Homeಮುಖಪುಟಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಬಂದಾ ನ್ಯಾಯಾಲಯವು ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ಗೆ ನಿರ್ದೇಶನ ನೀಡಿದೆ. ಈ ಮಧ್ಯೆ ಅನ್ಸಾರಿ ಕುಟುಂಬವು ಇದು ಹೃದಯಾಘಾತದ ನಿಧನವಲ್ಲ ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಆರೋಪಿಸಿದೆ.

ಉತ್ತರ ಪ್ರದೇಶದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ನಿಧನರಾಗಿದ್ದಾರೆ ಎಂದು ಹೇಳಲಾಗಿತ್ತು. 63 ವರ್ಷದ ಅನ್ಸಾರಿ ಅವರನ್ನು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹದಿಂದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿಗೆ ಗುರುವಾರ ಸಂಜೆ ತರಲಾಗಿತ್ತು. ಅನಂತರ ಅವರು ಅಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಈ ವರ್ಷ ಮಾರ್ಚ್ 13ರಂದು ವಾರಣಾಸಿಯ ವಿಶೇಷ ನ್ಯಾಯಾಲಯವು ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣದಲ್ಲಿ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಅಪಹರಣ ಪ್ರಕರಣ, ಉತ್ತರ ಪ್ರದೇಶ ದರೋಡೆಕೋರರ ಕಾಯಿದೆಯಡಿಯಲ್ಲಿನ 1999ರ ಪ್ರಕರಣ, 1991ರ ಅವಧೇಶ್ ರೈ ಹತ್ಯೆ ಪ್ರಕರಣ ಮತ್ತು 2003ರಲ್ಲಿ ಜೈಲರ್‌ಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ ಸೇರಿದಂತೆ ಹಲವಾರು ಇತರ ಪ್ರಕರಣಗಳಲ್ಲಿ ಅವರನ್ನು ತಪ್ಪಿತಸ್ಥ ಎಂದು ಕೋರ್ಟ್‌ ಹೇಳಿತ್ತು.

ಮಾರ್ಚ್ 21ರಂದು, ಅನ್ಸಾರಿ ಅವರು ಬಂದಾದಲ್ಲಿ ಜೈಲು ಅಧಿಕಾರಿಗಳು ನನಗೆ ವಿಷ ನೀಡುತ್ತಾರೆ ಎಂದು ಆರೋಪಿಸಿ ಮೌದಲ್ಲಿನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು.

ಮುಖ್ತಾರ್ ಅನ್ಸಾರಿ ಪತ್ರ:

ಮುಖ್ತಾರ್ ಅನ್ಸಾರಿಗೆ ಸ್ಲೋ ಪಾಯ್ಸನ್ ನೀಡಲಾಗಿದೆ: ಸಹೋದರನಿಂದ ಆರೋಪ

ಉತ್ತರ ಪ್ರದೇಶದ ಬಂದಾ ಆಸ್ಪತ್ರೆಯಲ್ಲಿ ಮೃತ ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲೇ  ಸ್ಲೋ ಪಾಯ್ಸನ್ ನೀಡಲಾಗಿದೆ ಎಂದು ಅವರ ಸಹೋದರ ಆರೋಪಿಸಿದ್ದಾರೆ.

