Homeಮುಖಪುಟಉತ್ತರ ಪ್ರದೇಶದಲ್ಲಿ ಮೃತದೇಹಗಳಿಗೆ ಸಿಗದ ಗೌರವ, ಕಸದ ವಾಹನದಲ್ಲಿ ಸ್ಮಶಾನಕ್ಕೆ ರವಾನೆ

ಉತ್ತರ ಪ್ರದೇಶದಲ್ಲಿ ಮೃತದೇಹಗಳಿಗೆ ಸಿಗದ ಗೌರವ, ಕಸದ ವಾಹನದಲ್ಲಿ ಸ್ಮಶಾನಕ್ಕೆ ರವಾನೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕೊರೊನಾ ಸಾವುಗಳ ಸಂಖ್ಯೆಯಲ್ಲಿ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಈಡು ಮಾಡಿದೆ. ಇವುಗಳ ಮಧ್ಯೆಯೇ ಮೃತದೇಹಗಳಿಗೆ ಕನಿಷ್ಠ ಗೌರವ ಕೂಡ ದೊರಕುತ್ತಿಲ್ಲ ಎಂಬುದು ಹಲವು ವಿಡಿಯೊ ದೃಶ್ಯಗಳು ಸ್ಪಷ್ಟಪಡಿಸುತ್ತಿವೆ.

ಕಳೆದ ಎರಡು ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿತ್ತು. ಈಗ ಮೃತದೇಹವನ್ನು ಕನಿಷ್ಠ ಗೌರವ ನೀಡದೇ ಕಸದ ವಾಹನಕ್ಕೆ ಎಸೆಯುತ್ತಿರುವ ವಿಡಿಯೊ ವೈರಲ್ ಆಗಿದೆ.

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ವಿಡಿಯೊ ದೃಶ್ಯ ಇದಾಗಿದೆ. ಇದರಲ್ಲಿ ಇಬ್ಬರು ಸ್ಥಳೀಯ ಪೊಲೀಸ್ ಘಟಕದ ಸದಸ್ಯರು, 50 ವರ್ಷದ ವ್ಯಕ್ತಿಯ ಮೃತದೇಹದ ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ರವಾನಿಸಬೇಕಾದರೆ,  ಶವವನ್ನು ಕಸದ ಟ್ರಕ್‌ಗೆ ಎಸೆಯುತ್ತಿರುವ ದೃಶ್ಯಗಳಿವೆ.

ಲಕ್ನೋದಿಂದ 250 ಕಿ.ಮೀ ದೂರದಲ್ಲಿರುವ ಮಹೋಬಾದ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಕುರಿತು ಆಕ್ರೋಶ ವ್ಯಕ್ತವಾದ ನಂತರ, ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಮಹೋಬಾದ ಹಿರಿಯ ಪೊಲೀಸ್ ಅಧಿಕಾರಿ ಆರ್.ಕೆ.ಗೌತಮ್ ತನಿಖೆಗೆ ಆದೇಶಿಸಿದ್ದು, 24 ಗಂಟೆಗಳ ಒಳಗೆ ಪ್ರಕರಣದ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚನೆ ನೀಡಿದ್ದಾರೆ.

ಆಸ್ಪತ್ರೆಯ ಶವಾಗಾರದ ಬಳಿ ಪೊಲೀಸರು ಆ ವ್ಯಕ್ತಿಯ ದೇಹವನ್ನು ಕಪ್ಪು ಬಣ್ಣದ ಕವರ್‌ನಲ್ಲಿ ಸುತ್ತಿದ್ದ ಮೃತದೇಹವನ್ನು, ಹಿರಿಯ ಪೋಲೀಸ್ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ಕಸದ ವಾಹನಕ್ಕೆ ಎಸೆಯುತ್ತಾರೆ. ಈ ದೃಶ್ಯಗಳನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.

ಮೃತ 50 ವರ್ಷದ ವ್ಯಕ್ತಿ ದೆಹಲಿಯಲ್ಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ತನ್ನ ಗ್ರಾಮಕ್ಕೆ ಮರಳಿದ್ದರು. ’ಹಲವು ರೋಗಲಕ್ಷಣಗಳಿದ್ದ ಅವರನ್ನು ಆಸ್ಪತ್ರೆಗೂ ಸೇರಿಸಲು ಕರೆ ತಂದಿದ್ದರು. ಆದರೆ, ಚಿಕಿತ್ಸೆ ಪಡೆಯುವ ಮೊದಲೇ ಅವರು ನಿಧನರಾದರು’ ಎಂದು ಆ ಮೃತರ ಮಗ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತ, ಸ್ಥಳೀಯ ಆಡಳಿತದ ಮೂಲಗಳು ಮೃತ ವ್ಯಕ್ತಿಯ ಕುಟುಂಬವನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸಿವೆ. ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ತೆಗೆದುಕೊಳ್ಳಲು ಕುಟುಂಬ ನಿರಾಕರಿಸಿತ್ತು. ನಂತರ ಮೃತನ ಮಗನೇ ಕಸದ ವಾಹನಕ್ಕೆ ಮೃತದೇಹವನ್ನು ಸಾಗಿಸಲು ವ್ಯವಸ್ಥೆ ಮಾಡಿದ್ದಾನೆ ತಿಳಿಸಿವೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆಗಳು ನಡೆಯುತ್ತಿವೆ. ಮೃತದೇಹಗಳಿಗೆ ಸರಿಯಾದ ಗೌರವ ಕೂಡ ದೊರಕುತ್ತಿಲ್ಲ. ಆದರೆ, ಸರ್ಕಾರ ಮಾತ್ರ ರಾಜ್ಯದಲ್ಲಿಯ ಕೊರೊನಾ ಪ್ರಕರಣ ಮತ್ತು ಸಾವುಗಳ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಹಲವು ವರದಿಗಳು ತಿಳಿಸಿವೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...