Homeಮುಖಪುಟಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ವ್ಯವಸ್ಥಿತ ಕೊಲೆ? ಕುಟುಂಬಸ್ಥರ ಆರೋಪಗಳೇನು?

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಬಂದಾ ನ್ಯಾಯಾಲಯವು ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ಗೆ ನಿರ್ದೇಶನ ನೀಡಿದೆ. ಈ ಮಧ್ಯೆ ಅನ್ಸಾರಿ ಕುಟುಂಬವು ಇದು ಹೃದಯಾಘಾತದ ನಿಧನವಲ್ಲ ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಆರೋಪಿಸಿದೆ.

ಉತ್ತರ ಪ್ರದೇಶದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ನಿಧನರಾಗಿದ್ದಾರೆ ಎಂದು ಹೇಳಲಾಗಿತ್ತು. 63 ವರ್ಷದ ಅನ್ಸಾರಿ ಅವರನ್ನು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹದಿಂದ ಬಂದಾದಲ್ಲಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿಗೆ ಗುರುವಾರ ಸಂಜೆ ತರಲಾಗಿತ್ತು. ಅನಂತರ ಅವರು ಅಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಈ ವರ್ಷ ಮಾರ್ಚ್ 13ರಂದು ವಾರಣಾಸಿಯ ವಿಶೇಷ ನ್ಯಾಯಾಲಯವು ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣದಲ್ಲಿ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಅಪಹರಣ ಪ್ರಕರಣ, ಉತ್ತರ ಪ್ರದೇಶ ದರೋಡೆಕೋರರ ಕಾಯಿದೆಯಡಿಯಲ್ಲಿನ 1999ರ ಪ್ರಕರಣ, 1991ರ ಅವಧೇಶ್ ರೈ ಹತ್ಯೆ ಪ್ರಕರಣ ಮತ್ತು 2003ರಲ್ಲಿ ಜೈಲರ್‌ಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ ಸೇರಿದಂತೆ ಹಲವಾರು ಇತರ ಪ್ರಕರಣಗಳಲ್ಲಿ ಅವರನ್ನು ತಪ್ಪಿತಸ್ಥ ಎಂದು ಕೋರ್ಟ್‌ ಹೇಳಿತ್ತು.

ಮಾರ್ಚ್ 21ರಂದು, ಅನ್ಸಾರಿ ಅವರು ಬಂದಾದಲ್ಲಿ ಜೈಲು ಅಧಿಕಾರಿಗಳು ನನಗೆ ವಿಷ ನೀಡುತ್ತಾರೆ ಎಂದು ಆರೋಪಿಸಿ ಮೌದಲ್ಲಿನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು.

ಮುಖ್ತಾರ್ ಅನ್ಸಾರಿ ಪತ್ರ:

ಮುಖ್ತಾರ್ ಅನ್ಸಾರಿಗೆ ಸ್ಲೋ ಪಾಯ್ಸನ್ ನೀಡಲಾಗಿದೆ: ಸಹೋದರನಿಂದ ಆರೋಪ

ಉತ್ತರ ಪ್ರದೇಶದ ಬಂದಾ ಆಸ್ಪತ್ರೆಯಲ್ಲಿ ಮೃತ ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲೇ  ಸ್ಲೋ ಪಾಯ್ಸನ್ ನೀಡಲಾಗಿದೆ ಎಂದು ಅವರ ಸಹೋದರ ಆರೋಪಿಸಿದ್ದಾರೆ.

