ಅವಾಚ್ಯವಾಗಿ ನಿಂದಿಸುತ್ತಾ, ಬಟ್ಟೆ ಕಳಚುವಂತೆ ಬಲವಂತ ಮಾಡಿದ್ದಾರೆ. ಬಟ್ಟೆ ಬಿಚ್ಚಿಸದಂತೆ ಆತ ಮನವಿ ಮಾಡಿದಾಗ, ಅವರು ಬಾಲಕನ ಮುಖಕ್ಕೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆಯಾಗಿದೆ.

‘ವಿಡಿಯೋ ವೈರಲ್ ಆಗಿರುವುದು ನನಗೆ ಮುಜುಗರ ಉಂಟುಮಾಡಿದ್ದು, ತಾನು ತುಂಬಾ ನೊಂದಿದ್ದೇನೆ’ ಎಂದು ಹೇಳಿರುವ ಬಾಲಕ, ತನ್ನ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಇದೀಗ ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತನಿಗೆ ನೀಡಿದ್ದ ₹200 ಸಾಲವನ್ನು ವಾಪಸ್ ಕೊಡುವಂತೆ ಕೇಳಿದ್ದಾಗಿ ಬಾಲಕ ಪೊಲೀಸರಿಗೆ ತಿಳಿಸಿದ್ದು, ಸುಮಾರು ಎರಡು ತಿಂಗಳ ಹಿಂದೆ ಹಣ ಕೇಳಿದ್ದಕ್ಕೆ ಜಗಳ ನಡೆದಿತ್ತು ಎಂದು ಆತ ಮಾಹಿತಿ ನೀಡಿದ್ದಾನೆ. ಕಳೆದ ಸೋಮವಾರ ಬಾಲಕ ಮತ್ತು ಅವನ ಸ್ನೇಹಿತ ಉದ್ಯಾನವನದಲ್ಲಿ ಹರಟೆ ಹೊಡೆಯುತ್ತಿದ್ದರು. ಹಣ ಪಡೆದಿದ್ದ ಆತನ ಸಹಪಾಠಿ ಸೇರಿದಂತೆ ನಾಲ್ವರು ಕಾರಿನಲ್ಲಿ ಪಾರ್ಕಿಗೆ ಬಂದು ಅವನನ್ನು ಕರೆದರು. ಅವನು ಕಾರಿನ ಬಳಿಗೆ ಬಂದ ತಕ್ಷಣ, ಹುಡುಗರು ಅವನನ್ನು ಒಳಗೆ ಎಳೆದುಕೊಂಡು ಸೈನಿಕರ ಅಭ್ಯಾಸವನ್ನು ವೀಕ್ಷಿಸಲು ಹತ್ತಿರದ ಅರಣ್ಯ ಪ್ರದೇಶಕ್ಕೆ ಹೋಗುವುದಾಗಿ ಹೇಳಿದರು ಎಂದು ಬಾಲಕ ಹೇಳಿದ್ದಾನೆ.

ಅರಣ್ಯಕ್ಕೆ ತಲುಪಿದಾಗ, ಅಲ್ಲಿ ಇನ್ನಿಬ್ಬರು ಕಾಯುತ್ತಿರುವುದನ್ನು ಬಾಲಕ ಕಂಡಿದ್ದಾನೆ. ಅವರು ಕುಡಿದು ಹುಡುಗನನ್ನು ಕುಡಿಯಲು ಒತ್ತಾಯಿಸಿದ್ದು, ನಂತರ ಹಲ್ಲೆ ಆರಂಭಿಸಿದ್ದಾರೆ. ಆರು ಮಂದಿ ಹುಡುಗರು ದೊಣ್ಣೆ ಮತ್ತು ಬೆಲ್ಟ್‌ಗಳಿಂದ ಹೊಡೆದು ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದರು ಎಂದು ಬಾಲಕ ಆರೋಪಿಸಿದ್ದಾನೆ. ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುತ್ತಲೇ ಇದ್ದೆ, ಆದರೆ ಅವರು ಥಳಿಸುವುದನ್ನು ಮುಂದುವರೆಸಿದ್ದಾರೆ. ಜತೆಗೆ, ಹಲ್ಲೆ ನಡೆಸಿದ್ದನ್ನು ಚಿತ್ರೀಕರಿಸಿದರು ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಾಲಕ ಹೇಗೋ ಸ್ಥಳದಿಂದ ತಪ್ಪಿಸಿಕೊಂಡು ತನ್ನ ಮನೆಗೆ ತಲುಪಿದ್ದಾನೆ. ಎರಡು ದಿನಗಳ ನಂತರ, ಹಲ್ಲೆ ನಡೆಸಿದ್ದ ಹುಡುಗರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾರೆ. ‘ವಿಡಿಯೋ ವೈರಲ್ ಆದ ನಂತರ ನನಗೆ ಮನೆಯಿಂದ ಹೊರಗಡೆ ಕಾಲಿಡಲು ಕೂಡ ಮುಜುಗರವಾಗುತ್ತಿದೆ’ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ; ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...