Homeಮುಖಪುಟಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಬಂದಾ ನ್ಯಾಯಾಲಯವು ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ಗೆ ನಿರ್ದೇಶನ ನೀಡಿದೆ. ಈ ಮಧ್ಯೆ ಅನ್ಸಾರಿ ಕುಟುಂಬವು ಇದು ಹೃದಯಾಘಾತದ ನಿಧನವಲ್ಲ ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಆರೋಪಿಸಿದೆ.

ಉತ್ತರ ಪ್ರದೇಶದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ನಿಧನರಾಗಿದ್ದಾರೆ ಎಂದು ಹೇಳಲಾಗಿತ್ತು. 63 ವರ್ಷದ ಅನ್ಸಾರಿ ಅವರನ್ನು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹದಿಂದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿಗೆ ಗುರುವಾರ ಸಂಜೆ ತರಲಾಗಿತ್ತು. ಅನಂತರ ಅವರು ಅಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಈ ವರ್ಷ ಮಾರ್ಚ್ 13ರಂದು ವಾರಣಾಸಿಯ ವಿಶೇಷ ನ್ಯಾಯಾಲಯವು ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣದಲ್ಲಿ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಅಪಹರಣ ಪ್ರಕರಣ, ಉತ್ತರ ಪ್ರದೇಶ ದರೋಡೆಕೋರರ ಕಾಯಿದೆಯಡಿಯಲ್ಲಿನ 1999ರ ಪ್ರಕರಣ, 1991ರ ಅವಧೇಶ್ ರೈ ಹತ್ಯೆ ಪ್ರಕರಣ ಮತ್ತು 2003ರಲ್ಲಿ ಜೈಲರ್‌ಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ ಸೇರಿದಂತೆ ಹಲವಾರು ಇತರ ಪ್ರಕರಣಗಳಲ್ಲಿ ಅವರನ್ನು ತಪ್ಪಿತಸ್ಥ ಎಂದು ಕೋರ್ಟ್‌ ಹೇಳಿತ್ತು.

ಮಾರ್ಚ್ 21ರಂದು, ಅನ್ಸಾರಿ ಅವರು ಬಂದಾದಲ್ಲಿ ಜೈಲು ಅಧಿಕಾರಿಗಳು ನನಗೆ ವಿಷ ನೀಡುತ್ತಾರೆ ಎಂದು ಆರೋಪಿಸಿ ಮೌದಲ್ಲಿನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು.

ಮುಖ್ತಾರ್ ಅನ್ಸಾರಿ ಪತ್ರ:

ಮುಖ್ತಾರ್ ಅನ್ಸಾರಿಗೆ ಸ್ಲೋ ಪಾಯ್ಸನ್ ನೀಡಲಾಗಿದೆ: ಸಹೋದರನಿಂದ ಆರೋಪ

ಉತ್ತರ ಪ್ರದೇಶದ ಬಂದಾ ಆಸ್ಪತ್ರೆಯಲ್ಲಿ ಮೃತ ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲೇ  ಸ್ಲೋ ಪಾಯ್ಸನ್ ನೀಡಲಾಗಿದೆ ಎಂದು ಅವರ ಸಹೋದರ ಆರೋಪಿಸಿದ್ದಾರೆ.

