Homeದಲಿತ್ ಫೈಲ್ಸ್ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ಉಧಾ ಗ್ರಾಮದಲ್ಲಿ ಶುಕ್ರವಾರ ದಲಿತ ವ್ಯಕ್ತಿಯೊಬ್ಬರು ದುರ್ಗಾ ಪೂಜೆಯ ಮಂಟಪದಲ್ಲಿ ವಿಗ್ರಹವನ್ನು ಮುಟ್ಟಿದ್ದಾನೆಂದು ಕೊಲೆಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯ ಕುಟುಂಬ ಸದಸ್ಯರ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಜಾತಿ ಕಾರಣಕ್ಕಾಗಿ ಕೊಲೆಯಾಗಿದೆ ಎಂಬುದನ್ನು ಪೊಲೀಸರು ತಳ್ಳಿಹಾಕಿದ್ದು, “ಇದು ಕೇವಲ ಸಾಮಾಜಿಕ ಮಾಧ್ಯಮದ ವದಂತಿ” ಎಂದು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪ್ರತಾಪ್‌ಗಢ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) ಅನ್ನೂ ಸೇರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೆಪ್ಟೆಂಬರ್ 30 ರಂದು ಸಂಭವಿಸಿದ ಈ ಘಟನೆಯನ್ನು ಹಿಂದಿ ನ್ಯೂಸ್ ಪೋರ್ಟಲ್ ‘ಬೋಲ್ಟಾ ಹಿಂದೂಸ್ತಾನ್’ ಅಕ್ಟೋಬರ್ 4ರಂದು ಮೊದಲು ಟ್ವೀಟ್ ಮಾಡಿದೆ. ನಂತರ ಅದನ್ನು ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಸೇರಿದಂತೆ ಹಲವರು ರೀಟ್ವೀಟ್ ಮಾಡಿದ್ದಾರೆ.

ಬೋಲ್ಟಾ ಹಿಂದೂಸ್ತಾನ್ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಮಹಿಳೆಯೊಬ್ಬರು ಮಾತನಾಡಿದ್ದು, “ಜಗ್ರೂಪ್ ಹರಿಜನ್‌ ಅವರು ದುರ್ಗಾ ಪೂಜೆಯನ್ನು ನೋಡಲು ಹತ್ತಿರದ ಮನೆಗೆ ಹೋಗಿ ಕೊಲೆಯಾಗಿದ್ದಾರೆ. ಮುನ್ನಾ ಮತ್ತು ಸಂದೀಪ್ ಎಂಬವರು ಇದರಲ್ಲಿ ಭಾಗಿಯಾಗಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಮತ್ತೊಂದು ವಿಡಿಯೊ ಕುರಿತು ‘ದಿ ವೈರ್‌’ ವರದಿ ಮಾಡಿದ್ದು ಜಗ್ರೂಪ್ ಅವರ ಅಳಿಯ ಎಂದು ಗುರುತಿಸಿಕೊಳ್ಳುವ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. “ಜಗ್ರೂಪ್ ವಿಗ್ರಹದ ಪಾದಗಳನ್ನು ಮುಟ್ಟಿದ ತಕ್ಷಣ ಅರ್ಧಜೀವ ಹೋಗುವಂತೆ ದಾಳಿ ನಡೆಯಿತು” ಎಂದಿದ್ದಾರೆ.

ಜಗ್ರೂಪ್ ಅವರನ್ನು ದಾಳಿಕೋರರು ಮನೆಗೆ ಕರೆತಂದರು. ನಂತರ ಜಗ್ರೂಪ್ ಅವರನ್ನು ಚಿಕಿತ್ಸೆಗಾಗಿ ಪ್ರತಾಪಗಢಕ್ಕೆ ಕರೆದೊಯ್ಯಲಾಯಿತು. ಆದರೆ ಅವರು ನಿಧನರಾಗಿದ್ದರು ಎಂದು ತಿಳಿಸಿದ್ದಾರೆ.

