Homeದಲಿತ್ ಫೈಲ್ಸ್ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ಉಧಾ ಗ್ರಾಮದಲ್ಲಿ ಶುಕ್ರವಾರ ದಲಿತ ವ್ಯಕ್ತಿಯೊಬ್ಬರು ದುರ್ಗಾ ಪೂಜೆಯ ಮಂಟಪದಲ್ಲಿ ವಿಗ್ರಹವನ್ನು ಮುಟ್ಟಿದ್ದಾನೆಂದು ಕೊಲೆಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯ ಕುಟುಂಬ ಸದಸ್ಯರ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಜಾತಿ ಕಾರಣಕ್ಕಾಗಿ ಕೊಲೆಯಾಗಿದೆ ಎಂಬುದನ್ನು ಪೊಲೀಸರು ತಳ್ಳಿಹಾಕಿದ್ದು, “ಇದು ಕೇವಲ ಸಾಮಾಜಿಕ ಮಾಧ್ಯಮದ ವದಂತಿ” ಎಂದು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪ್ರತಾಪ್‌ಗಢ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) ಅನ್ನೂ ಸೇರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೆಪ್ಟೆಂಬರ್ 30 ರಂದು ಸಂಭವಿಸಿದ ಈ ಘಟನೆಯನ್ನು ಹಿಂದಿ ನ್ಯೂಸ್ ಪೋರ್ಟಲ್ ‘ಬೋಲ್ಟಾ ಹಿಂದೂಸ್ತಾನ್’ ಅಕ್ಟೋಬರ್ 4ರಂದು ಮೊದಲು ಟ್ವೀಟ್ ಮಾಡಿದೆ. ನಂತರ ಅದನ್ನು ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಸೇರಿದಂತೆ ಹಲವರು ರೀಟ್ವೀಟ್ ಮಾಡಿದ್ದಾರೆ.

ಬೋಲ್ಟಾ ಹಿಂದೂಸ್ತಾನ್ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಮಹಿಳೆಯೊಬ್ಬರು ಮಾತನಾಡಿದ್ದು, “ಜಗ್ರೂಪ್ ಹರಿಜನ್‌ ಅವರು ದುರ್ಗಾ ಪೂಜೆಯನ್ನು ನೋಡಲು ಹತ್ತಿರದ ಮನೆಗೆ ಹೋಗಿ ಕೊಲೆಯಾಗಿದ್ದಾರೆ. ಮುನ್ನಾ ಮತ್ತು ಸಂದೀಪ್ ಎಂಬವರು ಇದರಲ್ಲಿ ಭಾಗಿಯಾಗಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಮತ್ತೊಂದು ವಿಡಿಯೊ ಕುರಿತು ‘ದಿ ವೈರ್‌’ ವರದಿ ಮಾಡಿದ್ದು ಜಗ್ರೂಪ್ ಅವರ ಅಳಿಯ ಎಂದು ಗುರುತಿಸಿಕೊಳ್ಳುವ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. “ಜಗ್ರೂಪ್ ವಿಗ್ರಹದ ಪಾದಗಳನ್ನು ಮುಟ್ಟಿದ ತಕ್ಷಣ ಅರ್ಧಜೀವ ಹೋಗುವಂತೆ ದಾಳಿ ನಡೆಯಿತು” ಎಂದಿದ್ದಾರೆ.

ಜಗ್ರೂಪ್ ಅವರನ್ನು ದಾಳಿಕೋರರು ಮನೆಗೆ ಕರೆತಂದರು. ನಂತರ ಜಗ್ರೂಪ್ ಅವರನ್ನು ಚಿಕಿತ್ಸೆಗಾಗಿ ಪ್ರತಾಪಗಢಕ್ಕೆ ಕರೆದೊಯ್ಯಲಾಯಿತು. ಆದರೆ ಅವರು ನಿಧನರಾಗಿದ್ದರು ಎಂದು ತಿಳಿಸಿದ್ದಾರೆ.

