Homeಮುಖಪುಟಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

- Advertisement -
- Advertisement -

ಹಿಂದೆ ರಾಹುಲ್‍ ಗಾಂಧಿಯವರಿಗೆ ನಿಕಟವಾಗಿದ್ದ ಕಾಂಗ್ರೆಸ್‍ ನಾಯಕ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ತನ್ನ ಕಚೇರಿಯಲ್ಲಿ ಕಾಂಗ್ರೆಸ್‍ ನಾಯಕತ್ವವು, ಪಂಜಾಬ್‍ ಕಾಂಗ್ರೆಸ್‍ನ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ಸಭೆ ನಡೆಸುತ್ತಿರುವ ಸಮಯದಲ್ಲೇ, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿನ ಪ್ರಧಾನ ಬ್ರಾಹ್ಮಣ ಮುಖವಾಗಿದ್ದ 47 ವರ್ಷದ ಜಿತಿನ್‍ ಪ್ರಸಾದ ಕಾಂಗ್ರೆಸ್‍ನಿಂದ ನಿರ್ಗಮಿಸಿದ್ದಾರೆ.

“ಬಿಜೆಪಿ ಮಾತ್ರ ನಿಜವಾದ ರಾಜಕೀಯ ಪಕ್ಷ. ಇದು ಏಕೈಕ ರಾಷ್ಟ್ರೀಯ ಪಕ್ಷ. ಉಳಿದ ಪಕ್ಷಗಳು ಪ್ರಾದೇಶಿಕ. ಬಿಜೆಪಿ ಮತ್ತು ಮೋದಿ ಮಾತ್ರ ದೇಶವು ಈಗ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಬಲ್ಲರು” ಎಂದು ಜಿತನ್ ಪ್ರಸಾದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ತೊರೆದ ನಂತರ ಜಿತಿನ್‍ ನಿರ್ಗಮನ ಎರಡನೇ ದೊಡ್ಡ ನಿರ್ಗಮನವಾಗಿದೆ. ಜಿತಿನ್‍ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂಬ ವದಂತಿಗಳನ್ನು ಅವರು 2019ರಲ್ಲಿ ನಿರಾಕರಿಸಿದ್ದರು. ಆ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್‍ನಲ್ಲೇ ಉಳಿಯಲು ಜಿತಿನ್‍ ಅವರಿಗೆ ಮನವರಿಕೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

“ನೀವು ಪ್ರತಿನಿಧಿಸುವ ಜನರಿಗೆ ಸಹಾಯ ಮಾಡಲು ಸಾಧ್ಯವಾಗದಿದ್ದರೆ ಒಂದು ಪಕ್ಷವಾಗಿ ಇರುವುದರ ಅರ್ಥವೇನು?” ಎಂದು ಜಿತಿನ್‍ ಕಾಂಗ್ರೆಸ್‍ ಕುರಿತು ಇಂದು ಹೇಳಿದರು.

‘ಕಾಂಗ್ರೆಸ್‍ ಜೊತೆಗಿನ 20 ವರ್ಷಗಳ ಪಯಣದಲ್ಲಿ ಇದೇನೂ  ಅವರ ಮೊದಲ ಬಾರಿಯ ಹತಾಶೆಯಲ್ಲ ಎಂಬುದು ರಹಸ್ಯವೇನೂ ಅಲ್ಲ. ಅವರು “ಜಿ -23” ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಭಾಗವಾಗಿದ್ದರು. ಈ ಗುಂಪು ಕಳೆದ ವರ್ಷ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳು ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಾವಧಿಯ ಜನಪ್ರಿಯ ನಾಯಕತ್ವಕ್ಕೆ ಕರೆ ನೀಡಿತ್ತು.

ಪಕ್ಷವು ಇದೆಲ್ಲದರ ತಿದ್ದುಪಡಿಯ ಬಗ್ಗೆ ಮಾತನಾಡಿದ್ದರೂ ಮತ್ತು ಸಮಿತಿಯನ್ನೂ ನೇಮಿಸಿದ್ದರೂ ವಾಸ್ತವದಲ್ಲಿ ಏನೂ ಬದಲಾಗಿಲ್ಲ.

ಈ ಪತ್ರದ ನಂತರ, ಯಾವುದೇ ಮುಖ್ಯ ಪಾತ್ರವನ್ನು ಪಡೆಯಬಹುದಾದ ಕೆಲವೇ “ಭಿನ್ನಮತೀಯರಲ್ಲಿ” ಜಿತಿನ್‍ ಒಬ್ಬರಾಗಿದ್ದರು. ಕಾಂಗ್ರೆಸ್‍ನ ಬಂಗಾಳ ಚುನಾವಣಾ ಪ್ರಚಾರದ ಕಾರ್ಯವನ್ನು ಅವರು ನಿರ್ವಹಿಸಿದರು, ಆದರೆ ಅಲ್ಲಿ ತೀವ್ರ ಹಿನ್ನಡೆಯ ಫಲಿತಾಂಶ ಬಂದಿತು.

ಮೌಲ್ವಿಯೊಬ್ಬರ  ನೇತೃತ್ವದ ಇಂಡಿಯನ್‍ ಸೆಕ್ಯುಲರ್ ಫ್ರಂಟ್‍ ಜೊತೆ ಕಾಂಗ್ರೆಸ್‍ನ  ಮೈತ್ರಿ ಸೇರಿದಂತೆ, ತಮ್ಮ ಪಕ್ಷದ ಇತರ ನಿರ್ಧಾರಗಳನ್ನು ಅವರು ಬಹಿರಂಗವಾಗಿ ಟೀಕಿಸಿದ್ದರು. ನಂತರವೂ, ‘ಇದು ಪಕ್ಷದ ನಿರ್ಧಾರ. ಎಲ್ಲರೊಟ್ಟಿಗೆ ಕೆಲಸ ಮಾಡೋಣ’ ಎಂದು ಬಂಗಾಳ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು.

ಉತ್ತರ ಪ್ರದೇಶದ ಧೌರಾಹ್ರಾ ಕ್ಷೇತ್ರದ ಮಾಜಿ ಲೋಕಸಭಾ ಸಂಸದರಾದ ಜಿತಿನ್‍, ಉತ್ತರಪ್ರದೇಶದ ಉನ್ನತ ಕಾಂಗ್ರೆಸ್‍ ನಾಯಕರಲ್ಲಿ ಒಬ್ಬರಾಗಿದ್ದರು. ಈಗ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು ಇದು ಕಾಂಗ್ರೆಸ್‍ಗೆ ಹಿನ್ನಡೆ ಎನ್ನಲಾಗಿದೆ.

ಲೆಟರ್ ಬಾಂಬ್ ನಂತರ, ಉತ್ತರಪ್ರದೇಶದ ಕಾಂಗ್ರೆಸ್ ಘಟಕವು ಜಿ -23 ಗುಂಪಿನ ವಿರುದ್ಧ ಕ್ರಮಕೈಗೊಳ್ಳಲು ಕರೆ ನೀಡಿತ್ತು. ಜಿತಿನ್‍ ತಂದೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜಿತೇಂದ್ರ ಪ್ರಸಾದ್‍ ಅವರು 1999ರಲ್ಲಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸಿದ್ದರು ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಅವರು 2002ರಲ್ಲಿ ನಿಧನರಾದರು.

ರಾಹುಲ್ ಗಾಂಧಿಯವರ ಆಂತರಿಕ ವಲಯದಲ್ಲಿದ್ದ ಜಿತಿನ್ ಪ್ರಸಾದ ಅವರು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದರು.


ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...