Homeದಲಿತ್ ಫೈಲ್ಸ್ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ

ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆ ಕಸ್ಟಡಿಯಲ್ಲಿ ದಲಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮೇಲೆ ಕಬ್ಬಿಣದ ರಾಡ್ ಮತ್ತು ಚಾಕುಗಳಿಂದ ಹಲ್ಲೆ ನಡೆಸಿರುವ ಆಳವಾದ ಗಾಯದ ಗುರುತುಗಳು ಇವೆ ಎಂದು ಕುಟುಂಬದ ಸದಸ್ಯರು ಆರೋಪಿಸಿದೆ.

ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, 36 ವರ್ಷದ ಸಂಜಯ್ ಕುಮಾರ್ ಸೋಂಕರ್ ಅವರನ್ನು ಆಸ್ಪತ್ರೆಗೆ ಕರೆತರುವ ಮುನ್ನವೇ ಸತ್ತಿದ್ದಾರೆ; ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಹೇಳಿದರು. ಆದರೆ, ಸಂಭವನೀಯ ಆಂತರಿಕ ಹಾನಿಗಳ ಬಗ್ಗೆ ಸುಳಿವು ನೀಡಿದರು.

ರೈಲ್ವೆ ಇಲಾಖೆಯ ಆರ್‌ಪಿಎಫ್‌ನ ಮೂವರು ಸಿಬ್ಬಂದಿಯ ಮೇಲೆ ಕೊಲೆ ಆರೋಪ ಹೊರಿಸಿ ಅಮಾನತುಗೊಳಿಸಲಾಗಿದೆ.

ಅಕ್ಟೋಬರ್‌ನಿಂದ ಉತ್ತರ ಪ್ರದೇಶದಲ್ಲಿ ದಲಿತನೊಬ್ಬನನ್ನು ಚಿತ್ರಹಿಂಸೆ ನೀಡಿ ಕೊಂದ ಮೂರನೇ ಪ್ರಕರಣ ಇದಾಗಿದೆ. ಅಮೇಥಿಯಲ್ಲಿ ₹2,500 ಪಾವತಿಸದ ವೇತನಕ್ಕಾಗಿ ಬೇಡಿಕೆ ಇಟ್ಟಿದ್ದಕ್ಕಾಗಿ ಶ್ರೀಮಂತ ಭೂಮಾಲೀಕ ಮತ್ತು ಅವರ ಸಹಚರರು ಭಾನುವಾರ ಒಬ್ಬ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ಟೋಬರ್ 1 ರಂದು, ಒಬ್ಬ ದಲಿತನನ್ನು ‘ಡ್ರೋನ್ ಕಳ್ಳ’ ಎಂದು ಹಣೆಪಟ್ಟಿ ಕಟ್ಟಿ ರಾಯ್ ಬರೇಲಿಯಲ್ಲಿ ಗುಂಪು ಹಲ್ಲೆ ನಡೆಸಲಾಯಿತು.

ಮಂಗಳವಾರ, ಕಿಂಕಿ ಗ್ರಾಮದಲ್ಲಿರುವ ಕೃಷಿ ಕಾರ್ಮಿಕ ಸಂಜಯ್ ಅವರನ್ನು ಮೂವರು ಆರ್‌ಪಿಎಫ್ ಸಿಬ್ಬಂದಿಗಳು ಗೂಡ್ಸ್ ರೈಲಿನಿಂದ ಪೆಟ್ರೋಲ್ ಕಳ್ಳತನದ ಬಗ್ಗೆ ಪ್ರಶ್ನಿಸಲು ಅವರ ಮನೆಯಿಂದ ಕರೆದೊಯ್ದಿದ್ದರು ಎಂದು ಅವರ ಕಿರಿಯ ಸಹೋದರ ರಾಜು ವರದಿಗಾರರಿಗೆ ತಿಳಿಸಿದರು.

“ಕೆಲವು ಗಂಟೆಗಳ ನಂತರ ಪೊಲೀಸರು ಸಂಜಯ್ ಅವರನ್ನು ಬಿಟ್ಟು ಕಳಿಸಿದ್ದಾರೆ. ಸ್ವಲ್ಪ ಸಮಯದ ನಂತರ ಅವರು ಹಿಂತಿರುಗಿ ಪಕ್ಕದ ಬರುವಾ ಗ್ರಾಮದಲ್ಲಿರುವ ಅಂಗಡಿಯವನ ಬಳಿಗೆ ಕರೆದೊಯ್ದರು” ಎಂದು ರಾಜು ಹೇಳಿದರು.

“ನಂತರ ಅವರು ಸಂಜಯ್ ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು, ನಂತರ ಬುಧವಾರ ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದರು. ಸಂಜೆ ಯಾರೋ ಒಬ್ಬರು ಅವರನ್ನು ಆಸ್ಪತ್ರೆಗೆ ತರಲಾಗಿದೆ ಎಂದು ನಮಗೆ ತಿಳಿಸಿದರು. ಅಲ್ಲಿಂದ ನಾವು ಅವರ ದೇಹವನ್ನು ಪಡೆದುಕೊಂಡೆವು’ ಎಂದು ಹೇಳಿದರು.

