Homeದಲಿತ್ ಫೈಲ್ಸ್ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ

ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆ ಕಸ್ಟಡಿಯಲ್ಲಿ ದಲಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮೇಲೆ ಕಬ್ಬಿಣದ ರಾಡ್ ಮತ್ತು ಚಾಕುಗಳಿಂದ ಹಲ್ಲೆ ನಡೆಸಿರುವ ಆಳವಾದ ಗಾಯದ ಗುರುತುಗಳು ಇವೆ ಎಂದು ಕುಟುಂಬದ ಸದಸ್ಯರು ಆರೋಪಿಸಿದೆ.

ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, 36 ವರ್ಷದ ಸಂಜಯ್ ಕುಮಾರ್ ಸೋಂಕರ್ ಅವರನ್ನು ಆಸ್ಪತ್ರೆಗೆ ಕರೆತರುವ ಮುನ್ನವೇ ಸತ್ತಿದ್ದಾರೆ; ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಹೇಳಿದರು. ಆದರೆ, ಸಂಭವನೀಯ ಆಂತರಿಕ ಹಾನಿಗಳ ಬಗ್ಗೆ ಸುಳಿವು ನೀಡಿದರು.

ರೈಲ್ವೆ ಇಲಾಖೆಯ ಆರ್‌ಪಿಎಫ್‌ನ ಮೂವರು ಸಿಬ್ಬಂದಿಯ ಮೇಲೆ ಕೊಲೆ ಆರೋಪ ಹೊರಿಸಿ ಅಮಾನತುಗೊಳಿಸಲಾಗಿದೆ.

ಅಕ್ಟೋಬರ್‌ನಿಂದ ಉತ್ತರ ಪ್ರದೇಶದಲ್ಲಿ ದಲಿತನೊಬ್ಬನನ್ನು ಚಿತ್ರಹಿಂಸೆ ನೀಡಿ ಕೊಂದ ಮೂರನೇ ಪ್ರಕರಣ ಇದಾಗಿದೆ. ಅಮೇಥಿಯಲ್ಲಿ ₹2,500 ಪಾವತಿಸದ ವೇತನಕ್ಕಾಗಿ ಬೇಡಿಕೆ ಇಟ್ಟಿದ್ದಕ್ಕಾಗಿ ಶ್ರೀಮಂತ ಭೂಮಾಲೀಕ ಮತ್ತು ಅವರ ಸಹಚರರು ಭಾನುವಾರ ಒಬ್ಬ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ಟೋಬರ್ 1 ರಂದು, ಒಬ್ಬ ದಲಿತನನ್ನು ‘ಡ್ರೋನ್ ಕಳ್ಳ’ ಎಂದು ಹಣೆಪಟ್ಟಿ ಕಟ್ಟಿ ರಾಯ್ ಬರೇಲಿಯಲ್ಲಿ ಗುಂಪು ಹಲ್ಲೆ ನಡೆಸಲಾಯಿತು.

ಮಂಗಳವಾರ, ಕಿಂಕಿ ಗ್ರಾಮದಲ್ಲಿರುವ ಕೃಷಿ ಕಾರ್ಮಿಕ ಸಂಜಯ್ ಅವರನ್ನು ಮೂವರು ಆರ್‌ಪಿಎಫ್ ಸಿಬ್ಬಂದಿಗಳು ಗೂಡ್ಸ್ ರೈಲಿನಿಂದ ಪೆಟ್ರೋಲ್ ಕಳ್ಳತನದ ಬಗ್ಗೆ ಪ್ರಶ್ನಿಸಲು ಅವರ ಮನೆಯಿಂದ ಕರೆದೊಯ್ದಿದ್ದರು ಎಂದು ಅವರ ಕಿರಿಯ ಸಹೋದರ ರಾಜು ವರದಿಗಾರರಿಗೆ ತಿಳಿಸಿದರು.

“ಕೆಲವು ಗಂಟೆಗಳ ನಂತರ ಪೊಲೀಸರು ಸಂಜಯ್ ಅವರನ್ನು ಬಿಟ್ಟು ಕಳಿಸಿದ್ದಾರೆ. ಸ್ವಲ್ಪ ಸಮಯದ ನಂತರ ಅವರು ಹಿಂತಿರುಗಿ ಪಕ್ಕದ ಬರುವಾ ಗ್ರಾಮದಲ್ಲಿರುವ ಅಂಗಡಿಯವನ ಬಳಿಗೆ ಕರೆದೊಯ್ದರು” ಎಂದು ರಾಜು ಹೇಳಿದರು.

“ನಂತರ ಅವರು ಸಂಜಯ್ ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು, ನಂತರ ಬುಧವಾರ ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದರು. ಸಂಜೆ ಯಾರೋ ಒಬ್ಬರು ಅವರನ್ನು ಆಸ್ಪತ್ರೆಗೆ ತರಲಾಗಿದೆ ಎಂದು ನಮಗೆ ತಿಳಿಸಿದರು. ಅಲ್ಲಿಂದ ನಾವು ಅವರ ದೇಹವನ್ನು ಪಡೆದುಕೊಂಡೆವು’ ಎಂದು ಹೇಳಿದರು.

