Homeಮುಖಪುಟಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

- Advertisement -
- Advertisement -

ದಲಿತ ಕಾನ್‌ಸ್ಟೆಬಲ್‌ ಒಬ್ಬರ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ವ್ಯಕ್ತಿಗಳು ದಾಳಿ ಮಾಡಿ; ಡಿಜೆ ಸಂಗೀತವನ್ನು ವಿರೋಧಿಸಿ, ವಾಹನವನ್ನು ಧ್ವಂಸಗೊಳಿಸಿದ್ದಾರೆ. ಜನರ ಮೇಲೆ ಕಲ್ಲು ತೂರಾಟ ನಡೆಸಿರುವ ಜಾತಿವಾದಿಗಳು, ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮದುವೆಗೆ ಆಗಮಿಸಿದ್ದ ಹಲವಾರು ಅತಿಥಿಗಳನ್ನು ಜಾತಿವಾದಿಗಳು ಗಾಯಗೊಳಿಸಿದ್ದಾರೆ ಎಂದು ಬುಲಂದ್‌ಶಹರ್‌ನಲ್ಲಿ ಭಾನುವಾರ ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಿ, ಐವರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಗಾಜಿಯಾಬಾದ್‌ನಲ್ಲಿ ಪಿಎಸಿ ಕಾನ್‌ಸ್ಟೆಬಲ್ ಆಗಿರುವ ವರ ರಾಬಿನ್ ಸಿಂಗ್ (31) ಸೋಮವಾರ ಲಖಾವತಿಯ ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಮದುವೆಯಾಗುತ್ತಿದ್ದರು. ಅವರ ತಂದೆ ನಂದ್ರಾಮ್ ಸಿಂಗ್, ರಾತ್ರಿ 8 ಗಂಟೆ ಸುಮಾರಿಗೆ ಜಹಾಂಗೀರಾಬಾದ್ ಪ್ರದೇಶದ ಟಿಟೋನಾ ಗ್ರಾಮದ ಮೂಲಕ ಬರಾತ್ ಹಾದು ಹೋಗುತ್ತಿದ್ದಾಗ ಠಾಕೂರ್ ಸಮುದಾಯದ 20-25 ಜನ ಪುರುಷರು ಮೆರವಣಿಗೆಯನ್ನು ತಡೆದರು.

“ಡಿಜೆ ಸಂಗೀತದೊಂದಿಗೆ ತಮ್ಮ ಪ್ರದೇಶದಲ್ಲಿ ಬರಾತ್ ಹಾದು ಹೋಗುವುದನ್ನು ಅವರು ಆಕ್ಷೇಪಿಸಿದರು. ಅವರು ನಮ್ಮ ಮೇಲೆ ಕಲ್ಲು ತೂರಿದರು, ಬಲವಂತವಾಗಿ ನನ್ನ ಮಗನನ್ನು ಕುದುರೆಯಿಂದ ಕೆಳಗಿಳಿಸಿ, ಡಿಜೆ ವಾಹನವನ್ನು ಧ್ವಂಸಗೊಳಿಸಿದರು. ದಾಳಿಯಲ್ಲಿ ಕೆಲವು ಅತಿಥಿಗಳು ಗಾಯಗೊಂಡರು. ನನ್ನ ಮಗ ಗಂಭೀರ ಹಾನಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾನೆ” ಎಂದು ಅವರು ವಿವರಿಸಿದ್ದಾರೆ.

ಕೆಲವು ದಾಳಿಕೋರರು ತಮ್ಮ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ರಾಬಿನ್ ಹೇಳಿದ್ದಾರೆ. “ನನ್ನ ನಿಶ್ಚಿತಾರ್ಥದ ದಿನ ನಾನು ಅವರಲ್ಲಿ ಕೆಲವರನ್ನು ಗುರುತಿಸಿದೆ. ಅವರು ಮೆರವಣಿಗೆಯಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದರು, ದಲಿತ ಬಾರಾತ್ ತಮ್ಮ ಪ್ರದೇಶದಲ್ಲಿ ಹಾದು ಹೋಗಬಾರದು ಎಂದು ಹೇಳಿದರು. ಅವರು ಡಿಜೆ ಚಾಲಕನನ್ನು ಥಳಿಸಿ ಉಪಕರಣಗಳನ್ನು ನಾಶಪಡಿಸಿದರು. ನಾವು ಬಾರಾತ್ನೊಂದಿಗೆ ಮನೆಗೆ ಮರಳಬೇಕಾಯಿತು. ವಧುವಿನ ಮನೆಗೆ ಕಾರಿನಲ್ಲಿ ಹೋದರು, ಎಲ್ಲವೂ ಯೋಜಿಸಲಾಗಿತ್ತು. ಆದರೆ, ಈ ಹಿಂಸಾಚಾರದಿಂದಾಗಿ ಎಲ್ಲವೂ ವ್ಯರ್ಥವಾಯಿತು” ಎಂದು ಪೊಲೀಸ್ ಕಾನ್‌ಸ್ಟೆಬಲ್‌ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ; ವಿಎಚ್‌ಪಿ ವೇದಿಕೆಯಲ್ಲಿ ವಿವಾದಾತ್ಮಕ ಹೇಳಿಕೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...