ಕುಟುಂಬಕ್ಕೆ ಯಾವುದೇ ನೆರವು ಸಿಕ್ಕಿಲ್ಲ ಮತ್ತು ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧ ಎಂದು ಹೇಳಿದ್ದಾರೆ.

ಈ ವೀಡಿಯೊವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಎಫ್‌ಐಆರ್‌ನ ಪ್ರತಿಯನ್ನು ಅಕ್ಟೋಬರ್ 2 ರಂದು ದಾಖಲಿಸಲಾಗಿದೆ.

ಪೊಲೀಸರು ಹೇಳುವುದೇನು?

ಅಕ್ಟೋಬರ್ 4 ರಂದು, ಪ್ರತಾಪ್‌ಗಢ ಪೊಲೀಸರು ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ. ಪೂರ್ವ ಪ್ರತಾಪ್‌ಗಢದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾಸಾಗರ್ ಮಿಶ್ರಾ ಅವರು ಘಟನೆಯನ್ನು ವಿವರಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ‘ರಾಮ್ ಜೀವನ್’ ಎಂದು ಅವರು ಗುರುತಿಸಿದ್ದಾರೆ.

ಪಂಕಜ್ ದುಬೆ ಮತ್ತು ರಾಮ್ ಸರೋಬರ್ ಮಿಶ್ರಾ ಅವರ ಮನೆಗೆ ಇವರು ವಿಗ್ರಹವನ್ನು ನೋಡಲು ಹೋಗಿದ್ದರು. “ಅಲ್ಲಿ ಕುಲದೀಪ್ ಮತ್ತು ಸಂದೀಪ್ ಎಂಬುವರು ಸೈಕಲ್‌ನಲ್ಲಿ ಬಿಟ್ಟು ಬರುವಂತೆ ದಲಿತ ವ್ಯಕ್ತಿಗೆ ಸೂಚಿಸಿದರು. ಆದರೆ ಅವರು ನಿರಾಕರಿಸಿದಾಗ ಕುಲದೀಪ್ ಮತ್ತು ಸಂದೀಪ್ ದಾಳಿ ಮಾಡಿದ್ದಾರೆ. ನಂತರ ಮನೆಗೆ ಕರೆತಂದಿದ್ದು, ವ್ಯಕ್ತಿಯು ಕೊನೆಯುಸಿರೆಳೆದರು” ಎಂದು ಎಎಸ್ಪಿ ಹೇಳಿದ್ದಾರೆ.

ಆರೋಪಿಗಳನ್ನು ಬಂಧಿಸಲು ತಂಡವನ್ನು ರಚಿಸಲಾಗಿದೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ವಿಗ್ರಹವನ್ನು ಸ್ಪರ್ಶಿಸುವುದರಿಂದ ಸಾವು ಸಂಭವಿಸಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿರಿ: ಚಿಕ್ಕಬಳ್ಳಾಪುರ: ತಮ್ಮ ಜಮೀನಿನಲ್ಲಿ ಆಟವಾಡಿದ ದಲಿತ ಬಾಲಕನನ್ನು ಕರೆಂಟ್ ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

“ದುರ್ಗಾ ಮೂರ್ತಿಯನ್ನು ಮುಟ್ಟಿದ ಕಾರಣಕ್ಕೆ ವ್ಯಕ್ತಿಯನ್ನು ಥಳಿಸಲಾಯಿತು ಮತ್ತು ನಂತರ ಸಾವನ್ನಪ್ಪಿದರು ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಇದು ಸಂಪೂರ್ಣ ಸುಳ್ಳು” ಎಂದು ಮಿಶ್ರಾ ವಿಡಿಯೋ ಮೂಲಕ ತಿಳಿಸಿದ್ದಾರೆ.

ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಎಎಸ್‌ಪಿ ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಆರೋಪಿಗಳಾದ ಸಂದೀಪ್ ಮಿಶ್ರಾ, ಕುಲದೀಪ್ ಮಿಶ್ರಾ ಮತ್ತು ಮುನ್ನಾ ಲಾಲ್ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...