Homeದಲಿತ್ ಫೈಲ್ಸ್ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ಉಧಾ ಗ್ರಾಮದಲ್ಲಿ ಶುಕ್ರವಾರ ದಲಿತ ವ್ಯಕ್ತಿಯೊಬ್ಬರು ದುರ್ಗಾ ಪೂಜೆಯ ಮಂಟಪದಲ್ಲಿ ವಿಗ್ರಹವನ್ನು ಮುಟ್ಟಿದ್ದಾನೆಂದು ಕೊಲೆಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯ ಕುಟುಂಬ ಸದಸ್ಯರ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಜಾತಿ ಕಾರಣಕ್ಕಾಗಿ ಕೊಲೆಯಾಗಿದೆ ಎಂಬುದನ್ನು ಪೊಲೀಸರು ತಳ್ಳಿಹಾಕಿದ್ದು, “ಇದು ಕೇವಲ ಸಾಮಾಜಿಕ ಮಾಧ್ಯಮದ ವದಂತಿ” ಎಂದು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪ್ರತಾಪ್‌ಗಢ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) ಅನ್ನೂ ಸೇರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೆಪ್ಟೆಂಬರ್ 30 ರಂದು ಸಂಭವಿಸಿದ ಈ ಘಟನೆಯನ್ನು ಹಿಂದಿ ನ್ಯೂಸ್ ಪೋರ್ಟಲ್ ‘ಬೋಲ್ಟಾ ಹಿಂದೂಸ್ತಾನ್’ ಅಕ್ಟೋಬರ್ 4ರಂದು ಮೊದಲು ಟ್ವೀಟ್ ಮಾಡಿದೆ. ನಂತರ ಅದನ್ನು ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಸೇರಿದಂತೆ ಹಲವರು ರೀಟ್ವೀಟ್ ಮಾಡಿದ್ದಾರೆ.

ಬೋಲ್ಟಾ ಹಿಂದೂಸ್ತಾನ್ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಮಹಿಳೆಯೊಬ್ಬರು ಮಾತನಾಡಿದ್ದು, “ಜಗ್ರೂಪ್ ಹರಿಜನ್‌ ಅವರು ದುರ್ಗಾ ಪೂಜೆಯನ್ನು ನೋಡಲು ಹತ್ತಿರದ ಮನೆಗೆ ಹೋಗಿ ಕೊಲೆಯಾಗಿದ್ದಾರೆ. ಮುನ್ನಾ ಮತ್ತು ಸಂದೀಪ್ ಎಂಬವರು ಇದರಲ್ಲಿ ಭಾಗಿಯಾಗಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಮತ್ತೊಂದು ವಿಡಿಯೊ ಕುರಿತು ‘ದಿ ವೈರ್‌’ ವರದಿ ಮಾಡಿದ್ದು ಜಗ್ರೂಪ್ ಅವರ ಅಳಿಯ ಎಂದು ಗುರುತಿಸಿಕೊಳ್ಳುವ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. “ಜಗ್ರೂಪ್ ವಿಗ್ರಹದ ಪಾದಗಳನ್ನು ಮುಟ್ಟಿದ ತಕ್ಷಣ ಅರ್ಧಜೀವ ಹೋಗುವಂತೆ ದಾಳಿ ನಡೆಯಿತು” ಎಂದಿದ್ದಾರೆ.

ಜಗ್ರೂಪ್ ಅವರನ್ನು ದಾಳಿಕೋರರು ಮನೆಗೆ ಕರೆತಂದರು. ನಂತರ ಜಗ್ರೂಪ್ ಅವರನ್ನು ಚಿಕಿತ್ಸೆಗಾಗಿ ಪ್ರತಾಪಗಢಕ್ಕೆ ಕರೆದೊಯ್ಯಲಾಯಿತು. ಆದರೆ ಅವರು ನಿಧನರಾಗಿದ್ದರು ಎಂದು ತಿಳಿಸಿದ್ದಾರೆ.

