Homeಮುಖಪುಟಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

- Advertisement -
- Advertisement -

ದಲಿತ ಕಾನ್‌ಸ್ಟೆಬಲ್‌ ಒಬ್ಬರ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ವ್ಯಕ್ತಿಗಳು ದಾಳಿ ಮಾಡಿ; ಡಿಜೆ ಸಂಗೀತವನ್ನು ವಿರೋಧಿಸಿ, ವಾಹನವನ್ನು ಧ್ವಂಸಗೊಳಿಸಿದ್ದಾರೆ. ಜನರ ಮೇಲೆ ಕಲ್ಲು ತೂರಾಟ ನಡೆಸಿರುವ ಜಾತಿವಾದಿಗಳು, ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮದುವೆಗೆ ಆಗಮಿಸಿದ್ದ ಹಲವಾರು ಅತಿಥಿಗಳನ್ನು ಜಾತಿವಾದಿಗಳು ಗಾಯಗೊಳಿಸಿದ್ದಾರೆ ಎಂದು ಬುಲಂದ್‌ಶಹರ್‌ನಲ್ಲಿ ಭಾನುವಾರ ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಿ, ಐವರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಗಾಜಿಯಾಬಾದ್‌ನಲ್ಲಿ ಪಿಎಸಿ ಕಾನ್‌ಸ್ಟೆಬಲ್ ಆಗಿರುವ ವರ ರಾಬಿನ್ ಸಿಂಗ್ (31) ಸೋಮವಾರ ಲಖಾವತಿಯ ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಮದುವೆಯಾಗುತ್ತಿದ್ದರು. ಅವರ ತಂದೆ ನಂದ್ರಾಮ್ ಸಿಂಗ್, ರಾತ್ರಿ 8 ಗಂಟೆ ಸುಮಾರಿಗೆ ಜಹಾಂಗೀರಾಬಾದ್ ಪ್ರದೇಶದ ಟಿಟೋನಾ ಗ್ರಾಮದ ಮೂಲಕ ಬರಾತ್ ಹಾದು ಹೋಗುತ್ತಿದ್ದಾಗ ಠಾಕೂರ್ ಸಮುದಾಯದ 20-25 ಜನ ಪುರುಷರು ಮೆರವಣಿಗೆಯನ್ನು ತಡೆದರು.

“ಡಿಜೆ ಸಂಗೀತದೊಂದಿಗೆ ತಮ್ಮ ಪ್ರದೇಶದಲ್ಲಿ ಬರಾತ್ ಹಾದು ಹೋಗುವುದನ್ನು ಅವರು ಆಕ್ಷೇಪಿಸಿದರು. ಅವರು ನಮ್ಮ ಮೇಲೆ ಕಲ್ಲು ತೂರಿದರು, ಬಲವಂತವಾಗಿ ನನ್ನ ಮಗನನ್ನು ಕುದುರೆಯಿಂದ ಕೆಳಗಿಳಿಸಿ, ಡಿಜೆ ವಾಹನವನ್ನು ಧ್ವಂಸಗೊಳಿಸಿದರು. ದಾಳಿಯಲ್ಲಿ ಕೆಲವು ಅತಿಥಿಗಳು ಗಾಯಗೊಂಡರು. ನನ್ನ ಮಗ ಗಂಭೀರ ಹಾನಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾನೆ” ಎಂದು ಅವರು ವಿವರಿಸಿದ್ದಾರೆ.

ಕೆಲವು ದಾಳಿಕೋರರು ತಮ್ಮ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ರಾಬಿನ್ ಹೇಳಿದ್ದಾರೆ. “ನನ್ನ ನಿಶ್ಚಿತಾರ್ಥದ ದಿನ ನಾನು ಅವರಲ್ಲಿ ಕೆಲವರನ್ನು ಗುರುತಿಸಿದೆ. ಅವರು ಮೆರವಣಿಗೆಯಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದರು, ದಲಿತ ಬಾರಾತ್ ತಮ್ಮ ಪ್ರದೇಶದಲ್ಲಿ ಹಾದು ಹೋಗಬಾರದು ಎಂದು ಹೇಳಿದರು. ಅವರು ಡಿಜೆ ಚಾಲಕನನ್ನು ಥಳಿಸಿ ಉಪಕರಣಗಳನ್ನು ನಾಶಪಡಿಸಿದರು. ನಾವು ಬಾರಾತ್ನೊಂದಿಗೆ ಮನೆಗೆ ಮರಳಬೇಕಾಯಿತು. ವಧುವಿನ ಮನೆಗೆ ಕಾರಿನಲ್ಲಿ ಹೋದರು, ಎಲ್ಲವೂ ಯೋಜಿಸಲಾಗಿತ್ತು. ಆದರೆ, ಈ ಹಿಂಸಾಚಾರದಿಂದಾಗಿ ಎಲ್ಲವೂ ವ್ಯರ್ಥವಾಯಿತು” ಎಂದು ಪೊಲೀಸ್ ಕಾನ್‌ಸ್ಟೆಬಲ್‌ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ; ವಿಎಚ್‌ಪಿ ವೇದಿಕೆಯಲ್ಲಿ ವಿವಾದಾತ್ಮಕ ಹೇಳಿಕೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...