Homeಮುಖಪುಟಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

- Advertisement -
- Advertisement -

ಹಿಂದೆ ರಾಹುಲ್‍ ಗಾಂಧಿಯವರಿಗೆ ನಿಕಟವಾಗಿದ್ದ ಕಾಂಗ್ರೆಸ್‍ ನಾಯಕ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ತನ್ನ ಕಚೇರಿಯಲ್ಲಿ ಕಾಂಗ್ರೆಸ್‍ ನಾಯಕತ್ವವು, ಪಂಜಾಬ್‍ ಕಾಂಗ್ರೆಸ್‍ನ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ಸಭೆ ನಡೆಸುತ್ತಿರುವ ಸಮಯದಲ್ಲೇ, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿನ ಪ್ರಧಾನ ಬ್ರಾಹ್ಮಣ ಮುಖವಾಗಿದ್ದ 47 ವರ್ಷದ ಜಿತಿನ್‍ ಪ್ರಸಾದ ಕಾಂಗ್ರೆಸ್‍ನಿಂದ ನಿರ್ಗಮಿಸಿದ್ದಾರೆ.

“ಬಿಜೆಪಿ ಮಾತ್ರ ನಿಜವಾದ ರಾಜಕೀಯ ಪಕ್ಷ. ಇದು ಏಕೈಕ ರಾಷ್ಟ್ರೀಯ ಪಕ್ಷ. ಉಳಿದ ಪಕ್ಷಗಳು ಪ್ರಾದೇಶಿಕ. ಬಿಜೆಪಿ ಮತ್ತು ಮೋದಿ ಮಾತ್ರ ದೇಶವು ಈಗ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಬಲ್ಲರು” ಎಂದು ಜಿತನ್ ಪ್ರಸಾದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ತೊರೆದ ನಂತರ ಜಿತಿನ್‍ ನಿರ್ಗಮನ ಎರಡನೇ ದೊಡ್ಡ ನಿರ್ಗಮನವಾಗಿದೆ. ಜಿತಿನ್‍ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂಬ ವದಂತಿಗಳನ್ನು ಅವರು 2019ರಲ್ಲಿ ನಿರಾಕರಿಸಿದ್ದರು. ಆ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್‍ನಲ್ಲೇ ಉಳಿಯಲು ಜಿತಿನ್‍ ಅವರಿಗೆ ಮನವರಿಕೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

“ನೀವು ಪ್ರತಿನಿಧಿಸುವ ಜನರಿಗೆ ಸಹಾಯ ಮಾಡಲು ಸಾಧ್ಯವಾಗದಿದ್ದರೆ ಒಂದು ಪಕ್ಷವಾಗಿ ಇರುವುದರ ಅರ್ಥವೇನು?” ಎಂದು ಜಿತಿನ್‍ ಕಾಂಗ್ರೆಸ್‍ ಕುರಿತು ಇಂದು ಹೇಳಿದರು.

‘ಕಾಂಗ್ರೆಸ್‍ ಜೊತೆಗಿನ 20 ವರ್ಷಗಳ ಪಯಣದಲ್ಲಿ ಇದೇನೂ  ಅವರ ಮೊದಲ ಬಾರಿಯ ಹತಾಶೆಯಲ್ಲ ಎಂಬುದು ರಹಸ್ಯವೇನೂ ಅಲ್ಲ. ಅವರು “ಜಿ -23” ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಭಾಗವಾಗಿದ್ದರು. ಈ ಗುಂಪು ಕಳೆದ ವರ್ಷ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳು ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಾವಧಿಯ ಜನಪ್ರಿಯ ನಾಯಕತ್ವಕ್ಕೆ ಕರೆ ನೀಡಿತ್ತು.

ಪಕ್ಷವು ಇದೆಲ್ಲದರ ತಿದ್ದುಪಡಿಯ ಬಗ್ಗೆ ಮಾತನಾಡಿದ್ದರೂ ಮತ್ತು ಸಮಿತಿಯನ್ನೂ ನೇಮಿಸಿದ್ದರೂ ವಾಸ್ತವದಲ್ಲಿ ಏನೂ ಬದಲಾಗಿಲ್ಲ.

ಈ ಪತ್ರದ ನಂತರ, ಯಾವುದೇ ಮುಖ್ಯ ಪಾತ್ರವನ್ನು ಪಡೆಯಬಹುದಾದ ಕೆಲವೇ “ಭಿನ್ನಮತೀಯರಲ್ಲಿ” ಜಿತಿನ್‍ ಒಬ್ಬರಾಗಿದ್ದರು. ಕಾಂಗ್ರೆಸ್‍ನ ಬಂಗಾಳ ಚುನಾವಣಾ ಪ್ರಚಾರದ ಕಾರ್ಯವನ್ನು ಅವರು ನಿರ್ವಹಿಸಿದರು, ಆದರೆ ಅಲ್ಲಿ ತೀವ್ರ ಹಿನ್ನಡೆಯ ಫಲಿತಾಂಶ ಬಂದಿತು.

ಮೌಲ್ವಿಯೊಬ್ಬರ  ನೇತೃತ್ವದ ಇಂಡಿಯನ್‍ ಸೆಕ್ಯುಲರ್ ಫ್ರಂಟ್‍ ಜೊತೆ ಕಾಂಗ್ರೆಸ್‍ನ  ಮೈತ್ರಿ ಸೇರಿದಂತೆ, ತಮ್ಮ ಪಕ್ಷದ ಇತರ ನಿರ್ಧಾರಗಳನ್ನು ಅವರು ಬಹಿರಂಗವಾಗಿ ಟೀಕಿಸಿದ್ದರು. ನಂತರವೂ, ‘ಇದು ಪಕ್ಷದ ನಿರ್ಧಾರ. ಎಲ್ಲರೊಟ್ಟಿಗೆ ಕೆಲಸ ಮಾಡೋಣ’ ಎಂದು ಬಂಗಾಳ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು.

ಉತ್ತರ ಪ್ರದೇಶದ ಧೌರಾಹ್ರಾ ಕ್ಷೇತ್ರದ ಮಾಜಿ ಲೋಕಸಭಾ ಸಂಸದರಾದ ಜಿತಿನ್‍, ಉತ್ತರಪ್ರದೇಶದ ಉನ್ನತ ಕಾಂಗ್ರೆಸ್‍ ನಾಯಕರಲ್ಲಿ ಒಬ್ಬರಾಗಿದ್ದರು. ಈಗ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು ಇದು ಕಾಂಗ್ರೆಸ್‍ಗೆ ಹಿನ್ನಡೆ ಎನ್ನಲಾಗಿದೆ.

ಲೆಟರ್ ಬಾಂಬ್ ನಂತರ, ಉತ್ತರಪ್ರದೇಶದ ಕಾಂಗ್ರೆಸ್ ಘಟಕವು ಜಿ -23 ಗುಂಪಿನ ವಿರುದ್ಧ ಕ್ರಮಕೈಗೊಳ್ಳಲು ಕರೆ ನೀಡಿತ್ತು. ಜಿತಿನ್‍ ತಂದೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜಿತೇಂದ್ರ ಪ್ರಸಾದ್‍ ಅವರು 1999ರಲ್ಲಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸಿದ್ದರು ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಅವರು 2002ರಲ್ಲಿ ನಿಧನರಾದರು.

ರಾಹುಲ್ ಗಾಂಧಿಯವರ ಆಂತರಿಕ ವಲಯದಲ್ಲಿದ್ದ ಜಿತಿನ್ ಪ್ರಸಾದ ಅವರು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದರು.


ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...