Homeಮುಖಪುಟಉತ್ತರ ಪ್ರದೇಶದಲ್ಲಿ ಮೃತದೇಹಗಳಿಗೆ ಸಿಗದ ಗೌರವ, ಕಸದ ವಾಹನದಲ್ಲಿ ಸ್ಮಶಾನಕ್ಕೆ ರವಾನೆ

ಉತ್ತರ ಪ್ರದೇಶದಲ್ಲಿ ಮೃತದೇಹಗಳಿಗೆ ಸಿಗದ ಗೌರವ, ಕಸದ ವಾಹನದಲ್ಲಿ ಸ್ಮಶಾನಕ್ಕೆ ರವಾನೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕೊರೊನಾ ಸಾವುಗಳ ಸಂಖ್ಯೆಯಲ್ಲಿ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಈಡು ಮಾಡಿದೆ. ಇವುಗಳ ಮಧ್ಯೆಯೇ ಮೃತದೇಹಗಳಿಗೆ ಕನಿಷ್ಠ ಗೌರವ ಕೂಡ ದೊರಕುತ್ತಿಲ್ಲ ಎಂಬುದು ಹಲವು ವಿಡಿಯೊ ದೃಶ್ಯಗಳು ಸ್ಪಷ್ಟಪಡಿಸುತ್ತಿವೆ.

ಕಳೆದ ಎರಡು ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿತ್ತು. ಈಗ ಮೃತದೇಹವನ್ನು ಕನಿಷ್ಠ ಗೌರವ ನೀಡದೇ ಕಸದ ವಾಹನಕ್ಕೆ ಎಸೆಯುತ್ತಿರುವ ವಿಡಿಯೊ ವೈರಲ್ ಆಗಿದೆ.

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ವಿಡಿಯೊ ದೃಶ್ಯ ಇದಾಗಿದೆ. ಇದರಲ್ಲಿ ಇಬ್ಬರು ಸ್ಥಳೀಯ ಪೊಲೀಸ್ ಘಟಕದ ಸದಸ್ಯರು, 50 ವರ್ಷದ ವ್ಯಕ್ತಿಯ ಮೃತದೇಹದ ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ರವಾನಿಸಬೇಕಾದರೆ,  ಶವವನ್ನು ಕಸದ ಟ್ರಕ್‌ಗೆ ಎಸೆಯುತ್ತಿರುವ ದೃಶ್ಯಗಳಿವೆ.

ಲಕ್ನೋದಿಂದ 250 ಕಿ.ಮೀ ದೂರದಲ್ಲಿರುವ ಮಹೋಬಾದ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಕುರಿತು ಆಕ್ರೋಶ ವ್ಯಕ್ತವಾದ ನಂತರ, ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಮಹೋಬಾದ ಹಿರಿಯ ಪೊಲೀಸ್ ಅಧಿಕಾರಿ ಆರ್.ಕೆ.ಗೌತಮ್ ತನಿಖೆಗೆ ಆದೇಶಿಸಿದ್ದು, 24 ಗಂಟೆಗಳ ಒಳಗೆ ಪ್ರಕರಣದ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚನೆ ನೀಡಿದ್ದಾರೆ.

ಆಸ್ಪತ್ರೆಯ ಶವಾಗಾರದ ಬಳಿ ಪೊಲೀಸರು ಆ ವ್ಯಕ್ತಿಯ ದೇಹವನ್ನು ಕಪ್ಪು ಬಣ್ಣದ ಕವರ್‌ನಲ್ಲಿ ಸುತ್ತಿದ್ದ ಮೃತದೇಹವನ್ನು, ಹಿರಿಯ ಪೋಲೀಸ್ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ಕಸದ ವಾಹನಕ್ಕೆ ಎಸೆಯುತ್ತಾರೆ. ಈ ದೃಶ್ಯಗಳನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.

ಮೃತ 50 ವರ್ಷದ ವ್ಯಕ್ತಿ ದೆಹಲಿಯಲ್ಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ತನ್ನ ಗ್ರಾಮಕ್ಕೆ ಮರಳಿದ್ದರು. ’ಹಲವು ರೋಗಲಕ್ಷಣಗಳಿದ್ದ ಅವರನ್ನು ಆಸ್ಪತ್ರೆಗೂ ಸೇರಿಸಲು ಕರೆ ತಂದಿದ್ದರು. ಆದರೆ, ಚಿಕಿತ್ಸೆ ಪಡೆಯುವ ಮೊದಲೇ ಅವರು ನಿಧನರಾದರು’ ಎಂದು ಆ ಮೃತರ ಮಗ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತ, ಸ್ಥಳೀಯ ಆಡಳಿತದ ಮೂಲಗಳು ಮೃತ ವ್ಯಕ್ತಿಯ ಕುಟುಂಬವನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸಿವೆ. ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ತೆಗೆದುಕೊಳ್ಳಲು ಕುಟುಂಬ ನಿರಾಕರಿಸಿತ್ತು. ನಂತರ ಮೃತನ ಮಗನೇ ಕಸದ ವಾಹನಕ್ಕೆ ಮೃತದೇಹವನ್ನು ಸಾಗಿಸಲು ವ್ಯವಸ್ಥೆ ಮಾಡಿದ್ದಾನೆ ತಿಳಿಸಿವೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆಗಳು ನಡೆಯುತ್ತಿವೆ. ಮೃತದೇಹಗಳಿಗೆ ಸರಿಯಾದ ಗೌರವ ಕೂಡ ದೊರಕುತ್ತಿಲ್ಲ. ಆದರೆ, ಸರ್ಕಾರ ಮಾತ್ರ ರಾಜ್ಯದಲ್ಲಿಯ ಕೊರೊನಾ ಪ್ರಕರಣ ಮತ್ತು ಸಾವುಗಳ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಹಲವು ವರದಿಗಳು ತಿಳಿಸಿವೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...