Homeದಲಿತ್ ಫೈಲ್ಸ್ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

ಉತ್ತರ ಪ್ರದೇಶ: ವಿಗ್ರಹ ಮುಟ್ಟಿದ್ದಾನೆಂದು ದಲಿತ ವ್ಯಕ್ತಿಯ ಕೊಲೆ; ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ಉಧಾ ಗ್ರಾಮದಲ್ಲಿ ಶುಕ್ರವಾರ ದಲಿತ ವ್ಯಕ್ತಿಯೊಬ್ಬರು ದುರ್ಗಾ ಪೂಜೆಯ ಮಂಟಪದಲ್ಲಿ ವಿಗ್ರಹವನ್ನು ಮುಟ್ಟಿದ್ದಾನೆಂದು ಕೊಲೆಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯ ಕುಟುಂಬ ಸದಸ್ಯರ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ಜಾತಿ ಕಾರಣಕ್ಕಾಗಿ ಕೊಲೆಯಾಗಿದೆ ಎಂಬುದನ್ನು ಪೊಲೀಸರು ತಳ್ಳಿಹಾಕಿದ್ದು, “ಇದು ಕೇವಲ ಸಾಮಾಜಿಕ ಮಾಧ್ಯಮದ ವದಂತಿ” ಎಂದು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪ್ರತಾಪ್‌ಗಢ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) ಅನ್ನೂ ಸೇರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೆಪ್ಟೆಂಬರ್ 30 ರಂದು ಸಂಭವಿಸಿದ ಈ ಘಟನೆಯನ್ನು ಹಿಂದಿ ನ್ಯೂಸ್ ಪೋರ್ಟಲ್ ‘ಬೋಲ್ಟಾ ಹಿಂದೂಸ್ತಾನ್’ ಅಕ್ಟೋಬರ್ 4ರಂದು ಮೊದಲು ಟ್ವೀಟ್ ಮಾಡಿದೆ. ನಂತರ ಅದನ್ನು ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಸೇರಿದಂತೆ ಹಲವರು ರೀಟ್ವೀಟ್ ಮಾಡಿದ್ದಾರೆ.

ಬೋಲ್ಟಾ ಹಿಂದೂಸ್ತಾನ್ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಮಹಿಳೆಯೊಬ್ಬರು ಮಾತನಾಡಿದ್ದು, “ಜಗ್ರೂಪ್ ಹರಿಜನ್‌ ಅವರು ದುರ್ಗಾ ಪೂಜೆಯನ್ನು ನೋಡಲು ಹತ್ತಿರದ ಮನೆಗೆ ಹೋಗಿ ಕೊಲೆಯಾಗಿದ್ದಾರೆ. ಮುನ್ನಾ ಮತ್ತು ಸಂದೀಪ್ ಎಂಬವರು ಇದರಲ್ಲಿ ಭಾಗಿಯಾಗಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಮತ್ತೊಂದು ವಿಡಿಯೊ ಕುರಿತು ‘ದಿ ವೈರ್‌’ ವರದಿ ಮಾಡಿದ್ದು ಜಗ್ರೂಪ್ ಅವರ ಅಳಿಯ ಎಂದು ಗುರುತಿಸಿಕೊಳ್ಳುವ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. “ಜಗ್ರೂಪ್ ವಿಗ್ರಹದ ಪಾದಗಳನ್ನು ಮುಟ್ಟಿದ ತಕ್ಷಣ ಅರ್ಧಜೀವ ಹೋಗುವಂತೆ ದಾಳಿ ನಡೆಯಿತು” ಎಂದಿದ್ದಾರೆ.

ಜಗ್ರೂಪ್ ಅವರನ್ನು ದಾಳಿಕೋರರು ಮನೆಗೆ ಕರೆತಂದರು. ನಂತರ ಜಗ್ರೂಪ್ ಅವರನ್ನು ಚಿಕಿತ್ಸೆಗಾಗಿ ಪ್ರತಾಪಗಢಕ್ಕೆ ಕರೆದೊಯ್ಯಲಾಯಿತು. ಆದರೆ ಅವರು ನಿಧನರಾಗಿದ್ದರು ಎಂದು ತಿಳಿಸಿದ್ದಾರೆ.