ಅನ್ಸಾರಿಯವರ ಸಹೋದರ ಮತ್ತು ಗಾಝಿಪುರದ ಸಂಸದ ಅಫ್ಜಲ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮುಖ್ತಾರ್‌ ಅನ್ಸಾರಿಗೆ ಜೈಲಿನಲ್ಲಿ ವಿಷ ಬೆರೆಸಿ ಆಹಾರವನ್ನು ನೀಡಲಾಗಿದೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ಸುಮಾರು 40 ದಿನಗಳ ಹಿಂದೆ ಅವರಿಗೆ ವಿಷವನ್ನು ನೀಡಲಾಗಿತ್ತು. ಇತ್ತೀಚೆಗೆ ಮಾರ್ಚ್ 19ರಂದು ಮತ್ತು ಮಾರ್ಚ್ 22ರಂದು ಅವರಿಗೆ ಮತ್ತೆ ವಿಷ ಆಹಾರವನ್ನು ನೀಡಲಾಗಿದೆ. ಇದರಿಂದ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಜೈಲು ಅಧಿಕಾರಿಗಳು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಆದರೆ ಅವರ ಕುಟುಂಬದ ಇತರ ಸದಸ್ಯರು ಕೂಡ “ಸ್ಲೋ ಪಾಯ್ಸನ್‌’ ಹಾಕಿರುವ ಕುರಿತು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಮುಖ್ತಾರ್ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಮಾತನಾಡಿದ್ದು, ನನಗೆ ತಂದೆಯ ಸಾವಿನ ಬಗ್ಗೆ ಯಾರೂ ಮಾಹಿತಿ ನೀಡಿರಲಿಲ್ಲ, ಮಾಧ್ಯಮಗಳ ಮೂಲಕ ನಾನು ಈ ಬಗ್ಗೆ ತಿಳಿದಿದ್ದೇನೆ. ಆದರೆ ಈಗ ಇಡೀ ದೇಶಕ್ಕೆ ಎಲ್ಲವೂ ತಿಳಿದಿದೆ. ಎರಡು ದಿನಗಳ ಹಿಂದೆ ನಾನು ಅವರನ್ನು ಭೇಟಿಯಾಗಲು ಬಂದಿದ್ದೇನೆ, ಆದರೆ ಅವಕಾಶ ಕೊಟ್ಟಿಲ್ಲ. ಸ್ಲೋ ಪಾಯ್ಸನ್ ನೀಡಿದ ಆರೋಪದ ಬಗ್ಗೆ ಈ ಹಿಂದೆಯೂ ಹೇಳಿದ್ದೆವು, ಇಂದೂ ಕೂಡ ಅದನ್ನೇ ಹೇಳುತ್ತೇವೆ. ಮಾರ್ಚ್ 19ರಂದು ರಾತ್ರಿ ಊಟದಲ್ಲಿ ವಿಷ ನೀಡಲಾಗಿದೆ. ನಾವು ನ್ಯಾಯಾಲಯಕ್ಕೆ ತೆರಳುತ್ತೇವೆ, ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಹೃದಯಸ್ತಂಭನದಿಂದ ಸಾವು?

ಮುಖ್ತಾರ್ ಅನ್ಸಾರಿ ಮೃತಪಟ್ಟಿರುವುದು ಹೃದಯಸ್ತಂಭನದಿಂದಲೇ ಎಂಬುದು ಮರಣೋತ್ತರ ಪರೀಕ್ಷೆ ವರದಿಯಿಂದ ಖಚಿತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಐವರು ವೈದ್ಯರ ತಂಡ ಶವಪರೀಕ್ಷೆಯಲ್ಲಿ ಪಾಲ್ಗೊಂಡಿತ್ತು. ಮುಖ್ತಾರ್ ಅನ್ಸಾರಿ ಕಿರಿಯ ಮಗ ಉಮರ್‌ ಅನ್ಸಾರಿ ಸಹ ಈ ವೇಳೆ ಹಾಜರಿದ್ದರು ಎಂದು ವೈದ್ಯರೋರ್ವರು ತಿಳಿಸಿದ್ದಾರೆ.

ಮುಖ್ತಾರ್ ಅನ್ಸಾರಿ ಯಾರು?

ಮುಖ್ತಾರ್‌ ಅನ್ಸಾರಿ ಅವರು ಉತ್ತರ ಪ್ರದೇಶದ ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಎರಡು ಬಾರಿ ಬಹುಜನ ಸಮಾಜ ಪಕ್ಷದಿಂದ ಚುನಾಯಿತರಾಗಿದ್ದರು. ಅವರ ಹುಟ್ಟೂರಾದ ಗಾಜಿಪುರದಲ್ಲಿ ಅವರು ಬಲವಾದ ಪ್ರಭಾವವನ್ನು ಹೊಂದಿದ್ದರು. ಅವರು 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜೈಲಿನಲ್ಲಿದ್ದಾರೆ. ಅನ್ಸಾರಿ ಅವರ ವಿರುದ್ಧ 60 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ.

ಉತ್ತರ ಪ್ರದೇಶದ ನ್ಯಾಯಾಲಯ ಅವರಿಗೆ ಸೆಪ್ಟೆಂಬರ್ 2022ರಿಂದ ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿತ್ತು ಮತ್ತು ಅನ್ಸಾರಿಯನ್ನು ಬಂದಾ ಜೈಲಿನಲ್ಲಿ ಇರಿಸಲಾಗಿತ್ತು. 2023ರಲ್ಲಿ, ಎಂಪಿ ಎಂಎಲ್ಎ ನ್ಯಾಯಾಲಯವು ಬಿಜೆಪಿ ಶಾಸಕ ಕೃಷ್ಣಾನಂದ ರೈ ಅವರ ಹತ್ಯೆಗೆ ಅನ್ಸಾರಿ ತಪ್ಪಿತಸ್ಥರೆಂದು ಘೋಷಿಸಿತ್ತು. ಅವರಿಗೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. 1990ರಲ್ಲಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ ಪ್ರಕರಣದಲ್ಲಿ ಮಾರ್ಚ್ 13, 2024ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಇದನ್ನು ಓದಿ: ‘ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..’; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...