Homeಮುಖಪುಟಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಪರಿಣಾಮದಿಂದ ‘ಮಧ್ಯಮ ವರ್ಗ’ ಸಂಕಷ್ಟಕ್ಕೆ ಈಡಾಗುತ್ತಿದೆ. ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸುತ್ತಿವೆ ಇವುಗಳನ್ನು ನಿವಾರಿಸಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ, “ಸಾಂಕ್ರಾಮಿಕ ರೋಗದ ಎರಡನೇ ಅಲೆಯು ಜನಸಾಮಾನ್ಯರ ಮೇಲೆ ತೀವ್ರ ಪರಿಣಾಮ ಬೀರಿದೆ. ಆಡಳಿತದ ಅಸಮರ್ಥತೆ ಮತ್ತು ಸಿದ್ಧತೆಯ ಕೊರತೆಯಿಂದಾಗಿ ಜನರು ಅಸಹನೀಯ ನೋವು ಅನುಭವಿಸಬೇಕಾಯಿತು” ಎಂದರು.

“ಏಪ್ರಿಲ್-ಮೇ ತಿಂಗಳಲ್ಲಿನ ಕೊರೊನಾ ಅಪಾಯದ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಅನೇಕ ಅನಗತ್ಯ ನಿಯಮಗಳು ಜನರಿಗೆ ಸಮಸ್ಯೆಗಳನ್ನು ತಂದಿಟ್ಟಿದೆ” ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

’ಒಂದು ಕಡೆ ಸಾಂಕ್ರಾಮಿಕ ರೋಗವು ನಮ್ಮನ್ನು ಕಾಡುತ್ತಿದೆ, ಮತ್ತೊಂದೆಡೆ ಇದು ಜನರ ಜೀವನೋಪಾಯ, ಉದ್ಯೋಗ ಮತ್ತು ವ್ಯವಹಾರದ ವಿಷಯದಲ್ಲಿ ಭಾರಿ ತೊಂದರೆಗಳನ್ನು ಸೃಷ್ಟಿಸಿದೆ’ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

“ಇಂದು, ಕೋಟ್ಯಾಂತರ ಜನರು ತಮ್ಮ ಭವಿಷ್ಯದ ಬಗ್ಗೆ ಭಯಭೀತರಾಗಿದ್ದಾರೆ, ಅವರ ಉದ್ಯೋಗ, ಸಂಪಾದನೆಯ ದಾರಿ ಕಡಿಮೆಯಾಗಿವೆ. ಇತ್ತ ಹಣದುಬ್ಬರ ಹೆಚ್ಚಾಗಿದ್ದು, ವಿಶೇಷವಾಗಿ ಮಧ್ಯಮ ವರ್ಗವನ್ನು ತೊಂದರೆಗೆ ಸಿಲುಕಿಸಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಪತ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯದ ಜನರಿಗೆ ಪರಿಹಾರ ಒದಗಿಸಲು ಯೋಗಿ ಆದಿತ್ಯನಾಥ್ ಅವರಿಗೆ ಐದು ಸಲಹೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ನಿವಾರಣೆಯಲ್ಲಿ ಖಾಸಗಿ ವಲಯದ ಆಸ್ಪತ್ರೆಗಳು ದೊಡ್ಡ ಪಾತ್ರವಹಿಸಿವೆ, ಆದರೆ ಖಾಸಗಿ ಆಸ್ಪತ್ರೆಗಳು ಜನರಿಗೆ ಕೊರೊನಾ ಚಿಕಿತ್ಸೆಗಾಗಿ ಭಾರಿ ಮೊತ್ತವನ್ನು ವಿಧಿಸುತ್ತಿವೆ. ಆದರಿಂದ ವೈದ್ಯಕೀಯ ಸೌಲಭ್ಯಗಳಿಗೆ ಅನುಗುಣವಾಗಿ ಜನರಿಗೆ ಅನುಕೂಲಕರ ಬೆಲೆಗಳನ್ನು ನಿಗದಿಪಡಿಸಲು ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣವನ್ನು ವಸೂಲಿ ಮಾಡಿದವರಿಗೆ ರಾಜ್ಯ ಸರ್ಕಾರವು ಪರಿಹಾರವನ್ನು ನೀಡಬೇಕು ಎಂದು ಹೇಳಿದ್ದಾರೆ.

ಲಾಕ್‌ಡೌನ್ ಸಮಯದಲ್ಲಿ ಜನರಿಗೆ ತೊಂದರೆಯಾಗದಂತೆ, ಹಣದುಬ್ಬರವನ್ನು ನಿಯಂತ್ರಿಸಬೇಕು ಮತ್ತು ಅಗತ್ಯ ವಸ್ತುಗಳಾದ ಖಾದ್ಯ ತೈಲಗಳು, ತರಕಾರಿಗಳು ಮತ್ತು ಹಣ್ಣುಗಳ ಬೆಲೆ ದರ ನಿಗದಿಪಡಿಸುವಂತೆ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಈಗಿರುವ ಸಮಸ್ಯೆಗಳ ನಡುವೆಯೇ ಹೆಚ್ಚಿನ ವಿದ್ಯುತ್ ಬಿಲ್‌ಗಳಿಂದಾಗಿ ಜನರ ಸಮಸ್ಯೆಗಳು ಹೆಚ್ಚಾಗಿದೆ. ಹೀಗಾಗಿ   ಬಿಲ್ ಪಾವತಿಗೆ ಪರಿಹಾರ ನೀಡಬೇಕು ಮತ್ತು ವಿದ್ಯುತ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಾರದು ಎಂದಿದ್ದಾರೆ.

“ಶಾಲೆಗಳು ಮುಚ್ಚಲ್ಪಟ್ಟಿವೆ ಆದರೆ ಪ್ರತಿ ತಿಂಗಳು ಶುಲ್ಕವನ್ನು ಕಟ್ಟುವಂತೆ ಶಾಲೆಗಳು ಒತ್ತಾಯಿಸುತ್ತಿದ್ದು, ಪೋಷಕರು ಒತ್ತಡದಲ್ಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಪತ್ರದಲ್ಲಿ ಬರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು, ಸಾವುಗಳ ಸಂಖ್ಯೆ ಹೆಚ್ಚಿದ್ದರೂ ಸರ್ಕಾರ ಮಾಹಿತಿಯನ್ನು ಮುಚ್ಚಿಡುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು, ವಿಪಕ್ಷಗಳು ಆರೋಪಿಸಿವೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...