Homeಮುಖಪುಟಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

- Advertisement -
- Advertisement -

ಹಿಂದೆ ರಾಹುಲ್‍ ಗಾಂಧಿಯವರಿಗೆ ನಿಕಟವಾಗಿದ್ದ ಕಾಂಗ್ರೆಸ್‍ ನಾಯಕ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ತನ್ನ ಕಚೇರಿಯಲ್ಲಿ ಕಾಂಗ್ರೆಸ್‍ ನಾಯಕತ್ವವು, ಪಂಜಾಬ್‍ ಕಾಂಗ್ರೆಸ್‍ನ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ಸಭೆ ನಡೆಸುತ್ತಿರುವ ಸಮಯದಲ್ಲೇ, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ಸಿನ ಪ್ರಧಾನ ಬ್ರಾಹ್ಮಣ ಮುಖವಾಗಿದ್ದ 47 ವರ್ಷದ ಜಿತಿನ್‍ ಪ್ರಸಾದ ಕಾಂಗ್ರೆಸ್‍ನಿಂದ ನಿರ್ಗಮಿಸಿದ್ದಾರೆ.

“ಬಿಜೆಪಿ ಮಾತ್ರ ನಿಜವಾದ ರಾಜಕೀಯ ಪಕ್ಷ. ಇದು ಏಕೈಕ ರಾಷ್ಟ್ರೀಯ ಪಕ್ಷ. ಉಳಿದ ಪಕ್ಷಗಳು ಪ್ರಾದೇಶಿಕ. ಬಿಜೆಪಿ ಮತ್ತು ಮೋದಿ ಮಾತ್ರ ದೇಶವು ಈಗ ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಬಲ್ಲರು” ಎಂದು ಜಿತನ್ ಪ್ರಸಾದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ತೊರೆದ ನಂತರ ಜಿತಿನ್‍ ನಿರ್ಗಮನ ಎರಡನೇ ದೊಡ್ಡ ನಿರ್ಗಮನವಾಗಿದೆ. ಜಿತಿನ್‍ ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂಬ ವದಂತಿಗಳನ್ನು ಅವರು 2019ರಲ್ಲಿ ನಿರಾಕರಿಸಿದ್ದರು. ಆ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್‍ನಲ್ಲೇ ಉಳಿಯಲು ಜಿತಿನ್‍ ಅವರಿಗೆ ಮನವರಿಕೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

“ನೀವು ಪ್ರತಿನಿಧಿಸುವ ಜನರಿಗೆ ಸಹಾಯ ಮಾಡಲು ಸಾಧ್ಯವಾಗದಿದ್ದರೆ ಒಂದು ಪಕ್ಷವಾಗಿ ಇರುವುದರ ಅರ್ಥವೇನು?” ಎಂದು ಜಿತಿನ್‍ ಕಾಂಗ್ರೆಸ್‍ ಕುರಿತು ಇಂದು ಹೇಳಿದರು.

‘ಕಾಂಗ್ರೆಸ್‍ ಜೊತೆಗಿನ 20 ವರ್ಷಗಳ ಪಯಣದಲ್ಲಿ ಇದೇನೂ  ಅವರ ಮೊದಲ ಬಾರಿಯ ಹತಾಶೆಯಲ್ಲ ಎಂಬುದು ರಹಸ್ಯವೇನೂ ಅಲ್ಲ. ಅವರು “ಜಿ -23” ಅಥವಾ 23 ಕಾಂಗ್ರೆಸ್ ನಾಯಕರ ಗುಂಪಿನ ಭಾಗವಾಗಿದ್ದರು. ಈ ಗುಂಪು ಕಳೆದ ವರ್ಷ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳು ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಾವಧಿಯ ಜನಪ್ರಿಯ ನಾಯಕತ್ವಕ್ಕೆ ಕರೆ ನೀಡಿತ್ತು.

