Homeಮುಖಪುಟಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ

ಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ

- Advertisement -
- Advertisement -

ರಾಂಪುರ: ಉತ್ತರಪ್ರದೇಶದ ರಾಂಪುರದಲ್ಲಿ ದಾರಿ ಬಿಡದ ಕಾರಣಕ್ಕೆ ಬೈಕ್ ಸವಾರರು ಮತ್ತು ಇ-ರಿಕ್ಷಾ ಚಾಲಕನ ನಡುವೆ ನಡೆದ ವಾಗ್ವಾದವು ಘರ್ಷಣೆಗೆ ತಿರುಗಿದ ಪರಿಣಾಮ, ಬೈಕ್ ಸವಾರರ ಕ್ರೂರ ಹಲ್ಲೆಯಿಂದ 55 ವರ್ಷದ ದಲಿತ ಇ-ರಿಕ್ಷಾ ಚಾಲಕ ಭಗವಾನ್ ದಾಸ್ ಮೃತಪಟ್ಟಿದ್ದಾರೆ.

ಮಂಗಳವಾರ ಸಂಜೆ 7.30ರ ಸುಮಾರಿಗೆ, ಪರಮ ಕಲ್ಯಾಣಪುರ ಗ್ರಾಮದ ನಿವಾಸಿಗಳಾದ ಭಗವಾನ್ ದಾಸ್ ಮತ್ತು ಅವರ ಮಗ ಜಿತೇಂದ್ರ ತಮ್ಮ ಇ-ರಿಕ್ಷಾದಲ್ಲಿ ಪ್ರಯಾಣಿಕರೊಂದಿಗೆ ನಗರದಿಂದ ಹಳ್ಳಿಗೆ ಹಿಂತಿರುಗುತ್ತಿದ್ದರು. ತರಬ್ಬಾ ಗ್ರಾಮದ ಬಳಿ, ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರರು ದಾರಿ ಬಿಡುವಂತೆ ಕೇಳಿದ್ದಾರೆ. ಇ-ರಿಕ್ಷಾದಲ್ಲಿ ಪ್ರಯಾಣಿಕರಿದ್ದ ಕಾರಣ ದಾರಿ ಕೊಡಲು ಸಾಧ್ಯವಾಗದಿದ್ದಾಗ, ಬೈಕ್ ಸವಾರರು ಭಗವಾನ್ ದಾಸ್ ಜೊತೆ ವಾಗ್ವಾದ ನಡೆಸಿದ್ದಾರೆ. ಈ ವಾಗ್ವಾದ ತೀವ್ರಗೊಂಡು, ಬೈಕ್ ಸವಾರರು ಭಗವಾನ್ ದಾಸ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಭಗವಾನ್ ಅವರ ಮಗ ಜಿತೇಂದ್ರ ಹೇಳಿರುವ ಪ್ರಕಾರ, ಆರೋಪಿಗಳು ತಮ್ಮ ತಂದೆಯನ್ನು ಕ್ರೂರವಾಗಿ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಜಿತೇಂದ್ರ ತಂದೆಯ ಸಹಾಯಕ್ಕೆ ಬರುವಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ನಂತರ, ವಿಷಯ ತಿಳಿದ ದಲಿತ ಸಮುದಾಯದ ಜನರು ಮತ್ತು ಕುಟುಂಬ ಸದಸ್ಯರು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಘಟನಾ ಸ್ಥಳಕ್ಕೆ ಎಸ್‌ಡಿಎಂ ಆನಂದ್ ಕುಮಾರ್ ಕನೌಜಿಯಾ, ಸಿಒ ರಾಜವೀರ್ ಸಿಂಗ್ ಪರಿಹಾರ್, ಕೊತ್ವಾಲ್ ಧನಂಜಯ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದರು. ಕುಟುಂಬ ಸದಸ್ಯರು ಮತ್ತು ಪ್ರತಿಭಟನಾಕಾರರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ನಿರಾಕರಿಸಿ, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಮಿಶ್ರಾ ಕೂಡ ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ ನಂತರ, ಸುಮಾರು ಹತ್ತು ಗಂಟೆಯ ಸುಮಾರಿಗೆ ಪ್ರತಿಭಟನೆ ತಣ್ಣಗಾಯಿತು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಮಳೆಯ ಕಾರಣದಿಂದ ಮೃತದೇಹವನ್ನು ಟಿನ್ ಶೆಡ್ ಒಂದರಲ್ಲಿ ಇರಿಸಿ ನಂತರ ಪ್ರತಿಭಟನಾಕಾರರು ರಸ್ತೆಗೆ ಬಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು, ಹಲ್ಲೆ ಮಾಡಿದ ಆರೋಪಿಗಳು ಮಿಲಕ್ ಕೊತ್ವಾಲಿ ಪ್ರದೇಶದ ಬಾರಾ ಗಜೇಜಾ ನಿವಾಸಿಗಳು ಎಂದು ಆರೋಪಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾ ಸಾಗರ್ ಮಿಶ್ರಾ ಅವರು ಮಾತನಾಡಿ, ಘಟನೆ ಬಗ್ಗೆ ಮಾಹಿತಿ ಬಂದಿದ್ದು, ತನಿಖೆ ನಡೆಸಲಾಗುವುದು ಮತ್ತು ಇನ್ನೂ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...