Homeಮುಖಪುಟಲೋಕಸಭೆ ಚುನಾವಣೆಗೆ ಸಿದ್ದತೆ: ಕಾಂಗ್ರೆಸ್‌ನಿಂದ 'ಯುಪಿ ಜೋಡೊ' ಯಾತ್ರೆ

ಲೋಕಸಭೆ ಚುನಾವಣೆಗೆ ಸಿದ್ದತೆ: ಕಾಂಗ್ರೆಸ್‌ನಿಂದ ‘ಯುಪಿ ಜೋಡೊ’ ಯಾತ್ರೆ

- Advertisement -
- Advertisement -

ಪಕ್ಷ ಸಂಘಟನೆ ಮತ್ತು 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಿನ್ನೆಯಿಂದ (ಡಿ.20) ಉತ್ತರ ಪ್ರದೇಶ ಕಾಂಗ್ರೆಸ್ ‘ಯುಪಿ ಜೋಡೋ’ ಯಾತ್ರೆ ಕೈಗೊಂಡಿದೆ.

ಸಹರಾನ್‌ಪುರದ ಶಾಕುಂಭಾರಿ ದೇವಿ ದೇವಸ್ಥಾನದಿಂದ ಆರಂಭವಾಗಿರುವ 20 ದಿನಗಳ ಯಾತ್ರೆ 11 ಜಿಲ್ಲೆಗಳು ಮತ್ತು 16 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ.

ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ರೋಹಿಲ್‌ಖಂಡ್ ಪ್ರದೇಶದ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾತ್ರೆ ಆಯೋಜಿಸಿದೆ. ಸಹರಾನ್‌ಪುರ, ಮುಜಾಫರ್‌ನಗರ, ಬಿಜ್ನೋರ್, ಅಮ್ರೋಹಾ, ಮೊರಾದಾಬಾದ್, ರಾಂಪುರ ಮತ್ತು ಬರೇಲಿ ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳಲ್ಲಿ ಶೇ.35 ರಿಂದ 40 ಮುಸ್ಲಿಮರ ಮತಗಳು ನಿರ್ಣಾಯಕವಾಗಿವೆ.

‘ಯುಪಿ ಜೋಡೋ’ ಯಾತ್ರೆಯ ಮೂಲಕ ರೈತರು, ಯುವಜನರು, ಮಹಿಳೆಯರು, ವ್ಯಾಪಾರಿಗಳು, ಧಾರ್ಮಿಕ ಮುಖಂಡರು ಮತ್ತು ಕುಶಲಕರ್ಮಿಗಳನ್ನು ತಲುಪಲು ಕಾಂಗ್ರೆಸ್ ಉದ್ದೇಶಿಸಿದೆ.

ಯಾತ್ರೆಯ ವೇಳೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಸಹರಾನ್‌ಪುರದಲ್ಲಿ ಮರದ ಪೀಠೋಪಕರಣ ತಯಾರಕರೊಂದಿಗೆ ಸಂವಾದ ನಡೆಸಲಿದ್ದಾರೆ. ಮುಜಾಫರ್‌ನಗರ ಮತ್ತು ಬಿಜ್ನೋರ್‌ನಲ್ಲಿ ಕಬ್ಬು ಬೆಳೆಯುವ ರೈತರು, ಮೊರಾದಾಬಾದ್‌ನಲ್ಲಿ ಹಿತ್ತಾಳೆ ತಯಾರಕರು, ಬರೇಲಿಯಲ್ಲಿ “ಝರಿ ಜರ್ಡೋಜಿ” ಕೆಲಸಗಾರರು ಮತ್ತು ಬಿದಿರು ಕುಶಲಕರ್ಮಿಗಳು, ರಾಂಪುರದಲ್ಲಿ ಕುಶಲಕರ್ಮಿಗಳು, ಶಹಜಹಾನ್‌ಪುರ ಮತ್ತು ಲಖಿಂಪುರದಲ್ಲಿ ಕಬ್ಬು ಬೆಳೆಯುವ ರೈತರು ಮತ್ತು ವಿವಿಧ ಜಿಲ್ಲೆಗಳಲ್ಲಿ ಪ್ರಮುಖ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಯಾತ್ರೆಯಲ್ಲಿ ಒಳಗೊಳ್ಳಲಿರುವ 16 ಲೋಕಸಭಾ ಕ್ಷೇತ್ರಗಳು ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಗಳಾಗಿದ್ದವು. 2009ರ ಲೋಕಸಭಾ ಚುನಾವಣೆಯಲ್ಲಿ, ಯಾತ್ರೆ ಸಾಗಲಿರುವ ಬರೇಲಿ, ಖೇರಿ, ಧೌರ್ಹರಾ ಮತ್ತು ಮೊರಾದಾಬಾದ್ ಕ್ಷೇತ್ರಗಳು ಸೇರಿದಂತೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದಿತ್ತು.

2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಸ್ಥಾನಗಳನ್ನು ಕಳೆದುಕೊಂಡಿದೆ. ಹಾಗಾಗಿ, ಮುಸ್ಲಿಮರು, ಇತರ ಹಿಂದುಳಿದ ವರ್ಗ (ಒಬಿಸಿ) ಮತ್ತು ದಲಿತರ ಸಾಂಪ್ರದಾಯಿಕ ಮತಗಳ ಮೇಲೆ ಕಣ್ಣಿಟ್ಟಿದೆ. ಈ ಸಮುದಾಯಗಳನ್ನು ಸೆಳೆಯುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಜೋಡೋ ಯಾತ್ರೆ ಹಮ್ಮಿಕೊಂಡಿದೆ.

2022ರ ಸೆಪ್ಟೆಂಬರ್ 7ರಿಂದ ಜನವರಿ 30, 2023ರವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿದ್ದರು. ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು ಕಾಶ್ಮೀರದವರೆಗೆ 136 ದಿನಗಳ ಕಾಲ ನಡೆದ ಈ ಯಾತ್ರೆ ಕಾಂಗ್ರೆಸ್‌ಗೆ ಹೊಸ ಹುರುಪು ನೀಡಿತ್ತು.

ಭಾರತ್ ಜೋಡೋ ಯಾತ್ರೆಯ ಬಳಿಕ ನಡೆದ ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಜೋಡೋ ಯಾತ್ರೆ ಈ ಎರಡೂ ರಾಜ್ಯಗಳಲ್ಲಿ ಪಕ್ಷ ಅಧಿಕಾರಕ್ಕೇರುವಲ್ಲಿ ಮುಖ್ಯ ಪಾತ್ರ ವಹಿಸಿದೆ ಎಂದು ಹೇಳಲಾಗ್ತಿದೆ.

ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಎರಡನೇ ಭಾರತ್ ಜೋಡೋ ಯಾತ್ರೆ ಪೂರ್ವ ಭಾರತದಿಂದ ಪಶ್ಚಿಮ ಭಾರತಕ್ಕೆ ನಡೆಯುವ ಸಾಧ್ಯತೆ ಇದೆ. ಮುಂದಿನ ಜನವರಿಯಲ್ಲಿ ಈ ಯಾತ್ರೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೆ?: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...