Homeಮುಖಪುಟಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ

ಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ

- Advertisement -
- Advertisement -

ರಾಂಪುರ: ಉತ್ತರಪ್ರದೇಶದ ರಾಂಪುರದಲ್ಲಿ ದಾರಿ ಬಿಡದ ಕಾರಣಕ್ಕೆ ಬೈಕ್ ಸವಾರರು ಮತ್ತು ಇ-ರಿಕ್ಷಾ ಚಾಲಕನ ನಡುವೆ ನಡೆದ ವಾಗ್ವಾದವು ಘರ್ಷಣೆಗೆ ತಿರುಗಿದ ಪರಿಣಾಮ, ಬೈಕ್ ಸವಾರರ ಕ್ರೂರ ಹಲ್ಲೆಯಿಂದ 55 ವರ್ಷದ ದಲಿತ ಇ-ರಿಕ್ಷಾ ಚಾಲಕ ಭಗವಾನ್ ದಾಸ್ ಮೃತಪಟ್ಟಿದ್ದಾರೆ.

ಮಂಗಳವಾರ ಸಂಜೆ 7.30ರ ಸುಮಾರಿಗೆ, ಪರಮ ಕಲ್ಯಾಣಪುರ ಗ್ರಾಮದ ನಿವಾಸಿಗಳಾದ ಭಗವಾನ್ ದಾಸ್ ಮತ್ತು ಅವರ ಮಗ ಜಿತೇಂದ್ರ ತಮ್ಮ ಇ-ರಿಕ್ಷಾದಲ್ಲಿ ಪ್ರಯಾಣಿಕರೊಂದಿಗೆ ನಗರದಿಂದ ಹಳ್ಳಿಗೆ ಹಿಂತಿರುಗುತ್ತಿದ್ದರು. ತರಬ್ಬಾ ಗ್ರಾಮದ ಬಳಿ, ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರರು ದಾರಿ ಬಿಡುವಂತೆ ಕೇಳಿದ್ದಾರೆ. ಇ-ರಿಕ್ಷಾದಲ್ಲಿ ಪ್ರಯಾಣಿಕರಿದ್ದ ಕಾರಣ ದಾರಿ ಕೊಡಲು ಸಾಧ್ಯವಾಗದಿದ್ದಾಗ, ಬೈಕ್ ಸವಾರರು ಭಗವಾನ್ ದಾಸ್ ಜೊತೆ ವಾಗ್ವಾದ ನಡೆಸಿದ್ದಾರೆ. ಈ ವಾಗ್ವಾದ ತೀವ್ರಗೊಂಡು, ಬೈಕ್ ಸವಾರರು ಭಗವಾನ್ ದಾಸ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಭಗವಾನ್ ಅವರ ಮಗ ಜಿತೇಂದ್ರ ಹೇಳಿರುವ ಪ್ರಕಾರ, ಆರೋಪಿಗಳು ತಮ್ಮ ತಂದೆಯನ್ನು ಕ್ರೂರವಾಗಿ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಜಿತೇಂದ್ರ ತಂದೆಯ ಸಹಾಯಕ್ಕೆ ಬರುವಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ನಂತರ, ವಿಷಯ ತಿಳಿದ ದಲಿತ ಸಮುದಾಯದ ಜನರು ಮತ್ತು ಕುಟುಂಬ ಸದಸ್ಯರು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಘಟನಾ ಸ್ಥಳಕ್ಕೆ ಎಸ್‌ಡಿಎಂ ಆನಂದ್ ಕುಮಾರ್ ಕನೌಜಿಯಾ, ಸಿಒ ರಾಜವೀರ್ ಸಿಂಗ್ ಪರಿಹಾರ್, ಕೊತ್ವಾಲ್ ಧನಂಜಯ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದರು. ಕುಟುಂಬ ಸದಸ್ಯರು ಮತ್ತು ಪ್ರತಿಭಟನಾಕಾರರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ನಿರಾಕರಿಸಿ, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಮಿಶ್ರಾ ಕೂಡ ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ ನಂತರ, ಸುಮಾರು ಹತ್ತು ಗಂಟೆಯ ಸುಮಾರಿಗೆ ಪ್ರತಿಭಟನೆ ತಣ್ಣಗಾಯಿತು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಮಳೆಯ ಕಾರಣದಿಂದ ಮೃತದೇಹವನ್ನು ಟಿನ್ ಶೆಡ್ ಒಂದರಲ್ಲಿ ಇರಿಸಿ ನಂತರ ಪ್ರತಿಭಟನಾಕಾರರು ರಸ್ತೆಗೆ ಬಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು, ಹಲ್ಲೆ ಮಾಡಿದ ಆರೋಪಿಗಳು ಮಿಲಕ್ ಕೊತ್ವಾಲಿ ಪ್ರದೇಶದ ಬಾರಾ ಗಜೇಜಾ ನಿವಾಸಿಗಳು ಎಂದು ಆರೋಪಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಮಿಶ್ರಾ ಅವರು ಮಾತನಾಡಿ, ಘಟನೆ ಬಗ್ಗೆ ಮಾಹಿತಿ ಬಂದಿದ್ದು, ತನಿಖೆ ನಡೆಸಲಾಗುವುದು ಮತ್ತು ಇನ್ನೂ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...