Homeದಲಿತ್ ಫೈಲ್ಸ್ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ಉಧಾ ಗ್ರಾಮದಲ್ಲಿ ಶುಕ್ರವಾರ ದಲಿತ ವ್ಯಕ್ತಿಯೊಬ್ಬರು ದುರ್ಗಾ ಪೂಜೆಯ ಮಂಟಪದಲ್ಲಿ ವಿಗ್ರಹವನ್ನು ಮುಟ್ಟಿದ್ದಾನೆಂದು ಕೊಲೆಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯ ಕುಟುಂಬ ಸದಸ್ಯರ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಜಾತಿ ಕಾರಣಕ್ಕಾಗಿ ಕೊಲೆಯಾಗಿದೆ ಎಂಬುದನ್ನು ಪೊಲೀಸರು ತಳ್ಳಿಹಾಕಿದ್ದು, “ಇದು ಕೇವಲ ಸಾಮಾಜಿಕ ಮಾಧ್ಯಮದ ವದಂತಿ” ಎಂದು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪ್ರತಾಪ್‌ಗಢ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) ಅನ್ನೂ ಸೇರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೆಪ್ಟೆಂಬರ್ 30 ರಂದು ಸಂಭವಿಸಿದ ಈ ಘಟನೆಯನ್ನು ಹಿಂದಿ ನ್ಯೂಸ್ ಪೋರ್ಟಲ್ ‘ಬೋಲ್ಟಾ ಹಿಂದೂಸ್ತಾನ್’ ಅಕ್ಟೋಬರ್ 4ರಂದು ಮೊದಲು ಟ್ವೀಟ್ ಮಾಡಿದೆ. ನಂತರ ಅದನ್ನು ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಸೇರಿದಂತೆ ಹಲವರು ರೀಟ್ವೀಟ್ ಮಾಡಿದ್ದಾರೆ.

ಬೋಲ್ಟಾ ಹಿಂದೂಸ್ತಾನ್ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಮಹಿಳೆಯೊಬ್ಬರು ಮಾತನಾಡಿದ್ದು, “ಜಗ್ರೂಪ್ ಹರಿಜನ್‌ ಅವರು ದುರ್ಗಾ ಪೂಜೆಯನ್ನು ನೋಡಲು ಹತ್ತಿರದ ಮನೆಗೆ ಹೋಗಿ ಕೊಲೆಯಾಗಿದ್ದಾರೆ. ಮುನ್ನಾ ಮತ್ತು ಸಂದೀಪ್ ಎಂಬವರು ಇದರಲ್ಲಿ ಭಾಗಿಯಾಗಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಮತ್ತೊಂದು ವಿಡಿಯೊ ಕುರಿತು ‘ದಿ ವೈರ್‌’ ವರದಿ ಮಾಡಿದ್ದು ಜಗ್ರೂಪ್ ಅವರ ಅಳಿಯ ಎಂದು ಗುರುತಿಸಿಕೊಳ್ಳುವ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. “ಜಗ್ರೂಪ್ ವಿಗ್ರಹದ ಪಾದಗಳನ್ನು ಮುಟ್ಟಿದ ತಕ್ಷಣ ಅರ್ಧಜೀವ ಹೋಗುವಂತೆ ದಾಳಿ ನಡೆಯಿತು” ಎಂದಿದ್ದಾರೆ.

ಜಗ್ರೂಪ್ ಅವರನ್ನು ದಾಳಿಕೋರರು ಮನೆಗೆ ಕರೆತಂದರು. ನಂತರ ಜಗ್ರೂಪ್ ಅವರನ್ನು ಚಿಕಿತ್ಸೆಗಾಗಿ ಪ್ರತಾಪಗಢಕ್ಕೆ ಕರೆದೊಯ್ಯಲಾಯಿತು. ಆದರೆ ಅವರು ನಿಧನರಾಗಿದ್ದರು ಎಂದು ತಿಳಿಸಿದ್ದಾರೆ.

