Homeಮುಖಪುಟಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

- Advertisement -
- Advertisement -

ಹಿಂದೆ ರಾಹುಲ್‍ ಗಾಂಧಿಯವರಿಗೆ ನಿಕಟವಾಗಿದ್ದ ಕಾಂಗ್ರೆಸ್‍ ನಾಯಕ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ತನ್ನ ಕಚೇರಿಯಲ್ಲಿ ಕಾಂಗ್ರೆಸ್‍ ನಾಯಕತ್ವವು, ಪಂಜಾಬ್‍ ಕಾಂಗ್ರೆಸ್‍ನ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ಸಭೆ ನಡೆಸುತ್ತಿರುವ ಸಮಯದಲ್ಲೇ, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿನ ಪ್ರಧಾನ ಬ್ರಾಹ್ಮಣ ಮುಖವಾಗಿದ್ದ 47 ವರ್ಷದ ಜಿತಿನ್‍ ಪ್ರಸಾದ ಕಾಂಗ್ರೆಸ್‍ನಿಂದ ನಿರ್ಗಮಿಸಿದ್ದಾರೆ.

“ಬಿಜೆಪಿ ಮಾತ್ರ ನಿಜವಾದ ರಾಜಕೀಯ ಪಕ್ಷ. ಇದು ಏಕೈಕ ರಾಷ್ಟ್ರೀಯ ಪಕ್ಷ. ಉಳಿದ ಪಕ್ಷಗಳು ಪ್ರಾದೇಶಿಕ. ಬಿಜೆಪಿ ಮತ್ತು ಮೋದಿ ಮಾತ್ರ ದೇಶವು ಈಗ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಬಲ್ಲರು” ಎಂದು ಜಿತನ್ ಪ್ರಸಾದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ತೊರೆದ ನಂತರ ಜಿತಿನ್‍ ನಿರ್ಗಮನ ಎರಡನೇ ದೊಡ್ಡ ನಿರ್ಗಮನವಾಗಿದೆ. ಜಿತಿನ್‍ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂಬ ವದಂತಿಗಳನ್ನು ಅವರು 2019ರಲ್ಲಿ ನಿರಾಕರಿಸಿದ್ದರು. ಆ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್‍ನಲ್ಲೇ ಉಳಿಯಲು ಜಿತಿನ್‍ ಅವರಿಗೆ ಮನವರಿಕೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

“ನೀವು ಪ್ರತಿನಿಧಿಸುವ ಜನರಿಗೆ ಸಹಾಯ ಮಾಡಲು ಸಾಧ್ಯವಾಗದಿದ್ದರೆ ಒಂದು ಪಕ್ಷವಾಗಿ ಇರುವುದರ ಅರ್ಥವೇನು?” ಎಂದು ಜಿತಿನ್‍ ಕಾಂಗ್ರೆಸ್‍ ಕುರಿತು ಇಂದು ಹೇಳಿದರು.

‘ಕಾಂಗ್ರೆಸ್‍ ಜೊತೆಗಿನ 20 ವರ್ಷಗಳ ಪಯಣದಲ್ಲಿ ಇದೇನೂ  ಅವರ ಮೊದಲ ಬಾರಿಯ ಹತಾಶೆಯಲ್ಲ ಎಂಬುದು ರಹಸ್ಯವೇನೂ ಅಲ್ಲ. ಅವರು “ಜಿ -23” ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಭಾಗವಾಗಿದ್ದರು. ಈ ಗುಂಪು ಕಳೆದ ವರ್ಷ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳು ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಾವಧಿಯ ಜನಪ್ರಿಯ ನಾಯಕತ್ವಕ್ಕೆ ಕರೆ ನೀಡಿತ್ತು.

ಪಕ್ಷವು ಇದೆಲ್ಲದರ ತಿದ್ದುಪಡಿಯ ಬಗ್ಗೆ ಮಾತನಾಡಿದ್ದರೂ ಮತ್ತು ಸಮಿತಿಯನ್ನೂ ನೇಮಿಸಿದ್ದರೂ ವಾಸ್ತವದಲ್ಲಿ ಏನೂ ಬದಲಾಗಿಲ್ಲ.

ಈ ಪತ್ರದ ನಂತರ, ಯಾವುದೇ ಮುಖ್ಯ ಪಾತ್ರವನ್ನು ಪಡೆಯಬಹುದಾದ ಕೆಲವೇ “ಭಿನ್ನಮತೀಯರಲ್ಲಿ” ಜಿತಿನ್‍ ಒಬ್ಬರಾಗಿದ್ದರು. ಕಾಂಗ್ರೆಸ್‍ನ ಬಂಗಾಳ ಚುನಾವಣಾ ಪ್ರಚಾರದ ಕಾರ್ಯವನ್ನು ಅವರು ನಿರ್ವಹಿಸಿದರು, ಆದರೆ ಅಲ್ಲಿ ತೀವ್ರ ಹಿನ್ನಡೆಯ ಫಲಿತಾಂಶ ಬಂದಿತು.

ಮೌಲ್ವಿಯೊಬ್ಬರ  ನೇತೃತ್ವದ ಇಂಡಿಯನ್‍ ಸೆಕ್ಯುಲರ್ ಫ್ರಂಟ್‍ ಜೊತೆ ಕಾಂಗ್ರೆಸ್‍ನ  ಮೈತ್ರಿ ಸೇರಿದಂತೆ, ತಮ್ಮ ಪಕ್ಷದ ಇತರ ನಿರ್ಧಾರಗಳನ್ನು ಅವರು ಬಹಿರಂಗವಾಗಿ ಟೀಕಿಸಿದ್ದರು. ನಂತರವೂ, ‘ಇದು ಪಕ್ಷದ ನಿರ್ಧಾರ. ಎಲ್ಲರೊಟ್ಟಿಗೆ ಕೆಲಸ ಮಾಡೋಣ’ ಎಂದು ಬಂಗಾಳ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು.

ಉತ್ತರ ಪ್ರದೇಶದ ಧೌರಾಹ್ರಾ ಕ್ಷೇತ್ರದ ಮಾಜಿ ಲೋಕಸಭಾ ಸಂಸದರಾದ ಜಿತಿನ್‍, ಉತ್ತರಪ್ರದೇಶದ ಉನ್ನತ ಕಾಂಗ್ರೆಸ್‍ ನಾಯಕರಲ್ಲಿ ಒಬ್ಬರಾಗಿದ್ದರು. ಈಗ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು ಇದು ಕಾಂಗ್ರೆಸ್‍ಗೆ ಹಿನ್ನಡೆ ಎನ್ನಲಾಗಿದೆ.

ಲೆಟರ್ ಬಾಂಬ್ ನಂತರ, ಉತ್ತರಪ್ರದೇಶದ ಕಾಂಗ್ರೆಸ್ ಘಟಕವು ಜಿ -23 ಗುಂಪಿನ ವಿರುದ್ಧ ಕ್ರಮಕೈಗೊಳ್ಳಲು ಕರೆ ನೀಡಿತ್ತು. ಜಿತಿನ್‍ ತಂದೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜಿತೇಂದ್ರ ಪ್ರಸಾದ್‍ ಅವರು 1999ರಲ್ಲಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸಿದ್ದರು ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಅವರು 2002ರಲ್ಲಿ ನಿಧನರಾದರು.

ರಾಹುಲ್ ಗಾಂಧಿಯವರ ಆಂತರಿಕ ವಲಯದಲ್ಲಿದ್ದ ಜಿತಿನ್ ಪ್ರಸಾದ ಅವರು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದರು.


ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...