ಪಕ್ಷವು ಇದೆಲ್ಲದರ ತಿದ್ದುಪಡಿಯ ಬಗ್ಗೆ ಮಾತನಾಡಿದ್ದರೂ ಮತ್ತು ಸಮಿತಿಯನ್ನೂ ನೇಮಿಸಿದ್ದರೂ ವಾಸ್ತವದಲ್ಲಿ ಏನೂ ಬದಲಾಗಿಲ್ಲ.

ಈ ಪತ್ರದ ನಂತರ, ಯಾವುದೇ ಮುಖ್ಯ ಪಾತ್ರವನ್ನು ಪಡೆಯಬಹುದಾದ ಕೆಲವೇ “ಭಿನ್ನಮತೀಯರಲ್ಲಿ” ಜಿತಿನ್‍ ಒಬ್ಬರಾಗಿದ್ದರು. ಕಾಂಗ್ರೆಸ್‍ನ ಬಂಗಾಳ ಚುನಾವಣಾ ಪ್ರಚಾರದ ಕಾರ್ಯವನ್ನು ಅವರು ನಿರ್ವಹಿಸಿದರು, ಆದರೆ ಅಲ್ಲಿ ತೀವ್ರ ಹಿನ್ನಡೆಯ ಫಲಿತಾಂಶ ಬಂದಿತು.

ಮೌಲ್ವಿಯೊಬ್ಬರ  ನೇತೃತ್ವದ ಇಂಡಿಯನ್‍ ಸೆಕ್ಯುಲರ್ ಫ್ರಂಟ್‍ ಜೊತೆ ಕಾಂಗ್ರೆಸ್‍ನ  ಮೈತ್ರಿ ಸೇರಿದಂತೆ, ತಮ್ಮ ಪಕ್ಷದ ಇತರ ನಿರ್ಧಾರಗಳನ್ನು ಅವರು ಬಹಿರಂಗವಾಗಿ ಟೀಕಿಸಿದ್ದರು. ನಂತರವೂ, ‘ಇದು ಪಕ್ಷದ ನಿರ್ಧಾರ. ಎಲ್ಲರೊಟ್ಟಿಗೆ ಕೆಲಸ ಮಾಡೋಣ’ ಎಂದು ಬಂಗಾಳ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು.

ಉತ್ತರ ಪ್ರದೇಶದ ಧೌರಾಹ್ರಾ ಕ್ಷೇತ್ರದ ಮಾಜಿ ಲೋಕಸಭಾ ಸಂಸದರಾದ ಜಿತಿನ್‍, ಉತ್ತರಪ್ರದೇಶದ ಉನ್ನತ ಕಾಂಗ್ರೆಸ್‍ ನಾಯಕರಲ್ಲಿ ಒಬ್ಬರಾಗಿದ್ದರು. ಈಗ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು ಇದು ಕಾಂಗ್ರೆಸ್‍ಗೆ ಹಿನ್ನಡೆ ಎನ್ನಲಾಗಿದೆ.

ಲೆಟರ್ ಬಾಂಬ್ ನಂತರ, ಉತ್ತರಪ್ರದೇಶದ ಕಾಂಗ್ರೆಸ್ ಘಟಕವು ಜಿ -23 ಗುಂಪಿನ ವಿರುದ್ಧ ಕ್ರಮಕೈಗೊಳ್ಳಲು ಕರೆ ನೀಡಿತ್ತು. ಜಿತಿನ್‍ ತಂದೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜಿತೇಂದ್ರ ಪ್ರಸಾದ್‍ ಅವರು 1999ರಲ್ಲಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸಿದ್ದರು ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಅವರು 2002ರಲ್ಲಿ ನಿಧನರಾದರು.

ರಾಹುಲ್ ಗಾಂಧಿಯವರ ಆಂತರಿಕ ವಲಯದಲ್ಲಿದ್ದ ಜಿತಿನ್ ಪ್ರಸಾದ ಅವರು ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿದ್ದರು.


ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅನುಪ್‌ ಚಂದ್ರ ಪಾಂಡೆ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ...

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...