ಕುಟುಂಬಕ್ಕೆ ಯಾವುದೇ ನೆರವು ಸಿಕ್ಕಿಲ್ಲ ಮತ್ತು ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧ ಎಂದು ಹೇಳಿದ್ದಾರೆ.

ಈ ವೀಡಿಯೊವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಎಫ್‌ಐಆರ್‌ನ ಪ್ರತಿಯನ್ನು ಅಕ್ಟೋಬರ್ 2 ರಂದು ದಾಖಲಿಸಲಾಗಿದೆ.

ಪೊಲೀಸರು ಹೇಳುವುದೇನು?

ಅಕ್ಟೋಬರ್ 4 ರಂದು, ಪ್ರತಾಪ್‌ಗಢ ಪೊಲೀಸರು ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ. ಪೂರ್ವ ಪ್ರತಾಪ್‌ಗಢದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾಸಾಗರ್ ಮಿಶ್ರಾ ಅವರು ಘಟನೆಯನ್ನು ವಿವರಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ‘ರಾಮ್ ಜೀವನ್’ ಎಂದು ಅವರು ಗುರುತಿಸಿದ್ದಾರೆ.

ಪಂಕಜ್ ದುಬೆ ಮತ್ತು ರಾಮ್ ಸರೋಬರ್ ಮಿಶ್ರಾ ಅವರ ಮನೆಗೆ ಇವರು ವಿಗ್ರಹವನ್ನು ನೋಡಲು ಹೋಗಿದ್ದರು. “ಅಲ್ಲಿ ಕುಲದೀಪ್ ಮತ್ತು ಸಂದೀಪ್ ಎಂಬುವರು ಸೈಕಲ್‌ನಲ್ಲಿ ಬಿಟ್ಟು ಬರುವಂತೆ ದಲಿತ ವ್ಯಕ್ತಿಗೆ ಸೂಚಿಸಿದರು. ಆದರೆ ಅವರು ನಿರಾಕರಿಸಿದಾಗ ಕುಲದೀಪ್ ಮತ್ತು ಸಂದೀಪ್ ದಾಳಿ ಮಾಡಿದ್ದಾರೆ. ನಂತರ ಮನೆಗೆ ಕರೆತಂದಿದ್ದು, ವ್ಯಕ್ತಿಯು ಕೊನೆಯುಸಿರೆಳೆದರು” ಎಂದು ಎಎಸ್ಪಿ ಹೇಳಿದ್ದಾರೆ.

ಆರೋಪಿಗಳನ್ನು ಬಂಧಿಸಲು ತಂಡವನ್ನು ರಚಿಸಲಾಗಿದೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ವಿಗ್ರಹವನ್ನು ಸ್ಪರ್ಶಿಸುವುದರಿಂದ ಸಾವು ಸಂಭವಿಸಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿರಿ: ಚಿಕ್ಕಬಳ್ಳಾಪುರ: ತಮ್ಮ ಜಮೀನಿನಲ್ಲಿ ಆಟವಾಡಿದ ದಲಿತ ಬಾಲಕನನ್ನು ಕರೆಂಟ್ ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

“ದುರ್ಗಾ ಮೂರ್ತಿಯನ್ನು ಮುಟ್ಟಿದ ಕಾರಣಕ್ಕೆ ವ್ಯಕ್ತಿಯನ್ನು ಥಳಿಸಲಾಯಿತು ಮತ್ತು ನಂತರ ಸಾವನ್ನಪ್ಪಿದರು ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಇದು ಸಂಪೂರ್ಣ ಸುಳ್ಳು” ಎಂದು ಮಿಶ್ರಾ ವಿಡಿಯೋ ಮೂಲಕ ತಿಳಿಸಿದ್ದಾರೆ.

ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಎಎಸ್‌ಪಿ ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಆರೋಪಿಗಳಾದ ಸಂದೀಪ್ ಮಿಶ್ರಾ, ಕುಲದೀಪ್ ಮಿಶ್ರಾ ಮತ್ತು ಮುನ್ನಾ ಲಾಲ್ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...