Homeಕರೋನಾ ತಲ್ಲಣಉತ್ತರಪ್ರದೇಶ: ವಾರದಲ್ಲಿ ಮೂವರು ಬಿಜೆಪಿ ಶಾಸಕರು ಕೊರೊನಾಗೆ ಬಲಿ

ಉತ್ತರಪ್ರದೇಶ: ವಾರದಲ್ಲಿ ಮೂವರು ಬಿಜೆಪಿ ಶಾಸಕರು ಕೊರೊನಾಗೆ ಬಲಿ

ಬುಧವಾರ ಮೃತರಾದ ಶಾಸಕ ಸಿಂಗ್ ಅವರ ಪುತ್ರ ಏಪ್ರಿಲ್ 18 ರಂದು ಸಾಮಾಜಿಕ ಜಾಲತಾಣದಲ್ಲಿ, ಒಬ್ಬ ಶಾಸಕರಿಗೂ ಸೂಕ್ತ ಚಿಕಿತ್ಸೆ ಸಿಗದಷ್ಟು ಆರೋಗ್ಯ ವ್ಯವಸ್ಥೆ ಕುಸಿದಿದೆ ಎಂದು ಆದಿತ್ಯನಾಥ್‌‌ ಸರ್ಕಾರವನ್ನು ಟೀಕಿಸಿದ್ದರು.

- Advertisement -
- Advertisement -

ಕೊರೊನಾ ಎರಡನೇ ಅಲೆ ಉತ್ತರಪ್ರದೇಶದಲ್ಲಿ ವ್ಯಾಪಕವಾಗತೊಡಗಿದ್ದು, ಅಲ್ಲಿನ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮೂವರು ಶಾಸಕರನ್ನು ಒಂದು ವಾರದೊಳಗೆ ಸಾಂಕ್ರಾಮಿಕ ರೋಗದಿಂದ ಕಳೆದುಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾದಿಂದ ಬಳಲುತ್ತಿದ್ದ ಬರೇಲಿಯ ನವಾಬ್‌ಗಂಜ್ ಕ್ಷೇತ್ರದ ಶಾಸಕ, ಬಿಜೆಪಿಯ ನಾಯಕ ಕೇಸರ್ ಸಿಂಗ್ ಅವರು ಬುಧವಾರ ನೋಯ್ಡಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸಿಂಗ್ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮೌನವಾಗಿರಲ್ಲ, ನೀವು ಪ್ರಯತ್ನಿಸುತ್ತಲೇ ಇರಿ’: ತನ್ನ ನಂಬರ್‌ ಲೀಕ್‌ ಮಾಡಿದ ಬಿಜೆಪಿಗೆ ಸಿದ್ದಾರ್ಥ್

ಕಳೆದ ತಿಂಗಳಿನಿಂದ ಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದರು. ಆರಂಭದಲ್ಲಿ ಭೋಜಪುರದ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿದ್ದರು. ಚೇತರಿಸಿಕೊಂಡ ನಂತರ ಅವರನ್ನು ಅಲ್ಲಿಂದ ಬಿಡುಗಡೆ ಮಾಡಲಾಯಿತು. ನಂತರ ಅವರ ಆರೋಗ್ಯವು ಮತ್ತೆ ಹದಗೆಟ್ಟಿದ್ದು, ಅವರನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು. ಅಲ್ಲಿ ಅವರಿಗೆ ಮತ್ತೆ ಪಾಸಿಟಿವ್ ಆಗಿದೆ. ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ ನಂತರವೂ ಯಾವುದೇ ಮಹತ್ವದ ಸುಧಾರಣೆ ಕಂಡುಬರಲಿಲ್ಲ.

ಏಪ್ರಿಲ್ 18 ರಂದು, ಅವರ ಮಗ ವಿಶಾಲ್ ಗಂಗ್ವಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಒಬ್ಬ ಆಡಳಿತ ಪಕ್ಷದ ಶಾಸಕರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಟೀಕಿಸಿ, ರಾಜ್ಯ ಸರ್ಕಾರವನ್ನು ದೂಷಿಸಿದ್ದರು.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಂತರ ಆರೋಗ್ಯ ಸಚಿವಾಲಯವು ಗಂಗ್ವಾರ್ ಅವರನ್ನು ಏಪ್ರಿಲ್ 19 ರಂದು ನೋಯ್ಡಾದ ಆಸ್ಪತ್ರೆಗೆ ದಾಖಲಿಸಿತು.

ಒಂದು ವಾರದೊಳಗೆ ಉತ್ತರ ಪ್ರದೇಶದಲ್ಲಿ ಇದು ಮೂರನೇ ಬಿಜೆಪಿ ಶಾಸಕರ ಸಾವಾಗಿದೆ. ಇದಕ್ಕೂ ಮೊದಲು ಬಿಜೆಪಿ ಶಾಸಕರಾದ ರಮೇಶ್ ಚಂದ್ರ ದಿವಾಕರ್ ಮತ್ತು ಸುರೇಶ್ ಶ್ರೀವಾಸ್ತವ ಕೂಡ ಕೊರೊನಾದಿಂದ ಮೃತಪಟ್ಟಿದ್ದರು.

ಬುಧವಾರ ಮೃತರಾದ ಸಿಂಗ್ ಬಹಳ ಸಮಯದಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅವರು ಬಿಎಸ್‌ಪಿ ಸರ್ಕಾರದಲ್ಲಿ ಎಂಎಲ್ ಸಿ ಆಗಿದ್ದರು. ಇದಲ್ಲದೆ, ಅವರ ಸಹೋದರನ ಪತ್ನಿ ಉಷಾ ಗಂಗ್ವಾರ್ ಅವರು ಬರೇಲಿಯ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದಾರೆ. ಅದರು ಬಿಜೆಪಿಗೆ ಸೇರಿದ ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ನವಾಬ್‌ ಗಂಜ್‌ನಿಂದ ಭಾರಿ ಮತ ಅಂತರದಿಂದ ಜಯಗಳಿಸಿದ್ದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜನಸಾಮಾನ್ಯರ ಬದಲಿಗೆ, ಈ ವ್ಯವಸ್ಥೆ ಕೆಡಿಸಿದ ದರಿದ್ರ ನಾಯಕರ ಜೀವ ಬಲಿಯಾಗುವುದು ೧೦೦% ವಾಸಿ. ಆಗಲೇ ಈ ಭಿಕಾರಿಗಳಿಗೆ ಬುದ್ದಿಬರುವುದು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....