Homeದಲಿತ್ ಫೈಲ್ಸ್ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಇಬ್ಬರ ಬಂಧನ

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಇಬ್ಬರ ಬಂಧನ

- Advertisement -
- Advertisement -

ಮದುವೆ ಮನೆಯಲ್ಲಿ ಡಿಜೆ ಸಂಗೀತಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದಲ್ಲಿ, ದಲಿತ ವರನ ವಿವಾಹ ಮೆರವಣಿಗೆ ಮೇಲೆ ಪ್ರಬಲ ಜಾತಿ ಸದಸ್ಯರು ಹಲ್ಲೆ ನಡೆಸಿದ ಆರೋಪದ ಮೇಲೆ ಠಾಕೂರ್ ಸಮುದಾಯದ ಇಬ್ಬರನ್ನು ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ ಠಾಕೂರ್ ಸಮುದಾಯಕ್ಕೆ ಸೇರಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಮೀರತ್‌ನ ಕಲಿಂಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ಜನರ ಗುಂಪೊಂದು ದಾಳಿ ನಡೆಸಿದ ಬಳಿಕ ಜಾತಿ ನಿಂದನೆ ಮಾಡಿದ್ದಾರೆ. ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿ, ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ.

ಮುಜಾಫರ್‌ನಗರದ ಭೋಕರ್‌ಹೆಡಿ ಗ್ರಾಮದ ನಿವಾಸಿ ವರ ಸಂಜೀವ್ ಕುಮಾರ್ ಅವರ ಪ್ರಕಾರ, ಆರೋಪಿಯು ವರನ ಸಹೋದರ ಗೋವಿಂದ್ ಅವರನ್ನು ಕೋಲುಗಳಿಂದ ಹೊಡೆದು ತಲೆಗೆ ತೀವ್ರ ಗಾಯಗೊಳಿಸಿದ್ದಾನೆ. ಅವರ ಸಹೋದರಿ ಅಂಜು ಮಧ್ಯಪ್ರವೇಶಿಸಿದಾಗ, ಅವರ ಮೇಲೂ ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಮದುವೆ ಮೆರವಣಿಗೆಯಲ್ಲಿ ಹಲವಾರು ಮಹಿಳೆಯರನ್ನು ಸಹ ಬೆನ್ನಟ್ಟಿ ಥಳಿಸಲಾಯಿತು. ದಾಳಿಕೋರರು ಕಾರುಗಳಲ್ಲಿ ಪರಾರಿಯಾಗಿದ್ದ ಅತಿಥಿಗಳನ್ನು ಹಿಂಬಾಲಿಸಿದರು. ಸಂತ್ರಸ್ತರು ತಪ್ಪಿಸಿಕೊಂಡು ಸರ್ಧಾನಾ ಪೊಲೀಸ್ ಠಾಣೆ ತಲುಪುವಲ್ಲಿ ಯಶಸ್ವಿಯಾದರು ಎಂದು ಅವರು ಹೇಳಿದರು.

ದಾಳಿಕೋರರು ವರನ ಚಿಕ್ಕಪ್ಪನಿಂದ ಎರಡು ಚಿನ್ನದ ಉಂಗುರಗಳು, ಒಂದು ಚಿನ್ನದ ಬಳೆ ಮತ್ತು ₹2 ಲಕ್ಷ ಹಣವಿರುವ ಚೀಲವನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ದಾಳಿಕೋರರು ಠಾಕೂರ್ ಸಮುದಾಯಕ್ಕೆ ಸೇರಿದವರು ಎಂದು ಸಂಜೀವ್ ಹೇಳಿದ್ದಾರೆ.

ಸಂತ್ರಸ್ತರ ಪ್ರಕಾರ, ಮದುವೆಯಲ್ಲಿ ಡಿಜೆ ಸಂಗೀತ ನುಡಿಸುವ ಬಗ್ಗೆ ವಿವಾದ ಪ್ರಾರಂಭವಾಯಿತು. ಆರೋಪಿಗಳು ಮೆರವಣಿಗೆಯನ್ನು ನಿಲ್ಲಿಸಿ, ಠಾಕೂರ್ ಕುಟುಂಬಗಳಿಗೆ ಮಾತ್ರ ಗ್ರಾಮದಲ್ಲಿ ಡಿಜೆ ನುಡಿಸಲು ಅವಕಾಶವಿದೆ ಎಂದು ತಾಕೀತು ಮಾಡಿದ್ದಾರೆ.

ಆದರೆ, ವಿವಾದವು ತಿಂಡಿ ಅಂಗಡಿಯಲ್ಲಿ ಪ್ರಾರಂಭವಾಯಿತು ಎಂದು ಪೊಲೀಸರು ಹೇಳಿದ್ದಾರೆ. ಮೂವರು ಶಂಕಿತರನ್ನು ಬಂಧಿಸಲಾಗಿದೆ. ಆದರೆ, ವರನ ಸಹೋದರ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಂತಿಮವಾಗಿ ಪೊಲೀಸ್ ರಕ್ಷಣೆಯಲ್ಲಿ ಮದುವೆಯನ್ನು ಪೂರ್ಣಗೊಳಿಸಲಾಯಿತು.

