Homeಮುಖಪುಟಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

- Advertisement -
- Advertisement -

ದಲಿತ ಕಾನ್‌ಸ್ಟೆಬಲ್‌ ಒಬ್ಬರ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ವ್ಯಕ್ತಿಗಳು ದಾಳಿ ಮಾಡಿ; ಡಿಜೆ ಸಂಗೀತವನ್ನು ವಿರೋಧಿಸಿ, ವಾಹನವನ್ನು ಧ್ವಂಸಗೊಳಿಸಿದ್ದಾರೆ. ಜನರ ಮೇಲೆ ಕಲ್ಲು ತೂರಾಟ ನಡೆಸಿರುವ ಜಾತಿವಾದಿಗಳು, ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮದುವೆಗೆ ಆಗಮಿಸಿದ್ದ ಹಲವಾರು ಅತಿಥಿಗಳನ್ನು ಜಾತಿವಾದಿಗಳು ಗಾಯಗೊಳಿಸಿದ್ದಾರೆ ಎಂದು ಬುಲಂದ್‌ಶಹರ್‌ನಲ್ಲಿ ಭಾನುವಾರ ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಿ, ಐವರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಗಾಜಿಯಾಬಾದ್‌ನಲ್ಲಿ ಪಿಎಸಿ ಕಾನ್‌ಸ್ಟೆಬಲ್ ಆಗಿರುವ ವರ ರಾಬಿನ್ ಸಿಂಗ್ (31) ಸೋಮವಾರ ಲಖಾವತಿಯ ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಮದುವೆಯಾಗುತ್ತಿದ್ದರು. ಅವರ ತಂದೆ ನಂದ್ರಾಮ್ ಸಿಂಗ್, ರಾತ್ರಿ 8 ಗಂಟೆ ಸುಮಾರಿಗೆ ಜಹಾಂಗೀರಾಬಾದ್ ಪ್ರದೇಶದ ಟಿಟೋನಾ ಗ್ರಾಮದ ಮೂಲಕ ಬರಾತ್ ಹಾದು ಹೋಗುತ್ತಿದ್ದಾಗ ಠಾಕೂರ್ ಸಮುದಾಯದ 20-25 ಜನ ಪುರುಷರು ಮೆರವಣಿಗೆಯನ್ನು ತಡೆದರು.

“ಡಿಜೆ ಸಂಗೀತದೊಂದಿಗೆ ತಮ್ಮ ಪ್ರದೇಶದಲ್ಲಿ ಬರಾತ್ ಹಾದು ಹೋಗುವುದನ್ನು ಅವರು ಆಕ್ಷೇಪಿಸಿದರು. ಅವರು ನಮ್ಮ ಮೇಲೆ ಕಲ್ಲು ತೂರಿದರು, ಬಲವಂತವಾಗಿ ನನ್ನ ಮಗನನ್ನು ಕುದುರೆಯಿಂದ ಕೆಳಗಿಳಿಸಿ, ಡಿಜೆ ವಾಹನವನ್ನು ಧ್ವಂಸಗೊಳಿಸಿದರು. ದಾಳಿಯಲ್ಲಿ ಕೆಲವು ಅತಿಥಿಗಳು ಗಾಯಗೊಂಡರು. ನನ್ನ ಮಗ ಗಂಭೀರ ಹಾನಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾನೆ” ಎಂದು ಅವರು ವಿವರಿಸಿದ್ದಾರೆ.

ಕೆಲವು ದಾಳಿಕೋರರು ತಮ್ಮ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ರಾಬಿನ್ ಹೇಳಿದ್ದಾರೆ. “ನನ್ನ ನಿಶ್ಚಿತಾರ್ಥದ ದಿನ ನಾನು ಅವರಲ್ಲಿ ಕೆಲವರನ್ನು ಗುರುತಿಸಿದೆ. ಅವರು ಮೆರವಣಿಗೆಯಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದರು, ದಲಿತ ಬಾರಾತ್ ತಮ್ಮ ಪ್ರದೇಶದಲ್ಲಿ ಹಾದು ಹೋಗಬಾರದು ಎಂದು ಹೇಳಿದರು. ಅವರು ಡಿಜೆ ಚಾಲಕನನ್ನು ಥಳಿಸಿ ಉಪಕರಣಗಳನ್ನು ನಾಶಪಡಿಸಿದರು. ನಾವು ಬಾರಾತ್ನೊಂದಿಗೆ ಮನೆಗೆ ಮರಳಬೇಕಾಯಿತು. ವಧುವಿನ ಮನೆಗೆ ಕಾರಿನಲ್ಲಿ ಹೋದರು, ಎಲ್ಲವೂ ಯೋಜಿಸಲಾಗಿತ್ತು. ಆದರೆ, ಈ ಹಿಂಸಾಚಾರದಿಂದಾಗಿ ಎಲ್ಲವೂ ವ್ಯರ್ಥವಾಯಿತು” ಎಂದು ಪೊಲೀಸ್ ಕಾನ್‌ಸ್ಟೆಬಲ್‌ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ; ವಿಎಚ್‌ಪಿ ವೇದಿಕೆಯಲ್ಲಿ ವಿವಾದಾತ್ಮಕ ಹೇಳಿಕೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...