Homeಮುಖಪುಟಲೋಕಸಭೆ ಚುನಾವಣೆಗೆ ಸಿದ್ದತೆ: ಕಾಂಗ್ರೆಸ್‌ನಿಂದ 'ಯುಪಿ ಜೋಡೊ' ಯಾತ್ರೆ

ಲೋಕಸಭೆ ಚುನಾವಣೆಗೆ ಸಿದ್ದತೆ: ಕಾಂಗ್ರೆಸ್‌ನಿಂದ ‘ಯುಪಿ ಜೋಡೊ’ ಯಾತ್ರೆ

- Advertisement -
- Advertisement -

ಪಕ್ಷ ಸಂಘಟನೆ ಮತ್ತು 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಿನ್ನೆಯಿಂದ (ಡಿ.20) ಉತ್ತರ ಪ್ರದೇಶ ಕಾಂಗ್ರೆಸ್ ‘ಯುಪಿ ಜೋಡೋ’ ಯಾತ್ರೆ ಕೈಗೊಂಡಿದೆ.

ಸಹರಾನ್‌ಪುರದ ಶಾಕುಂಭಾರಿ ದೇವಿ ದೇವಸ್ಥಾನದಿಂದ ಆರಂಭವಾಗಿರುವ 20 ದಿನಗಳ ಯಾತ್ರೆ 11 ಜಿಲ್ಲೆಗಳು ಮತ್ತು 16 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ.

ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ರೋಹಿಲ್‌ಖಂಡ್ ಪ್ರದೇಶದ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾತ್ರೆ ಆಯೋಜಿಸಿದೆ. ಸಹರಾನ್‌ಪುರ, ಮುಜಾಫರ್‌ನಗರ, ಬಿಜ್ನೋರ್, ಅಮ್ರೋಹಾ, ಮೊರಾದಾಬಾದ್, ರಾಂಪುರ ಮತ್ತು ಬರೇಲಿ ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳಲ್ಲಿ ಶೇ.35 ರಿಂದ 40 ಮುಸ್ಲಿಮರ ಮತಗಳು ನಿರ್ಣಾಯಕವಾಗಿವೆ.

‘ಯುಪಿ ಜೋಡೋ’ ಯಾತ್ರೆಯ ಮೂಲಕ ರೈತರು, ಯುವಜನರು, ಮಹಿಳೆಯರು, ವ್ಯಾಪಾರಿಗಳು, ಧಾರ್ಮಿಕ ಮುಖಂಡರು ಮತ್ತು ಕುಶಲಕರ್ಮಿಗಳನ್ನು ತಲುಪಲು ಕಾಂಗ್ರೆಸ್ ಉದ್ದೇಶಿಸಿದೆ.

ಯಾತ್ರೆಯ ವೇಳೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಸಹರಾನ್‌ಪುರದಲ್ಲಿ ಮರದ ಪೀಠೋಪಕರಣ ತಯಾರಕರೊಂದಿಗೆ ಸಂವಾದ ನಡೆಸಲಿದ್ದಾರೆ. ಮುಜಾಫರ್‌ನಗರ ಮತ್ತು ಬಿಜ್ನೋರ್‌ನಲ್ಲಿ ಕಬ್ಬು ಬೆಳೆಯುವ ರೈತರು, ಮೊರಾದಾಬಾದ್‌ನಲ್ಲಿ ಹಿತ್ತಾಳೆ ತಯಾರಕರು, ಬರೇಲಿಯಲ್ಲಿ “ಝರಿ ಜರ್ಡೋಜಿ” ಕೆಲಸಗಾರರು ಮತ್ತು ಬಿದಿರು ಕುಶಲಕರ್ಮಿಗಳು, ರಾಂಪುರದಲ್ಲಿ ಕುಶಲಕರ್ಮಿಗಳು, ಶಹಜಹಾನ್‌ಪುರ ಮತ್ತು ಲಖಿಂಪುರದಲ್ಲಿ ಕಬ್ಬು ಬೆಳೆಯುವ ರೈತರು ಮತ್ತು ವಿವಿಧ ಜಿಲ್ಲೆಗಳಲ್ಲಿ ಪ್ರಮುಖ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಯಾತ್ರೆಯಲ್ಲಿ ಒಳಗೊಳ್ಳಲಿರುವ 16 ಲೋಕಸಭಾ ಕ್ಷೇತ್ರಗಳು ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಗಳಾಗಿದ್ದವು. 2009ರ ಲೋಕಸಭಾ ಚುನಾವಣೆಯಲ್ಲಿ, ಯಾತ್ರೆ ಸಾಗಲಿರುವ ಬರೇಲಿ, ಖೇರಿ, ಧೌರ್ಹರಾ ಮತ್ತು ಮೊರಾದಾಬಾದ್ ಕ್ಷೇತ್ರಗಳು ಸೇರಿದಂತೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದಿತ್ತು.

2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಸ್ಥಾನಗಳನ್ನು ಕಳೆದುಕೊಂಡಿದೆ. ಹಾಗಾಗಿ, ಮುಸ್ಲಿಮರು, ಇತರ ಹಿಂದುಳಿದ ವರ್ಗ (ಒಬಿಸಿ) ಮತ್ತು ದಲಿತರ ಸಾಂಪ್ರದಾಯಿಕ ಮತಗಳ ಮೇಲೆ ಕಣ್ಣಿಟ್ಟಿದೆ. ಈ ಸಮುದಾಯಗಳನ್ನು ಸೆಳೆಯುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಜೋಡೋ ಯಾತ್ರೆ ಹಮ್ಮಿಕೊಂಡಿದೆ.

2022ರ ಸೆಪ್ಟೆಂಬರ್ 7ರಿಂದ ಜನವರಿ 30, 2023ರವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿದ್ದರು. ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು ಕಾಶ್ಮೀರದವರೆಗೆ 136 ದಿನಗಳ ಕಾಲ ನಡೆದ ಈ ಯಾತ್ರೆ ಕಾಂಗ್ರೆಸ್‌ಗೆ ಹೊಸ ಹುರುಪು ನೀಡಿತ್ತು.

ಭಾರತ್ ಜೋಡೋ ಯಾತ್ರೆಯ ಬಳಿಕ ನಡೆದ ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಜೋಡೋ ಯಾತ್ರೆ ಈ ಎರಡೂ ರಾಜ್ಯಗಳಲ್ಲಿ ಪಕ್ಷ ಅಧಿಕಾರಕ್ಕೇರುವಲ್ಲಿ ಮುಖ್ಯ ಪಾತ್ರ ವಹಿಸಿದೆ ಎಂದು ಹೇಳಲಾಗ್ತಿದೆ.

ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಎರಡನೇ ಭಾರತ್ ಜೋಡೋ ಯಾತ್ರೆ ಪೂರ್ವ ಭಾರತದಿಂದ ಪಶ್ಚಿಮ ಭಾರತಕ್ಕೆ ನಡೆಯುವ ಸಾಧ್ಯತೆ ಇದೆ. ಮುಂದಿನ ಜನವರಿಯಲ್ಲಿ ಈ ಯಾತ್ರೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೆ?: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...