ಕುಟುಂಬಕ್ಕೆ ಯಾವುದೇ ನೆರವು ಸಿಕ್ಕಿಲ್ಲ ಮತ್ತು ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧ ಎಂದು ಹೇಳಿದ್ದಾರೆ.

ಈ ವೀಡಿಯೊವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಎಫ್‌ಐಆರ್‌ನ ಪ್ರತಿಯನ್ನು ಅಕ್ಟೋಬರ್ 2 ರಂದು ದಾಖಲಿಸಲಾಗಿದೆ.

ಪೊಲೀಸರು ಹೇಳುವುದೇನು?

ಅಕ್ಟೋಬರ್ 4 ರಂದು, ಪ್ರತಾಪ್‌ಗಢ ಪೊಲೀಸರು ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ. ಪೂರ್ವ ಪ್ರತಾಪ್‌ಗಢದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾಸಾಗರ್ ಮಿಶ್ರಾ ಅವರು ಘಟನೆಯನ್ನು ವಿವರಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ‘ರಾಮ್ ಜೀವನ್’ ಎಂದು ಅವರು ಗುರುತಿಸಿದ್ದಾರೆ.

ಪಂಕಜ್ ದುಬೆ ಮತ್ತು ರಾಮ್ ಸರೋಬರ್ ಮಿಶ್ರಾ ಅವರ ಮನೆಗೆ ಇವರು ವಿಗ್ರಹವನ್ನು ನೋಡಲು ಹೋಗಿದ್ದರು. “ಅಲ್ಲಿ ಕುಲದೀಪ್ ಮತ್ತು ಸಂದೀಪ್ ಎಂಬುವರು ಸೈಕಲ್‌ನಲ್ಲಿ ಬಿಟ್ಟು ಬರುವಂತೆ ದಲಿತ ವ್ಯಕ್ತಿಗೆ ಸೂಚಿಸಿದರು. ಆದರೆ ಅವರು ನಿರಾಕರಿಸಿದಾಗ ಕುಲದೀಪ್ ಮತ್ತು ಸಂದೀಪ್ ದಾಳಿ ಮಾಡಿದ್ದಾರೆ. ನಂತರ ಮನೆಗೆ ಕರೆತಂದಿದ್ದು, ವ್ಯಕ್ತಿಯು ಕೊನೆಯುಸಿರೆಳೆದರು” ಎಂದು ಎಎಸ್ಪಿ ಹೇಳಿದ್ದಾರೆ.

ಆರೋಪಿಗಳನ್ನು ಬಂಧಿಸಲು ತಂಡವನ್ನು ರಚಿಸಲಾಗಿದೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ವಿಗ್ರಹವನ್ನು ಸ್ಪರ್ಶಿಸುವುದರಿಂದ ಸಾವು ಸಂಭವಿಸಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿರಿ: ಚಿಕ್ಕಬಳ್ಳಾಪುರ: ತಮ್ಮ ಜಮೀನಿನಲ್ಲಿ ಆಟವಾಡಿದ ದಲಿತ ಬಾಲಕನನ್ನು ಕರೆಂಟ್ ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

“ದುರ್ಗಾ ಮೂರ್ತಿಯನ್ನು ಮುಟ್ಟಿದ ಕಾರಣಕ್ಕೆ ವ್ಯಕ್ತಿಯನ್ನು ಥಳಿಸಲಾಯಿತು ಮತ್ತು ನಂತರ ಸಾವನ್ನಪ್ಪಿದರು ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಇದು ಸಂಪೂರ್ಣ ಸುಳ್ಳು” ಎಂದು ಮಿಶ್ರಾ ವಿಡಿಯೋ ಮೂಲಕ ತಿಳಿಸಿದ್ದಾರೆ.

ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಎಎಸ್‌ಪಿ ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಆರೋಪಿಗಳಾದ ಸಂದೀಪ್ ಮಿಶ್ರಾ, ಕುಲದೀಪ್ ಮಿಶ್ರಾ ಮತ್ತು ಮುನ್ನಾ ಲಾಲ್ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...