Homeಮುಖಪುಟಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

- Advertisement -
- Advertisement -

ಹಿಂದೆ ರಾಹುಲ್‍ ಗಾಂಧಿಯವರಿಗೆ ನಿಕಟವಾಗಿದ್ದ ಕಾಂಗ್ರೆಸ್‍ ನಾಯಕ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ತನ್ನ ಕಚೇರಿಯಲ್ಲಿ ಕಾಂಗ್ರೆಸ್‍ ನಾಯಕತ್ವವು, ಪಂಜಾಬ್‍ ಕಾಂಗ್ರೆಸ್‍ನ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ಸಭೆ ನಡೆಸುತ್ತಿರುವ ಸಮಯದಲ್ಲೇ, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿನ ಪ್ರಧಾನ ಬ್ರಾಹ್ಮಣ ಮುಖವಾಗಿದ್ದ 47 ವರ್ಷದ ಜಿತಿನ್‍ ಪ್ರಸಾದ ಕಾಂಗ್ರೆಸ್‍ನಿಂದ ನಿರ್ಗಮಿಸಿದ್ದಾರೆ.

“ಬಿಜೆಪಿ ಮಾತ್ರ ನಿಜವಾದ ರಾಜಕೀಯ ಪಕ್ಷ. ಇದು ಏಕೈಕ ರಾಷ್ಟ್ರೀಯ ಪಕ್ಷ. ಉಳಿದ ಪಕ್ಷಗಳು ಪ್ರಾದೇಶಿಕ. ಬಿಜೆಪಿ ಮತ್ತು ಮೋದಿ ಮಾತ್ರ ದೇಶವು ಈಗ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಬಲ್ಲರು” ಎಂದು ಜಿತನ್ ಪ್ರಸಾದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ತೊರೆದ ನಂತರ ಜಿತಿನ್‍ ನಿರ್ಗಮನ ಎರಡನೇ ದೊಡ್ಡ ನಿರ್ಗಮನವಾಗಿದೆ. ಜಿತಿನ್‍ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂಬ ವದಂತಿಗಳನ್ನು ಅವರು 2019ರಲ್ಲಿ ನಿರಾಕರಿಸಿದ್ದರು. ಆ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್‍ನಲ್ಲೇ ಉಳಿಯಲು ಜಿತಿನ್‍ ಅವರಿಗೆ ಮನವರಿಕೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

“ನೀವು ಪ್ರತಿನಿಧಿಸುವ ಜನರಿಗೆ ಸಹಾಯ ಮಾಡಲು ಸಾಧ್ಯವಾಗದಿದ್ದರೆ ಒಂದು ಪಕ್ಷವಾಗಿ ಇರುವುದರ ಅರ್ಥವೇನು?” ಎಂದು ಜಿತಿನ್‍ ಕಾಂಗ್ರೆಸ್‍ ಕುರಿತು ಇಂದು ಹೇಳಿದರು.

‘ಕಾಂಗ್ರೆಸ್‍ ಜೊತೆಗಿನ 20 ವರ್ಷಗಳ ಪಯಣದಲ್ಲಿ ಇದೇನೂ  ಅವರ ಮೊದಲ ಬಾರಿಯ ಹತಾಶೆಯಲ್ಲ ಎಂಬುದು ರಹಸ್ಯವೇನೂ ಅಲ್ಲ. ಅವರು “ಜಿ -23” ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಭಾಗವಾಗಿದ್ದರು. ಈ ಗುಂಪು ಕಳೆದ ವರ್ಷ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳು ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಾವಧಿಯ ಜನಪ್ರಿಯ ನಾಯಕತ್ವಕ್ಕೆ ಕರೆ ನೀಡಿತ್ತು.

ಪಕ್ಷವು ಇದೆಲ್ಲದರ ತಿದ್ದುಪಡಿಯ ಬಗ್ಗೆ ಮಾತನಾಡಿದ್ದರೂ ಮತ್ತು ಸಮಿತಿಯನ್ನೂ ನೇಮಿಸಿದ್ದರೂ ವಾಸ್ತವದಲ್ಲಿ ಏನೂ ಬದಲಾಗಿಲ್ಲ.

ಈ ಪತ್ರದ ನಂತರ, ಯಾವುದೇ ಮುಖ್ಯ ಪಾತ್ರವನ್ನು ಪಡೆಯಬಹುದಾದ ಕೆಲವೇ “ಭಿನ್ನಮತೀಯರಲ್ಲಿ” ಜಿತಿನ್‍ ಒಬ್ಬರಾಗಿದ್ದರು. ಕಾಂಗ್ರೆಸ್‍ನ ಬಂಗಾಳ ಚುನಾವಣಾ ಪ್ರಚಾರದ ಕಾರ್ಯವನ್ನು ಅವರು ನಿರ್ವಹಿಸಿದರು, ಆದರೆ ಅಲ್ಲಿ ತೀವ್ರ ಹಿನ್ನಡೆಯ ಫಲಿತಾಂಶ ಬಂದಿತು.

ಮೌಲ್ವಿಯೊಬ್ಬರ  ನೇತೃತ್ವದ ಇಂಡಿಯನ್‍ ಸೆಕ್ಯುಲರ್ ಫ್ರಂಟ್‍ ಜೊತೆ ಕಾಂಗ್ರೆಸ್‍ನ  ಮೈತ್ರಿ ಸೇರಿದಂತೆ, ತಮ್ಮ ಪಕ್ಷದ ಇತರ ನಿರ್ಧಾರಗಳನ್ನು ಅವರು ಬಹಿರಂಗವಾಗಿ ಟೀಕಿಸಿದ್ದರು. ನಂತರವೂ, ‘ಇದು ಪಕ್ಷದ ನಿರ್ಧಾರ. ಎಲ್ಲರೊಟ್ಟಿಗೆ ಕೆಲಸ ಮಾಡೋಣ’ ಎಂದು ಬಂಗಾಳ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು.

ಉತ್ತರ ಪ್ರದೇಶದ ಧೌರಾಹ್ರಾ ಕ್ಷೇತ್ರದ ಮಾಜಿ ಲೋಕಸಭಾ ಸಂಸದರಾದ ಜಿತಿನ್‍, ಉತ್ತರಪ್ರದೇಶದ ಉನ್ನತ ಕಾಂಗ್ರೆಸ್‍ ನಾಯಕರಲ್ಲಿ ಒಬ್ಬರಾಗಿದ್ದರು. ಈಗ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು ಇದು ಕಾಂಗ್ರೆಸ್‍ಗೆ ಹಿನ್ನಡೆ ಎನ್ನಲಾಗಿದೆ.

ಲೆಟರ್ ಬಾಂಬ್ ನಂತರ, ಉತ್ತರಪ್ರದೇಶದ ಕಾಂಗ್ರೆಸ್ ಘಟಕವು ಜಿ -23 ಗುಂಪಿನ ವಿರುದ್ಧ ಕ್ರಮಕೈಗೊಳ್ಳಲು ಕರೆ ನೀಡಿತ್ತು. ಜಿತಿನ್‍ ತಂದೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜಿತೇಂದ್ರ ಪ್ರಸಾದ್‍ ಅವರು 1999ರಲ್ಲಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸಿದ್ದರು ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಅವರು 2002ರಲ್ಲಿ ನಿಧನರಾದರು.

ರಾಹುಲ್ ಗಾಂಧಿಯವರ ಆಂತರಿಕ ವಲಯದಲ್ಲಿದ್ದ ಜಿತಿನ್ ಪ್ರಸಾದ ಅವರು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದರು.


ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...