ಅನ್ಸಾರಿಯವರ ಸಹೋದರ ಮತ್ತು ಗಾಝಿಪುರದ ಸಂಸದ ಅಫ್ಜಲ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮುಖ್ತಾರ್‌ ಅನ್ಸಾರಿಗೆ ಜೈಲಿನಲ್ಲಿ ವಿಷ ಬೆರೆಸಿ ಆಹಾರವನ್ನು ನೀಡಲಾಗಿದೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ಸುಮಾರು 40 ದಿನಗಳ ಹಿಂದೆ ಅವರಿಗೆ ವಿಷವನ್ನು ನೀಡಲಾಗಿತ್ತು. ಇತ್ತೀಚೆಗೆ ಮಾರ್ಚ್ 19ರಂದು ಮತ್ತು ಮಾರ್ಚ್ 22ರಂದು ಅವರಿಗೆ ಮತ್ತೆ ವಿಷ ಆಹಾರವನ್ನು ನೀಡಲಾಗಿದೆ. ಇದರಿಂದ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಜೈಲು ಅಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಆದರೆ ಅವರ ಕುಟುಂಬದ ಇತರ ಸದಸ್ಯರು ಕೂಡ “ಸ್ಲೋ ಪಾಯ್ಸನ್‌’ ಹಾಕಿರುವ ಕುರಿತು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಮುಖ್ತಾರ್ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಮಾತನಾಡಿದ್ದು, ನನಗೆ ತಂದೆಯ ಸಾವಿನ ಬಗ್ಗೆ ಯಾರೂ ಮಾಹಿತಿ ನೀಡಿರಲಿಲ್ಲ, ಮಾಧ್ಯಮಗಳ ಮೂಲಕ ನಾನು ಈ ಬಗ್ಗೆ ತಿಳಿದಿದ್ದೇನೆ. ಆದರೆ ಈಗ ಇಡೀ ದೇಶಕ್ಕೆ ಎಲ್ಲವೂ ತಿಳಿದಿದೆ. ಎರಡು ದಿನಗಳ ಹಿಂದೆ ನಾನು ಅವರನ್ನು ಭೇಟಿಯಾಗಲು ಬಂದಿದ್ದೇನೆ, ಆದರೆ ಅವಕಾಶ ಕೊಟ್ಟಿಲ್ಲ. ಸ್ಲೋ ಪಾಯ್ಸನ್ ನೀಡಿದ ಆರೋಪದ ಬಗ್ಗೆ ಈ ಹಿಂದೆಯೂ ಹೇಳಿದ್ದೆವು, ಇಂದೂ ಕೂಡ ಅದನ್ನೇ ಹೇಳುತ್ತೇವೆ. ಮಾರ್ಚ್ 19ರಂದು ರಾತ್ರಿ ಊಟದಲ್ಲಿ ವಿಷ ನೀಡಲಾಗಿದೆ. ನಾವು ನ್ಯಾಯಾಲಯಕ್ಕೆ ತೆರಳುತ್ತೇವೆ, ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಹೃದಯಸ್ತಂಭನದಿಂದ ಸಾವು?

ಮುಖ್ತಾರ್ ಅನ್ಸಾರಿ ಮೃತಪಟ್ಟಿರುವುದು ಹೃದಯಸ್ತಂಭನದಿಂದಲೇ ಎಂಬುದು ಮರಣೋತ್ತರ ಪರೀಕ್ಷೆ ವರದಿಯಿಂದ ಖಚಿತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಐವರು ವೈದ್ಯರ ತಂಡ ಶವಪರೀಕ್ಷೆಯಲ್ಲಿ ಪಾಲ್ಗೊಂಡಿತ್ತು. ಮುಖ್ತಾರ್ ಅನ್ಸಾರಿ ಕಿರಿಯ ಮಗ ಉಮರ್‌ ಅನ್ಸಾರಿ ಸಹ ಈ ವೇಳೆ ಹಾಜರಿದ್ದರು ಎಂದು ವೈದ್ಯರೋರ್ವರು ತಿಳಿಸಿದ್ದಾರೆ.

ಮುಖ್ತಾರ್ ಅನ್ಸಾರಿ ಯಾರು?

ಮುಖ್ತಾರ್‌ ಅನ್ಸಾರಿ ಅವರು ಉತ್ತರ ಪ್ರದೇಶದ ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಎರಡು ಬಾರಿ ಬಹುಜನ ಸಮಾಜ ಪಕ್ಷದಿಂದ ಚುನಾಯಿತರಾಗಿದ್ದರು. ಅವರ ಹುಟ್ಟೂರಾದ ಗಾಜಿಪುರದಲ್ಲಿ ಅವರು ಬಲವಾದ ಪ್ರಭಾವವನ್ನು ಹೊಂದಿದ್ದರು. ಅವರು 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜೈಲಿನಲ್ಲಿದ್ದಾರೆ. ಅನ್ಸಾರಿ ಅವರ ವಿರುದ್ಧ 60 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ.

ಉತ್ತರ ಪ್ರದೇಶದ ನ್ಯಾಯಾಲಯ ಅವರಿಗೆ ಸೆಪ್ಟೆಂಬರ್ 2022ರಿಂದ ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿತ್ತು ಮತ್ತು ಅನ್ಸಾರಿಯನ್ನು ಬಂದಾ ಜೈಲಿನಲ್ಲಿ ಇರಿಸಲಾಗಿತ್ತು. 2023ರಲ್ಲಿ, ಎಂಪಿ ಎಂಎಲ್ಎ ನ್ಯಾಯಾಲಯವು ಬಿಜೆಪಿ ಶಾಸಕ ಕೃಷ್ಣಾನಂದ ರೈ ಅವರ ಹತ್ಯೆಗೆ ಅನ್ಸಾರಿ ತಪ್ಪಿತಸ್ಥರೆಂದು ಘೋಷಿಸಿತ್ತು. ಅವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. 1990ರಲ್ಲಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ ಪ್ರಕರಣದಲ್ಲಿ ಮಾರ್ಚ್ 13, 2024ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಇದನ್ನು ಓದಿ: ‘ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..’; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...