ವಧುವಿನ ಸಹೋದರ ನೀಡಿದ ದೂರಿನ ಮೇರೆಗೆ, ಪೊಲೀಸರು ಬಿಎನ್‌ಎಸ್ ಸೆಕ್ಷನ್ 191(2) (ಗಲಭೆ), 74 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 352 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 351(2) (ಕ್ರಿಮಿನಲ್ ಬೆದರಿಕೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 2(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎಫ್‌ಐಆರ್‌ನಲ್ಲಿ ನಾಲ್ವರು ಆರೋಪಿಗಳಾದ ಅಕ್ಷಯ್, ಸಚಿನ್ ಅಲಿಯಾಸ್ ಕಾಲಾ, ಚೋಟು ಅಲಿಯಾಸ್ ನಿಶಾಂತ್ ಮತ್ತು ತರುಣ್, ಎಲ್ಲರೂ ಕಾಳಿಂದಿ ಗ್ರಾಮದ ನಿವಾಸಿಗಳು ಎಂದು ಹೆಸರಿಸಲಾಗಿದೆ. ಗ್ರಾಮದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಇದನ್ನು ದೃಢಪಡಿಸಿದ ಎಸ್‌ಪಿ (ಗ್ರಾಮೀಣ) ರಾಕೇಶ್ ಮಿಶ್ರಾ, “ಆರೋಪಿಗಳನ್ನು ವೀಡಿಯೊ ಸಾಕ್ಷ್ಯಗಳ ಮೂಲಕ ಗುರುತಿಸಲಾಗಿದೆ. ಸಂಜೆ ನಂತರ, ಪೊಲೀಸರು ತರುಣ್ ಮತ್ತು ಚೋಟು ಅವರನ್ನು ಬಂಧಿಸಿದರು. ಇತರರಿಗಾಗಿ ಹುಡುಕಾಟ ಮುಂದುವರೆದಿದೆ. ಗ್ರಾಮವು ಶಾಂತಿಯುತವಾಗಿದ್ದು, ಮದುವೆ ನಡೆದಿದೆ” ಎಂದರು.

ಈ ಮಧ್ಯೆ, ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಅವರು ಘಟನೆಯನ್ನು ಖಂಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ದಾಳಿಕೋರರು ‘ಡಿಜೆ ನಮ್ಮ ಮನೆಯಲ್ಲಿ ಮಾತ್ರ ಹಾಕಬೇಕು!’ ಎಂದು ಬಹಿರಂಗವಾಗಿ ಬೆದರಿಕೆ ಹಾಕಿದರು. ಬಹುಜನ ಸಮುದಾಯಕ್ಕೆ ತಮ್ಮ ಮದುವೆಗಳನ್ನು ಆಚರಿಸುವ ಸ್ವಾತಂತ್ರ್ಯವೂ ಇಲ್ಲವೇ? ಈ ರಾಜ್ಯದಲ್ಲಿ ದಲಿತರಿಗೆ ತಮ್ಮ ಸಂತೋಷದಲ್ಲಿ ಆನಂದಿಸುವ ಹಕ್ಕಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಸಿಎಂ ಯೋಗಿ ದಲಿತರ ಘನತೆ ಮತ್ತು ಭದ್ರತೆಯ ಬಗ್ಗೆ ಎಷ್ಟೇ ಮಾತನಾಡಿದರೂ, ಉತ್ತರ ಪ್ರದೇಶದಲ್ಲಿ ಬಹುಜನರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂಬುದು ಮೂಲ ವಾಸ್ತವ. ಅಧಿಕಾರದಲ್ಲಿರುವವರು ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ, ಅದಕ್ಕಾಗಿಯೇ ಅವರು ನಮ್ಮ ಸಮುದಾಯದ ಸಂತೋಷದ ಮೇಲೆ ನಿರ್ಭಯವಾಗಿ ದಾಳಿ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆಗಳ ಬಗ್ಗೆ ಆಜಾದ್ ಎಚ್ಚರಿಸಿದ್ದಾರೆ. 24 ಗಂಟೆಗಳ ಒಳಗೆ ಎಲ್ಲ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಅವರು ಒತ್ತಾಯಿಸಿದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಕರಣವನ್ನು ನ್ಯಾಯಾಲಯದಲ್ಲಿ ತ್ವರಿತಗೊಳಿಸಬೇಕೆಂದು ಅವರು ಒತ್ತಾಯಿಸಿದರು.

ರಾಷ್ಟ್ರೀಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಆಯೋಗಗಳಲ್ಲಿ ಪ್ರಮುಖ ಹುದ್ದೆಗಳು ಖಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mera kehena hai dalith log jago aise kuttounko sabak sikhavo our bolte hain mere hindu bhaee hum sab hindu hai hum sab ek hain kahan hai o log nara bolne vale kis kone me chupe hain unko bahar nikhalo batavo a sab natak. Jai bheem Jai Tippu

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...