Homeಮುಖಪುಟಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಪರಿಣಾಮದಿಂದ ‘ಮಧ್ಯಮ ವರ್ಗ’ ಸಂಕಷ್ಟಕ್ಕೆ ಈಡಾಗುತ್ತಿದೆ. ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸುತ್ತಿವೆ ಇವುಗಳನ್ನು ನಿವಾರಿಸಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ, “ಸಾಂಕ್ರಾಮಿಕ ರೋಗದ ಎರಡನೇ ಅಲೆಯು ಜನಸಾಮಾನ್ಯರ ಮೇಲೆ ತೀವ್ರ ಪರಿಣಾಮ ಬೀರಿದೆ. ಆಡಳಿತದ ಅಸಮರ್ಥತೆ ಮತ್ತು ಸಿದ್ಧತೆಯ ಕೊರತೆಯಿಂದಾಗಿ ಜನರು ಅಸಹನೀಯ ನೋವು ಅನುಭವಿಸಬೇಕಾಯಿತು” ಎಂದರು.

“ಏಪ್ರಿಲ್-ಮೇ ತಿಂಗಳಲ್ಲಿನ ಕೊರೊನಾ ಅಪಾಯದ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಅನೇಕ ಅನಗತ್ಯ ನಿಯಮಗಳು ಜನರಿಗೆ ಸಮಸ್ಯೆಗಳನ್ನು ತಂದಿಟ್ಟಿದೆ” ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

’ಒಂದು ಕಡೆ ಸಾಂಕ್ರಾಮಿಕ ರೋಗವು ನಮ್ಮನ್ನು ಕಾಡುತ್ತಿದೆ, ಮತ್ತೊಂದೆಡೆ ಇದು ಜನರ ಜೀವನೋಪಾಯ, ಉದ್ಯೋಗ ಮತ್ತು ವ್ಯವಹಾರದ ವಿಷಯದಲ್ಲಿ ಭಾರಿ ತೊಂದರೆಗಳನ್ನು ಸೃಷ್ಟಿಸಿದೆ’ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

“ಇಂದು, ಕೋಟ್ಯಾಂತರ ಜನರು ತಮ್ಮ ಭವಿಷ್ಯದ ಬಗ್ಗೆ ಭಯಭೀತರಾಗಿದ್ದಾರೆ, ಅವರ ಉದ್ಯೋಗ, ಸಂಪಾದನೆಯ ದಾರಿ ಕಡಿಮೆಯಾಗಿವೆ. ಇತ್ತ ಹಣದುಬ್ಬರ ಹೆಚ್ಚಾಗಿದ್ದು, ವಿಶೇಷವಾಗಿ ಮಧ್ಯಮ ವರ್ಗವನ್ನು ತೊಂದರೆಗೆ ಸಿಲುಕಿಸಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಪತ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯದ ಜನರಿಗೆ ಪರಿಹಾರ ಒದಗಿಸಲು ಯೋಗಿ ಆದಿತ್ಯನಾಥ್ ಅವರಿಗೆ ಐದು ಸಲಹೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ನಿವಾರಣೆಯಲ್ಲಿ ಖಾಸಗಿ ವಲಯದ ಆಸ್ಪತ್ರೆಗಳು ದೊಡ್ಡ ಪಾತ್ರವಹಿಸಿವೆ, ಆದರೆ ಖಾಸಗಿ ಆಸ್ಪತ್ರೆಗಳು ಜನರಿಗೆ ಕೊರೊನಾ ಚಿಕಿತ್ಸೆಗಾಗಿ ಭಾರಿ ಮೊತ್ತವನ್ನು ವಿಧಿಸುತ್ತಿವೆ. ಆದರಿಂದ ವೈದ್ಯಕೀಯ ಸೌಲಭ್ಯಗಳಿಗೆ ಅನುಗುಣವಾಗಿ ಜನರಿಗೆ ಅನುಕೂಲಕರ ಬೆಲೆಗಳನ್ನು ನಿಗದಿಪಡಿಸಲು ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣವನ್ನು ವಸೂಲಿ ಮಾಡಿದವರಿಗೆ ರಾಜ್ಯ ಸರ್ಕಾರವು ಪರಿಹಾರವನ್ನು ನೀಡಬೇಕು ಎಂದು ಹೇಳಿದ್ದಾರೆ.

ಲಾಕ್‌ಡೌನ್ ಸಮಯದಲ್ಲಿ ಜನರಿಗೆ ತೊಂದರೆಯಾಗದಂತೆ, ಹಣದುಬ್ಬರವನ್ನು ನಿಯಂತ್ರಿಸಬೇಕು ಮತ್ತು ಅಗತ್ಯ ವಸ್ತುಗಳಾದ ಖಾದ್ಯ ತೈಲಗಳು, ತರಕಾರಿಗಳು ಮತ್ತು ಹಣ್ಣುಗಳ ಬೆಲೆ ದರ ನಿಗದಿಪಡಿಸುವಂತೆ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಈಗಿರುವ ಸಮಸ್ಯೆಗಳ ನಡುವೆಯೇ ಹೆಚ್ಚಿನ ವಿದ್ಯುತ್ ಬಿಲ್‌ಗಳಿಂದಾಗಿ ಜನರ ಸಮಸ್ಯೆಗಳು ಹೆಚ್ಚಾಗಿದೆ. ಹೀಗಾಗಿ   ಬಿಲ್ ಪಾವತಿಗೆ ಪರಿಹಾರ ನೀಡಬೇಕು ಮತ್ತು ವಿದ್ಯುತ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಾರದು ಎಂದಿದ್ದಾರೆ.

“ಶಾಲೆಗಳು ಮುಚ್ಚಲ್ಪಟ್ಟಿವೆ ಆದರೆ ಪ್ರತಿ ತಿಂಗಳು ಶುಲ್ಕವನ್ನು ಕಟ್ಟುವಂತೆ ಶಾಲೆಗಳು ಒತ್ತಾಯಿಸುತ್ತಿದ್ದು, ಪೋಷಕರು ಒತ್ತಡದಲ್ಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಪತ್ರದಲ್ಲಿ ಬರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು, ಸಾವುಗಳ ಸಂಖ್ಯೆ ಹೆಚ್ಚಿದ್ದರೂ ಸರ್ಕಾರ ಮಾಹಿತಿಯನ್ನು ಮುಚ್ಚಿಡುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು, ವಿಪಕ್ಷಗಳು ಆರೋಪಿಸಿವೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...