“ಆರ್‌ಪಿಎಫ್ ಸಿಬ್ಬಂದಿ ಅವರನ್ನು 20 ಗಂಟೆಗಳಿಗೂ ಹೆಚ್ಚು ಕಾಲ ವಶದಲ್ಲಿ ಇಟ್ಟುಕೊಂಡಿದ್ದರು. ಕಬ್ಬಿಣದ ರಾಡ್‌ ಮತ್ತು ಚಾಕುಗಳಿಂದ ಹೊಡೆದಂತೆ ಅವರ ದೇಹದ ಮೇಲೆ ಹಲವಾರು ಆಳವಾದ ಗಾಯದ ಗುರುತುಗಳನ್ನು ನಾವು ನೋಡಿದ್ದೇವೆ” ಎಂದು ಅವರು ಹೇಳಿದರು.

ಸ್ಥಳೀಯ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ವಿವೇಕ್ ತ್ರಿವೇದಿ ಮಾತನಾಡಿ, ಆರ್‌ಪಿಎಫ್ ಸಬ್-ಇನ್‌ಸ್ಪೆಕ್ಟರ್ ಸುರೇಂದ್ರ ಕುಮಾರ್, ಕಾನ್‌ಸ್ಟೆಬಲ್‌ಗಳಾದ ಕರಣ್ ಸಿಂಗ್ ಯಾದವ್ ಮತ್ತು ಅಮಿತ್ ಕುಮಾರ್ ಯಾದವ್ ಮತ್ತು ಓರ್ವ ಅಪರಿಚಿತ ವ್ಯಕ್ತಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

“ಸೆಪ್ಟೆಂಬರ್ 28 ರಂದು ಬರುವಾಚಕ್ ರೈಲು ನಿಲ್ದಾಣದ ಬಳಿ ಸರಕು ರೈಲಿನಿಂದ ತೈಲ ಕಳ್ಳತನ ನಡೆದ ಬಗ್ಗೆ ಆರ್‌ಪಿಎಫ್ ತನಿಖೆ ನಡೆಸುತ್ತಿತ್ತು. ಸಂಜಯ್ ಅವರನ್ನು ಅನುಮಾನದ ಮೇಲೆ ಬಂಧಿಸಲಾಯಿತು” ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಮೋತಿಗಂಜ್‌ನಲ್ಲಿರುವ ಸ್ಥಳೀಯ ಆರ್‌ಪಿಎಫ್ ಪೋಸ್ಟ್‌ನ ಉಸ್ತುವಾರಿ ಅಧಿಕಾರಿ ಅನಿರುದ್ಧ್ ರೈ ಮಾತನಾಡಿ, “ಮೂವರು ಆರೋಪಿ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ, ಇಲಾಖಾ ತನಿಖೆಗೆ ಆದೇಶಿಸಲಾಗಿದೆ” ಎಂದು ಹೇಳಿದರು.

“ಅಪರಾಧದಲ್ಲಿ ಭಾಗಿಯಾಗಿರುವವರು ಯಾರು ಎಂದು ಆರ್‌ಪಿಎಫ್ ಸಂಜಯ್‌ನಿಂದ ತಿಳಿದುಕೊಳ್ಳಲು ಬಯಸಿತು. ಆರ್‌ಪಿಎಫ್ ಒಬ್ಬ ರಾಂಫರ್ ಕುಮಾರ್‌ಗಾಗಿಯೂ ಹುಡುಕಾಟ ನಡೆಸುತ್ತಿತ್ತು” ಎಂದು ರೈ ಹೇಳಿದರು.

“ರಾಂಫರ್ ಕಿಂಕಿಯಿಂದ ಸ್ವಲ್ಪ ದೂರದಲ್ಲಿರುವ ಮಂಕಾಪುರದಲ್ಲಿರುವ ತನ್ನ ಅತ್ತೆಯಂದಿರ ಮನೆಗೆ ಹೋಗಿದ್ದಾನೆ ಎಂದು ಸಂಜಯ್ ಅವರಿಗೆ ಹೇಳಿದರು. ತಂಡವು ಅವರನ್ನು ಮಂಕಾಪುರಕ್ಕೆ ಕರೆದೊಯ್ದಿತು. ಆದರೆ ರಾಂಫರ್ ಈಗಾಗಲೇ ಓಡಿಹೋಗಿದ್ದ. ವಿಚಾರಣೆಯ ಸಮಯದಲ್ಲಿ ಸಂಜಯ್ ಅವರ ಸ್ಥಿತಿ ಹದಗೆಟ್ಟಿತು, ಅವರನ್ನು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು” ಎಂದು ವಿವರಿಸಿದರು. ರೈ ಚಿತ್ರಹಿಂಸೆಯನ್ನು ದೃಢಪಡಿಸಲಿಲ್ಲ ಅಥವಾ ನಿರಾಕರಿಸಲಿಲ್ಲ.

ಹಿಮಾಚಲ ಪ್ರದೇಶ| ಮತ್ತೊಂದು ದಲಿತ ಮಗುವಿನ ಮೇಲೆ ದೈಹಿಕ ಶಿಕ್ಷಕರಿಂದ ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...