Homeಮುಖಪುಟಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

- Advertisement -
- Advertisement -

ಹಿಂದೆ ರಾಹುಲ್‍ ಗಾಂಧಿಯವರಿಗೆ ನಿಕಟವಾಗಿದ್ದ ಕಾಂಗ್ರೆಸ್‍ ನಾಯಕ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ತನ್ನ ಕಚೇರಿಯಲ್ಲಿ ಕಾಂಗ್ರೆಸ್‍ ನಾಯಕತ್ವವು, ಪಂಜಾಬ್‍ ಕಾಂಗ್ರೆಸ್‍ನ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ಸಭೆ ನಡೆಸುತ್ತಿರುವ ಸಮಯದಲ್ಲೇ, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿನ ಪ್ರಧಾನ ಬ್ರಾಹ್ಮಣ ಮುಖವಾಗಿದ್ದ 47 ವರ್ಷದ ಜಿತಿನ್‍ ಪ್ರಸಾದ ಕಾಂಗ್ರೆಸ್‍ನಿಂದ ನಿರ್ಗಮಿಸಿದ್ದಾರೆ.

“ಬಿಜೆಪಿ ಮಾತ್ರ ನಿಜವಾದ ರಾಜಕೀಯ ಪಕ್ಷ. ಇದು ಏಕೈಕ ರಾಷ್ಟ್ರೀಯ ಪಕ್ಷ. ಉಳಿದ ಪಕ್ಷಗಳು ಪ್ರಾದೇಶಿಕ. ಬಿಜೆಪಿ ಮತ್ತು ಮೋದಿ ಮಾತ್ರ ದೇಶವು ಈಗ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಬಲ್ಲರು” ಎಂದು ಜಿತನ್ ಪ್ರಸಾದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ತೊರೆದ ನಂತರ ಜಿತಿನ್‍ ನಿರ್ಗಮನ ಎರಡನೇ ದೊಡ್ಡ ನಿರ್ಗಮನವಾಗಿದೆ. ಜಿತಿನ್‍ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂಬ ವದಂತಿಗಳನ್ನು ಅವರು 2019ರಲ್ಲಿ ನಿರಾಕರಿಸಿದ್ದರು. ಆ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್‍ನಲ್ಲೇ ಉಳಿಯಲು ಜಿತಿನ್‍ ಅವರಿಗೆ ಮನವರಿಕೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

“ನೀವು ಪ್ರತಿನಿಧಿಸುವ ಜನರಿಗೆ ಸಹಾಯ ಮಾಡಲು ಸಾಧ್ಯವಾಗದಿದ್ದರೆ ಒಂದು ಪಕ್ಷವಾಗಿ ಇರುವುದರ ಅರ್ಥವೇನು?” ಎಂದು ಜಿತಿನ್‍ ಕಾಂಗ್ರೆಸ್‍ ಕುರಿತು ಇಂದು ಹೇಳಿದರು.

‘ಕಾಂಗ್ರೆಸ್‍ ಜೊತೆಗಿನ 20 ವರ್ಷಗಳ ಪಯಣದಲ್ಲಿ ಇದೇನೂ  ಅವರ ಮೊದಲ ಬಾರಿಯ ಹತಾಶೆಯಲ್ಲ ಎಂಬುದು ರಹಸ್ಯವೇನೂ ಅಲ್ಲ. ಅವರು “ಜಿ -23” ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಭಾಗವಾಗಿದ್ದರು. ಈ ಗುಂಪು ಕಳೆದ ವರ್ಷ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳು ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಾವಧಿಯ ಜನಪ್ರಿಯ ನಾಯಕತ್ವಕ್ಕೆ ಕರೆ ನೀಡಿತ್ತು.

ಪಕ್ಷವು ಇದೆಲ್ಲದರ ತಿದ್ದುಪಡಿಯ ಬಗ್ಗೆ ಮಾತನಾಡಿದ್ದರೂ ಮತ್ತು ಸಮಿತಿಯನ್ನೂ ನೇಮಿಸಿದ್ದರೂ ವಾಸ್ತವದಲ್ಲಿ ಏನೂ ಬದಲಾಗಿಲ್ಲ.

ಈ ಪತ್ರದ ನಂತರ, ಯಾವುದೇ ಮುಖ್ಯ ಪಾತ್ರವನ್ನು ಪಡೆಯಬಹುದಾದ ಕೆಲವೇ “ಭಿನ್ನಮತೀಯರಲ್ಲಿ” ಜಿತಿನ್‍ ಒಬ್ಬರಾಗಿದ್ದರು. ಕಾಂಗ್ರೆಸ್‍ನ ಬಂಗಾಳ ಚುನಾವಣಾ ಪ್ರಚಾರದ ಕಾರ್ಯವನ್ನು ಅವರು ನಿರ್ವಹಿಸಿದರು, ಆದರೆ ಅಲ್ಲಿ ತೀವ್ರ ಹಿನ್ನಡೆಯ ಫಲಿತಾಂಶ ಬಂದಿತು.

ಮೌಲ್ವಿಯೊಬ್ಬರ  ನೇತೃತ್ವದ ಇಂಡಿಯನ್‍ ಸೆಕ್ಯುಲರ್ ಫ್ರಂಟ್‍ ಜೊತೆ ಕಾಂಗ್ರೆಸ್‍ನ  ಮೈತ್ರಿ ಸೇರಿದಂತೆ, ತಮ್ಮ ಪಕ್ಷದ ಇತರ ನಿರ್ಧಾರಗಳನ್ನು ಅವರು ಬಹಿರಂಗವಾಗಿ ಟೀಕಿಸಿದ್ದರು. ನಂತರವೂ, ‘ಇದು ಪಕ್ಷದ ನಿರ್ಧಾರ. ಎಲ್ಲರೊಟ್ಟಿಗೆ ಕೆಲಸ ಮಾಡೋಣ’ ಎಂದು ಬಂಗಾಳ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು.

ಉತ್ತರ ಪ್ರದೇಶದ ಧೌರಾಹ್ರಾ ಕ್ಷೇತ್ರದ ಮಾಜಿ ಲೋಕಸಭಾ ಸಂಸದರಾದ ಜಿತಿನ್‍, ಉತ್ತರಪ್ರದೇಶದ ಉನ್ನತ ಕಾಂಗ್ರೆಸ್‍ ನಾಯಕರಲ್ಲಿ ಒಬ್ಬರಾಗಿದ್ದರು. ಈಗ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು ಇದು ಕಾಂಗ್ರೆಸ್‍ಗೆ ಹಿನ್ನಡೆ ಎನ್ನಲಾಗಿದೆ.

ಲೆಟರ್ ಬಾಂಬ್ ನಂತರ, ಉತ್ತರಪ್ರದೇಶದ ಕಾಂಗ್ರೆಸ್ ಘಟಕವು ಜಿ -23 ಗುಂಪಿನ ವಿರುದ್ಧ ಕ್ರಮಕೈಗೊಳ್ಳಲು ಕರೆ ನೀಡಿತ್ತು. ಜಿತಿನ್‍ ತಂದೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜಿತೇಂದ್ರ ಪ್ರಸಾದ್‍ ಅವರು 1999ರಲ್ಲಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸಿದ್ದರು ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಅವರು 2002ರಲ್ಲಿ ನಿಧನರಾದರು.

ರಾಹುಲ್ ಗಾಂಧಿಯವರ ಆಂತರಿಕ ವಲಯದಲ್ಲಿದ್ದ ಜಿತಿನ್ ಪ್ರಸಾದ ಅವರು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದರು.


ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...