Homeಮುಖಪುಟಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

- Advertisement -
- Advertisement -

ಹಿಂದೆ ರಾಹುಲ್‍ ಗಾಂಧಿಯವರಿಗೆ ನಿಕಟವಾಗಿದ್ದ ಕಾಂಗ್ರೆಸ್‍ ನಾಯಕ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ತನ್ನ ಕಚೇರಿಯಲ್ಲಿ ಕಾಂಗ್ರೆಸ್‍ ನಾಯಕತ್ವವು, ಪಂಜಾಬ್‍ ಕಾಂಗ್ರೆಸ್‍ನ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ಸಭೆ ನಡೆಸುತ್ತಿರುವ ಸಮಯದಲ್ಲೇ, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿನ ಪ್ರಧಾನ ಬ್ರಾಹ್ಮಣ ಮುಖವಾಗಿದ್ದ 47 ವರ್ಷದ ಜಿತಿನ್‍ ಪ್ರಸಾದ ಕಾಂಗ್ರೆಸ್‍ನಿಂದ ನಿರ್ಗಮಿಸಿದ್ದಾರೆ.

“ಬಿಜೆಪಿ ಮಾತ್ರ ನಿಜವಾದ ರಾಜಕೀಯ ಪಕ್ಷ. ಇದು ಏಕೈಕ ರಾಷ್ಟ್ರೀಯ ಪಕ್ಷ. ಉಳಿದ ಪಕ್ಷಗಳು ಪ್ರಾದೇಶಿಕ. ಬಿಜೆಪಿ ಮತ್ತು ಮೋದಿ ಮಾತ್ರ ದೇಶವು ಈಗ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಬಲ್ಲರು” ಎಂದು ಜಿತನ್ ಪ್ರಸಾದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ತೊರೆದ ನಂತರ ಜಿತಿನ್‍ ನಿರ್ಗಮನ ಎರಡನೇ ದೊಡ್ಡ ನಿರ್ಗಮನವಾಗಿದೆ. ಜಿತಿನ್‍ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂಬ ವದಂತಿಗಳನ್ನು ಅವರು 2019ರಲ್ಲಿ ನಿರಾಕರಿಸಿದ್ದರು. ಆ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್‍ನಲ್ಲೇ ಉಳಿಯಲು ಜಿತಿನ್‍ ಅವರಿಗೆ ಮನವರಿಕೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

“ನೀವು ಪ್ರತಿನಿಧಿಸುವ ಜನರಿಗೆ ಸಹಾಯ ಮಾಡಲು ಸಾಧ್ಯವಾಗದಿದ್ದರೆ ಒಂದು ಪಕ್ಷವಾಗಿ ಇರುವುದರ ಅರ್ಥವೇನು?” ಎಂದು ಜಿತಿನ್‍ ಕಾಂಗ್ರೆಸ್‍ ಕುರಿತು ಇಂದು ಹೇಳಿದರು.

‘ಕಾಂಗ್ರೆಸ್‍ ಜೊತೆಗಿನ 20 ವರ್ಷಗಳ ಪಯಣದಲ್ಲಿ ಇದೇನೂ  ಅವರ ಮೊದಲ ಬಾರಿಯ ಹತಾಶೆಯಲ್ಲ ಎಂಬುದು ರಹಸ್ಯವೇನೂ ಅಲ್ಲ. ಅವರು “ಜಿ -23” ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಭಾಗವಾಗಿದ್ದರು. ಈ ಗುಂಪು ಕಳೆದ ವರ್ಷ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳು ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಾವಧಿಯ ಜನಪ್ರಿಯ ನಾಯಕತ್ವಕ್ಕೆ ಕರೆ ನೀಡಿತ್ತು.

ಪಕ್ಷವು ಇದೆಲ್ಲದರ ತಿದ್ದುಪಡಿಯ ಬಗ್ಗೆ ಮಾತನಾಡಿದ್ದರೂ ಮತ್ತು ಸಮಿತಿಯನ್ನೂ ನೇಮಿಸಿದ್ದರೂ ವಾಸ್ತವದಲ್ಲಿ ಏನೂ ಬದಲಾಗಿಲ್ಲ.

ಈ ಪತ್ರದ ನಂತರ, ಯಾವುದೇ ಮುಖ್ಯ ಪಾತ್ರವನ್ನು ಪಡೆಯಬಹುದಾದ ಕೆಲವೇ “ಭಿನ್ನಮತೀಯರಲ್ಲಿ” ಜಿತಿನ್‍ ಒಬ್ಬರಾಗಿದ್ದರು. ಕಾಂಗ್ರೆಸ್‍ನ ಬಂಗಾಳ ಚುನಾವಣಾ ಪ್ರಚಾರದ ಕಾರ್ಯವನ್ನು ಅವರು ನಿರ್ವಹಿಸಿದರು, ಆದರೆ ಅಲ್ಲಿ ತೀವ್ರ ಹಿನ್ನಡೆಯ ಫಲಿತಾಂಶ ಬಂದಿತು.

ಮೌಲ್ವಿಯೊಬ್ಬರ  ನೇತೃತ್ವದ ಇಂಡಿಯನ್‍ ಸೆಕ್ಯುಲರ್ ಫ್ರಂಟ್‍ ಜೊತೆ ಕಾಂಗ್ರೆಸ್‍ನ  ಮೈತ್ರಿ ಸೇರಿದಂತೆ, ತಮ್ಮ ಪಕ್ಷದ ಇತರ ನಿರ್ಧಾರಗಳನ್ನು ಅವರು ಬಹಿರಂಗವಾಗಿ ಟೀಕಿಸಿದ್ದರು. ನಂತರವೂ, ‘ಇದು ಪಕ್ಷದ ನಿರ್ಧಾರ. ಎಲ್ಲರೊಟ್ಟಿಗೆ ಕೆಲಸ ಮಾಡೋಣ’ ಎಂದು ಬಂಗಾಳ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು.

ಉತ್ತರ ಪ್ರದೇಶದ ಧೌರಾಹ್ರಾ ಕ್ಷೇತ್ರದ ಮಾಜಿ ಲೋಕಸಭಾ ಸಂಸದರಾದ ಜಿತಿನ್‍, ಉತ್ತರಪ್ರದೇಶದ ಉನ್ನತ ಕಾಂಗ್ರೆಸ್‍ ನಾಯಕರಲ್ಲಿ ಒಬ್ಬರಾಗಿದ್ದರು. ಈಗ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು ಇದು ಕಾಂಗ್ರೆಸ್‍ಗೆ ಹಿನ್ನಡೆ ಎನ್ನಲಾಗಿದೆ.

ಲೆಟರ್ ಬಾಂಬ್ ನಂತರ, ಉತ್ತರಪ್ರದೇಶದ ಕಾಂಗ್ರೆಸ್ ಘಟಕವು ಜಿ -23 ಗುಂಪಿನ ವಿರುದ್ಧ ಕ್ರಮಕೈಗೊಳ್ಳಲು ಕರೆ ನೀಡಿತ್ತು. ಜಿತಿನ್‍ ತಂದೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜಿತೇಂದ್ರ ಪ್ರಸಾದ್‍ ಅವರು 1999ರಲ್ಲಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸಿದ್ದರು ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಅವರು 2002ರಲ್ಲಿ ನಿಧನರಾದರು.

ರಾಹುಲ್ ಗಾಂಧಿಯವರ ಆಂತರಿಕ ವಲಯದಲ್ಲಿದ್ದ ಜಿತಿನ್ ಪ್ರಸಾದ ಅವರು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದರು.


ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...