ಅನ್ಸಾರಿಯವರ ಸಹೋದರ ಮತ್ತು ಗಾಝಿಪುರದ ಸಂಸದ ಅಫ್ಜಲ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮುಖ್ತಾರ್‌ ಅನ್ಸಾರಿಗೆ ಜೈಲಿನಲ್ಲಿ ವಿಷ ಬೆರೆಸಿ ಆಹಾರವನ್ನು ನೀಡಲಾಗಿದೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ಸುಮಾರು 40 ದಿನಗಳ ಹಿಂದೆ ಅವರಿಗೆ ವಿಷವನ್ನು ನೀಡಲಾಗಿತ್ತು. ಇತ್ತೀಚೆಗೆ ಮಾರ್ಚ್ 19ರಂದು ಮತ್ತು ಮಾರ್ಚ್ 22ರಂದು ಅವರಿಗೆ ಮತ್ತೆ ವಿಷ ಆಹಾರವನ್ನು ನೀಡಲಾಗಿದೆ. ಇದರಿಂದ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಜೈಲು ಅಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಆದರೆ ಅವರ ಕುಟುಂಬದ ಇತರ ಸದಸ್ಯರು ಕೂಡ “ಸ್ಲೋ ಪಾಯ್ಸನ್‌’ ಹಾಕಿರುವ ಕುರಿತು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಮುಖ್ತಾರ್ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಮಾತನಾಡಿದ್ದು, ನನಗೆ ತಂದೆಯ ಸಾವಿನ ಬಗ್ಗೆ ಯಾರೂ ಮಾಹಿತಿ ನೀಡಿರಲಿಲ್ಲ, ಮಾಧ್ಯಮಗಳ ಮೂಲಕ ನಾನು ಈ ಬಗ್ಗೆ ತಿಳಿದಿದ್ದೇನೆ. ಆದರೆ ಈಗ ಇಡೀ ದೇಶಕ್ಕೆ ಎಲ್ಲವೂ ತಿಳಿದಿದೆ. ಎರಡು ದಿನಗಳ ಹಿಂದೆ ನಾನು ಅವರನ್ನು ಭೇಟಿಯಾಗಲು ಬಂದಿದ್ದೇನೆ, ಆದರೆ ಅವಕಾಶ ಕೊಟ್ಟಿಲ್ಲ. ಸ್ಲೋ ಪಾಯ್ಸನ್ ನೀಡಿದ ಆರೋಪದ ಬಗ್ಗೆ ಈ ಹಿಂದೆಯೂ ಹೇಳಿದ್ದೆವು, ಇಂದೂ ಕೂಡ ಅದನ್ನೇ ಹೇಳುತ್ತೇವೆ. ಮಾರ್ಚ್ 19ರಂದು ರಾತ್ರಿ ಊಟದಲ್ಲಿ ವಿಷ ನೀಡಲಾಗಿದೆ. ನಾವು ನ್ಯಾಯಾಲಯಕ್ಕೆ ತೆರಳುತ್ತೇವೆ, ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಹೃದಯಸ್ತಂಭನದಿಂದ ಸಾವು?

ಮುಖ್ತಾರ್ ಅನ್ಸಾರಿ ಮೃತಪಟ್ಟಿರುವುದು ಹೃದಯಸ್ತಂಭನದಿಂದಲೇ ಎಂಬುದು ಮರಣೋತ್ತರ ಪರೀಕ್ಷೆ ವರದಿಯಿಂದ ಖಚಿತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಐವರು ವೈದ್ಯರ ತಂಡ ಶವಪರೀಕ್ಷೆಯಲ್ಲಿ ಪಾಲ್ಗೊಂಡಿತ್ತು. ಮುಖ್ತಾರ್ ಅನ್ಸಾರಿ ಕಿರಿಯ ಮಗ ಉಮರ್‌ ಅನ್ಸಾರಿ ಸಹ ಈ ವೇಳೆ ಹಾಜರಿದ್ದರು ಎಂದು ವೈದ್ಯರೋರ್ವರು ತಿಳಿಸಿದ್ದಾರೆ.

ಮುಖ್ತಾರ್ ಅನ್ಸಾರಿ ಯಾರು?

ಮುಖ್ತಾರ್‌ ಅನ್ಸಾರಿ ಅವರು ಉತ್ತರ ಪ್ರದೇಶದ ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಎರಡು ಬಾರಿ ಬಹುಜನ ಸಮಾಜ ಪಕ್ಷದಿಂದ ಚುನಾಯಿತರಾಗಿದ್ದರು. ಅವರ ಹುಟ್ಟೂರಾದ ಗಾಜಿಪುರದಲ್ಲಿ ಅವರು ಬಲವಾದ ಪ್ರಭಾವವನ್ನು ಹೊಂದಿದ್ದರು. ಅವರು 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜೈಲಿನಲ್ಲಿದ್ದಾರೆ. ಅನ್ಸಾರಿ ಅವರ ವಿರುದ್ಧ 60 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ.

ಉತ್ತರ ಪ್ರದೇಶದ ನ್ಯಾಯಾಲಯ ಅವರಿಗೆ ಸೆಪ್ಟೆಂಬರ್ 2022ರಿಂದ ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿತ್ತು ಮತ್ತು ಅನ್ಸಾರಿಯನ್ನು ಬಂದಾ ಜೈಲಿನಲ್ಲಿ ಇರಿಸಲಾಗಿತ್ತು. 2023ರಲ್ಲಿ, ಎಂಪಿ ಎಂಎಲ್ಎ ನ್ಯಾಯಾಲಯವು ಬಿಜೆಪಿ ಶಾಸಕ ಕೃಷ್ಣಾನಂದ ರೈ ಅವರ ಹತ್ಯೆಗೆ ಅನ್ಸಾರಿ ತಪ್ಪಿತಸ್ಥರೆಂದು ಘೋಷಿಸಿತ್ತು. ಅವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. 1990ರಲ್ಲಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ ಪ್ರಕರಣದಲ್ಲಿ ಮಾರ್ಚ್ 13, 2024ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಇದನ್ನು ಓದಿ: ‘ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..’; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...