ಕುಟುಂಬಕ್ಕೆ ಯಾವುದೇ ನೆರವು ಸಿಕ್ಕಿಲ್ಲ ಮತ್ತು ನ್ಯಾಯಕ್ಕಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧ ಎಂದು ಹೇಳಿದ್ದಾರೆ.

ಈ ವೀಡಿಯೊವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಎಫ್‌ಐಆರ್‌ನ ಪ್ರತಿಯನ್ನು ಅಕ್ಟೋಬರ್ 2 ರಂದು ದಾಖಲಿಸಲಾಗಿದೆ.

ಪೊಲೀಸರು ಹೇಳುವುದೇನು?

ಅಕ್ಟೋಬರ್ 4 ರಂದು, ಪ್ರತಾಪ್‌ಗಢ ಪೊಲೀಸರು ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ. ಪೂರ್ವ ಪ್ರತಾಪ್‌ಗಢದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿದ್ಯಾಸಾಗರ್ ಮಿಶ್ರಾ ಅವರು ಘಟನೆಯನ್ನು ವಿವರಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ‘ರಾಮ್ ಜೀವನ್’ ಎಂದು ಅವರು ಗುರುತಿಸಿದ್ದಾರೆ.

ಪಂಕಜ್ ದುಬೆ ಮತ್ತು ರಾಮ್ ಸರೋಬರ್ ಮಿಶ್ರಾ ಅವರ ಮನೆಗೆ ಇವರು ವಿಗ್ರಹವನ್ನು ನೋಡಲು ಹೋಗಿದ್ದರು. “ಅಲ್ಲಿ ಕುಲದೀಪ್ ಮತ್ತು ಸಂದೀಪ್ ಎಂಬುವರು ಸೈಕಲ್‌ನಲ್ಲಿ ಬಿಟ್ಟು ಬರುವಂತೆ ದಲಿತ ವ್ಯಕ್ತಿಗೆ ಸೂಚಿಸಿದರು. ಆದರೆ ಅವರು ನಿರಾಕರಿಸಿದಾಗ ಕುಲದೀಪ್ ಮತ್ತು ಸಂದೀಪ್ ದಾಳಿ ಮಾಡಿದ್ದಾರೆ. ನಂತರ ಮನೆಗೆ ಕರೆತಂದಿದ್ದು, ವ್ಯಕ್ತಿಯು ಕೊನೆಯುಸಿರೆಳೆದರು” ಎಂದು ಎಎಸ್ಪಿ ಹೇಳಿದ್ದಾರೆ.

ಆರೋಪಿಗಳನ್ನು ಬಂಧಿಸಲು ತಂಡವನ್ನು ರಚಿಸಲಾಗಿದೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ವಿಗ್ರಹವನ್ನು ಸ್ಪರ್ಶಿಸುವುದರಿಂದ ಸಾವು ಸಂಭವಿಸಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿರಿ: ಚಿಕ್ಕಬಳ್ಳಾಪುರ: ತಮ್ಮ ಜಮೀನಿನಲ್ಲಿ ಆಟವಾಡಿದ ದಲಿತ ಬಾಲಕನನ್ನು ಕರೆಂಟ್ ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

“ದುರ್ಗಾ ಮೂರ್ತಿಯನ್ನು ಮುಟ್ಟಿದ ಕಾರಣಕ್ಕೆ ವ್ಯಕ್ತಿಯನ್ನು ಥಳಿಸಲಾಯಿತು ಮತ್ತು ನಂತರ ಸಾವನ್ನಪ್ಪಿದರು ಎಂಬ ವದಂತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಇದು ಸಂಪೂರ್ಣ ಸುಳ್ಳು” ಎಂದು ಮಿಶ್ರಾ ವಿಡಿಯೋ ಮೂಲಕ ತಿಳಿಸಿದ್ದಾರೆ.

ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಎಎಸ್‌ಪಿ ಹೇಳಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಆರೋಪಿಗಳಾದ ಸಂದೀಪ್ ಮಿಶ್ರಾ, ಕುಲದೀಪ್ ಮಿಶ್ರಾ ಮತ್ತು ಮುನ್ನಾ ಲಾಲ್ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...