Homeಮುಖಪುಟಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ

ಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ

- Advertisement -
- Advertisement -

ರಾಂಪುರ: ಉತ್ತರಪ್ರದೇಶದ ರಾಂಪುರದಲ್ಲಿ ದಾರಿ ಬಿಡದ ಕಾರಣಕ್ಕೆ ಬೈಕ್ ಸವಾರರು ಮತ್ತು ಇ-ರಿಕ್ಷಾ ಚಾಲಕನ ನಡುವೆ ನಡೆದ ವಾಗ್ವಾದವು ಘರ್ಷಣೆಗೆ ತಿರುಗಿದ ಪರಿಣಾಮ, ಬೈಕ್ ಸವಾರರ ಕ್ರೂರ ಹಲ್ಲೆಯಿಂದ 55 ವರ್ಷದ ದಲಿತ ಇ-ರಿಕ್ಷಾ ಚಾಲಕ ಭಗವಾನ್ ದಾಸ್ ಮೃತಪಟ್ಟಿದ್ದಾರೆ.

ಮಂಗಳವಾರ ಸಂಜೆ 7.30ರ ಸುಮಾರಿಗೆ, ಪರಮ ಕಲ್ಯಾಣಪುರ ಗ್ರಾಮದ ನಿವಾಸಿಗಳಾದ ಭಗವಾನ್ ದಾಸ್ ಮತ್ತು ಅವರ ಮಗ ಜಿತೇಂದ್ರ ತಮ್ಮ ಇ-ರಿಕ್ಷಾದಲ್ಲಿ ಪ್ರಯಾಣಿಕರೊಂದಿಗೆ ನಗರದಿಂದ ಹಳ್ಳಿಗೆ ಹಿಂತಿರುಗುತ್ತಿದ್ದರು. ತರಬ್ಬಾ ಗ್ರಾಮದ ಬಳಿ, ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರರು ದಾರಿ ಬಿಡುವಂತೆ ಕೇಳಿದ್ದಾರೆ. ಇ-ರಿಕ್ಷಾದಲ್ಲಿ ಪ್ರಯಾಣಿಕರಿದ್ದ ಕಾರಣ ದಾರಿ ಕೊಡಲು ಸಾಧ್ಯವಾಗದಿದ್ದಾಗ, ಬೈಕ್ ಸವಾರರು ಭಗವಾನ್ ದಾಸ್ ಜೊತೆ ವಾಗ್ವಾದ ನಡೆಸಿದ್ದಾರೆ. ಈ ವಾಗ್ವಾದ ತೀವ್ರಗೊಂಡು, ಬೈಕ್ ಸವಾರರು ಭಗವಾನ್ ದಾಸ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಭಗವಾನ್ ಅವರ ಮಗ ಜಿತೇಂದ್ರ ಹೇಳಿರುವ ಪ್ರಕಾರ, ಆರೋಪಿಗಳು ತಮ್ಮ ತಂದೆಯನ್ನು ಕ್ರೂರವಾಗಿ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಜಿತೇಂದ್ರ ತಂದೆಯ ಸಹಾಯಕ್ಕೆ ಬರುವಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ನಂತರ, ವಿಷಯ ತಿಳಿದ ದಲಿತ ಸಮುದಾಯದ ಜನರು ಮತ್ತು ಕುಟುಂಬ ಸದಸ್ಯರು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಘಟನಾ ಸ್ಥಳಕ್ಕೆ ಎಸ್‌ಡಿಎಂ ಆನಂದ್ ಕುಮಾರ್ ಕನೌಜಿಯಾ, ಸಿಒ ರಾಜವೀರ್ ಸಿಂಗ್ ಪರಿಹಾರ್, ಕೊತ್ವಾಲ್ ಧನಂಜಯ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದರು. ಕುಟುಂಬ ಸದಸ್ಯರು ಮತ್ತು ಪ್ರತಿಭಟನಾಕಾರರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ನಿರಾಕರಿಸಿ, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಮಿಶ್ರಾ ಕೂಡ ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ ನಂತರ, ಸುಮಾರು ಹತ್ತು ಗಂಟೆಯ ಸುಮಾರಿಗೆ ಪ್ರತಿಭಟನೆ ತಣ್ಣಗಾಯಿತು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಮಳೆಯ ಕಾರಣದಿಂದ ಮೃತದೇಹವನ್ನು ಟಿನ್ ಶೆಡ್ ಒಂದರಲ್ಲಿ ಇರಿಸಿ ನಂತರ ಪ್ರತಿಭಟನಾಕಾರರು ರಸ್ತೆಗೆ ಬಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು, ಹಲ್ಲೆ ಮಾಡಿದ ಆರೋಪಿಗಳು ಮಿಲಕ್ ಕೊತ್ವಾಲಿ ಪ್ರದೇಶದ ಬಾರಾ ಗಜೇಜಾ ನಿವಾಸಿಗಳು ಎಂದು ಆರೋಪಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಮಿಶ್ರಾ ಅವರು ಮಾತನಾಡಿ, ಘಟನೆ ಬಗ್ಗೆ ಮಾಹಿತಿ ಬಂದಿದ್ದು, ತನಿಖೆ ನಡೆಸಲಾಗುವುದು ಮತ್ತು ಇನ್ನೂ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...

ಮತಾಂತರ ವಿರೋಧಿ ಮಸೂದೆಗೆ ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ

ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರಗಳನ್ನು ಗುರಿಯಾಗಿಸಿಕೊಂಡು ರಚಿಸಲಾದ 'ಧರ್ಮ ಸ್ವಾತಂತ್ರ್ಯ ಆಡಳಿತ, 2026' ಕರಡನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅನುಮೋದಿಸಿದೆ. ಇದು ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5...

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...