“ಆರ್‌ಪಿಎಫ್ ಸಿಬ್ಬಂದಿ ಅವರನ್ನು 20 ಗಂಟೆಗಳಿಗೂ ಹೆಚ್ಚು ಕಾಲ ವಶದಲ್ಲಿ ಇಟ್ಟುಕೊಂಡಿದ್ದರು. ಕಬ್ಬಿಣದ ರಾಡ್‌ ಮತ್ತು ಚಾಕುಗಳಿಂದ ಹೊಡೆದಂತೆ ಅವರ ದೇಹದ ಮೇಲೆ ಹಲವಾರು ಆಳವಾದ ಗಾಯದ ಗುರುತುಗಳನ್ನು ನಾವು ನೋಡಿದ್ದೇವೆ” ಎಂದು ಅವರು ಹೇಳಿದರು.

ಸ್ಥಳೀಯ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ವಿವೇಕ್ ತ್ರಿವೇದಿ ಮಾತನಾಡಿ, ಆರ್‌ಪಿಎಫ್ ಸಬ್-ಇನ್‌ಸ್ಪೆಕ್ಟರ್ ಸುರೇಂದ್ರ ಕುಮಾರ್, ಕಾನ್‌ಸ್ಟೆಬಲ್‌ಗಳಾದ ಕರಣ್ ಸಿಂಗ್ ಯಾದವ್ ಮತ್ತು ಅಮಿತ್ ಕುಮಾರ್ ಯಾದವ್ ಮತ್ತು ಓರ್ವ ಅಪರಿಚಿತ ವ್ಯಕ್ತಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

“ಸೆಪ್ಟೆಂಬರ್ 28 ರಂದು ಬರುವಾಚಕ್ ರೈಲು ನಿಲ್ದಾಣದ ಬಳಿ ಸರಕು ರೈಲಿನಿಂದ ತೈಲ ಕಳ್ಳತನ ನಡೆದ ಬಗ್ಗೆ ಆರ್‌ಪಿಎಫ್ ತನಿಖೆ ನಡೆಸುತ್ತಿತ್ತು. ಸಂಜಯ್ ಅವರನ್ನು ಅನುಮಾನದ ಮೇಲೆ ಬಂಧಿಸಲಾಯಿತು” ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಮೋತಿಗಂಜ್‌ನಲ್ಲಿರುವ ಸ್ಥಳೀಯ ಆರ್‌ಪಿಎಫ್ ಪೋಸ್ಟ್‌ನ ಉಸ್ತುವಾರಿ ಅಧಿಕಾರಿ ಅನಿರುದ್ಧ್ ರೈ ಮಾತನಾಡಿ, “ಮೂವರು ಆರೋಪಿ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ, ಇಲಾಖಾ ತನಿಖೆಗೆ ಆದೇಶಿಸಲಾಗಿದೆ” ಎಂದು ಹೇಳಿದರು.

“ಅಪರಾಧದಲ್ಲಿ ಭಾಗಿಯಾಗಿರುವವರು ಯಾರು ಎಂದು ಆರ್‌ಪಿಎಫ್ ಸಂಜಯ್‌ನಿಂದ ತಿಳಿದುಕೊಳ್ಳಲು ಬಯಸಿತು. ಆರ್‌ಪಿಎಫ್ ಒಬ್ಬ ರಾಂಫರ್ ಕುಮಾರ್‌ಗಾಗಿಯೂ ಹುಡುಕಾಟ ನಡೆಸುತ್ತಿತ್ತು” ಎಂದು ರೈ ಹೇಳಿದರು.

“ರಾಂಫರ್ ಕಿಂಕಿಯಿಂದ ಸ್ವಲ್ಪ ದೂರದಲ್ಲಿರುವ ಮಂಕಾಪುರದಲ್ಲಿರುವ ತನ್ನ ಅತ್ತೆಯಂದಿರ ಮನೆಗೆ ಹೋಗಿದ್ದಾನೆ ಎಂದು ಸಂಜಯ್ ಅವರಿಗೆ ಹೇಳಿದರು. ತಂಡವು ಅವರನ್ನು ಮಂಕಾಪುರಕ್ಕೆ ಕರೆದೊಯ್ದಿತು. ಆದರೆ ರಾಂಫರ್ ಈಗಾಗಲೇ ಓಡಿಹೋಗಿದ್ದ. ವಿಚಾರಣೆಯ ಸಮಯದಲ್ಲಿ ಸಂಜಯ್ ಅವರ ಸ್ಥಿತಿ ಹದಗೆಟ್ಟಿತು, ಅವರನ್ನು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು” ಎಂದು ವಿವರಿಸಿದರು. ರೈ ಚಿತ್ರಹಿಂಸೆಯನ್ನು ದೃಢಪಡಿಸಲಿಲ್ಲ ಅಥವಾ ನಿರಾಕರಿಸಲಿಲ್ಲ.

ಹಿಮಾಚಲ ಪ್ರದೇಶ| ಮತ್ತೊಂದು ದಲಿತ ಮಗುವಿನ ಮೇಲೆ ದೈಹಿಕ ಶಿಕ್ಷಕರಿಂದ ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...