ಕುಟುಂಬಕ್ಕೆ ಯಾವುದೇ ನೆರವು ಸಿಕ್ಕಿಲ್ಲ ಮತ್ತು ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧ ಎಂದು ಹೇಳಿದ್ದಾರೆ.

ಈ ವೀಡಿಯೊವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಎಫ್‌ಐಆರ್‌ನ ಪ್ರತಿಯನ್ನು ಅಕ್ಟೋಬರ್ 2 ರಂದು ದಾಖಲಿಸಲಾಗಿದೆ.

ಪೊಲೀಸರು ಹೇಳುವುದೇನು?

ಅಕ್ಟೋಬರ್ 4 ರಂದು, ಪ್ರತಾಪ್‌ಗಢ ಪೊಲೀಸರು ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ. ಪೂರ್ವ ಪ್ರತಾಪ್‌ಗಢದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾಸಾಗರ್ ಮಿಶ್ರಾ ಅವರು ಘಟನೆಯನ್ನು ವಿವರಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ‘ರಾಮ್ ಜೀವನ್’ ಎಂದು ಅವರು ಗುರುತಿಸಿದ್ದಾರೆ.

ಪಂಕಜ್ ದುಬೆ ಮತ್ತು ರಾಮ್ ಸರೋಬರ್ ಮಿಶ್ರಾ ಅವರ ಮನೆಗೆ ಇವರು ವಿಗ್ರಹವನ್ನು ನೋಡಲು ಹೋಗಿದ್ದರು. “ಅಲ್ಲಿ ಕುಲದೀಪ್ ಮತ್ತು ಸಂದೀಪ್ ಎಂಬುವರು ಸೈಕಲ್‌ನಲ್ಲಿ ಬಿಟ್ಟು ಬರುವಂತೆ ದಲಿತ ವ್ಯಕ್ತಿಗೆ ಸೂಚಿಸಿದರು. ಆದರೆ ಅವರು ನಿರಾಕರಿಸಿದಾಗ ಕುಲದೀಪ್ ಮತ್ತು ಸಂದೀಪ್ ದಾಳಿ ಮಾಡಿದ್ದಾರೆ. ನಂತರ ಮನೆಗೆ ಕರೆತಂದಿದ್ದು, ವ್ಯಕ್ತಿಯು ಕೊನೆಯುಸಿರೆಳೆದರು” ಎಂದು ಎಎಸ್ಪಿ ಹೇಳಿದ್ದಾರೆ.

ಆರೋಪಿಗಳನ್ನು ಬಂಧಿಸಲು ತಂಡವನ್ನು ರಚಿಸಲಾಗಿದೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ವಿಗ್ರಹವನ್ನು ಸ್ಪರ್ಶಿಸುವುದರಿಂದ ಸಾವು ಸಂಭವಿಸಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿರಿ: ಚಿಕ್ಕಬಳ್ಳಾಪುರ: ತಮ್ಮ ಜಮೀನಿನಲ್ಲಿ ಆಟವಾಡಿದ ದಲಿತ ಬಾಲಕನನ್ನು ಕರೆಂಟ್ ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

“ದುರ್ಗಾ ಮೂರ್ತಿಯನ್ನು ಮುಟ್ಟಿದ ಕಾರಣಕ್ಕೆ ವ್ಯಕ್ತಿಯನ್ನು ಥಳಿಸಲಾಯಿತು ಮತ್ತು ನಂತರ ಸಾವನ್ನಪ್ಪಿದರು ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಇದು ಸಂಪೂರ್ಣ ಸುಳ್ಳು” ಎಂದು ಮಿಶ್ರಾ ವಿಡಿಯೋ ಮೂಲಕ ತಿಳಿಸಿದ್ದಾರೆ.

ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಎಎಸ್‌ಪಿ ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಆರೋಪಿಗಳಾದ ಸಂದೀಪ್ ಮಿಶ್ರಾ, ಕುಲದೀಪ್ ಮಿಶ್ರಾ ಮತ್ತು ಮುನ್ನಾ ಲಾಲ್ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...