Homeದಲಿತ್ ಫೈಲ್ಸ್ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

- Advertisement -
- Advertisement -

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು ಕೋಲುಗಳಿಂದ ಹೊಡೆದು, ಪಿಸ್ತೂಲ್ ತೋರಿಸಿ ಬಲವಂತವಾಗಿ ವಿವಸ್ತ್ರಗೊಳಿಸಲಾಗಿದೆ ಎನ್ನಲಾಗಿದೆ.

ಗುಂಪು ಆತನನ್ನು ತಮ್ಮ ಸ್ನೇಹಿತನೊಬ್ಬನ ಪಾದ ಮುಟ್ಟುವಂತೆ ಒತ್ತಾಯಿಸಿದ್ದಾರೆ. ಇಡೀ ಹಲ್ಲೆಯನ್ನು ವೀಡಿಯೊದಲ್ಲಿ ದಾಖಲಿಸಿದ್ದಾರೆ. ಈ ಘಟನೆ ನವೆಂಬರ್ 22 ರಂದು ಪ್ರೇಮ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ವಿಡಿಯೋ ತಡವಾಗಿ ಬಹಿರಂಗವಾಗಿದೆ. ಪೊಲೀಸರು ಈಗ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್‌ಗಢದ ಗೋಸ್ವಾಮಿ ರೆಸ್ಟೋರೆಂಟ್ ಬಳಿ ತಾನು ನಿಂತಿದ್ದಾಗ ನಿಶಾಂತ್ ಸಕ್ಸೇನಾ, ಸುಕೃತ್ ಮತ್ತು ಕನಿಷ್ಕ್ ನನ್ನನ್ನು ಥಳಿಸಿದರು ಎಂದು ಬಲಿಪಶು ಹೇಳಿದ್ದಾನೆ. “ಅವರು ಸಿಗರೇಟ್‌ ತರಲು ತಮ್ಮೊಂದಿಗೆ ಬರಲು ಹೇಳಿದರು. ನಾವು ನಾಲ್ವರೂ ಒಂದೇ ಸ್ಕೂಟರ್‌ನಲ್ಲಿ ಹೋಗಿದ್ದೆವು” ಎಂದು ಅವರು ಹೇಳಿದರು. ಆದರೆ ಅಂಗಡಿಗೆ ಕರೆದೊಯ್ಯುವ ಬದಲು, ಅವರು ನಿಶಾಂತ್ ಸಕ್ಸೇನಾ ಅವರ ಮನೆಗೆ ಕರೆದೊಯ್ದರು, ಅಲ್ಲಿ ಭಾನು ಪಾಲ್ ಮತ್ತು ರವೀಂದ್ರ ಎಂಬ ಇಬ್ಬರು ಆಗಲೇ ಇದ್ದರು. ಅವರೆಲ್ಲರೂ ನನ್ನನ್ನು ಅವರ ಕಾಲಿನಿಂದ ಮತ್ತು ಕೋಲುಗಳಿಂದ ಹೊಡೆದರು. ರವೀಂದ್ರ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅವರು ನನ್ನ ಮೇಲೆ ಜಾತಿ ನಿಂದನೆ ಮಾಡಿದರು” ಎಂದು ಅವರು ಹೇಳಿದರು.

ಸುಮಾರು ಐದು ನಿಮಿಷಗಳ ವೀಡಿಯೊದಲ್ಲಿ, ದಾಳಿಕೋರರು ಯುವಕರನ್ನು ಪದೇ ಪದೇ ಬೆದರಿಸುವುದು ಮತ್ತು ಅವಮಾನಿಸುವುದನ್ನು ಕೇಳಬಹುದು. ಒಂದು ಹಂತದಲ್ಲಿ ನಿಶಾಂತ್, ‘ನೀವು ಹೇಳಿದ್ದು ನೆನಪಿದೆಯೇ” ಎಂದು ಕೇಳುತ್ತಾನೆ. ಬಲಿಪಶು ಅವರಿಗೆ ಏನನ್ನೋ ವಿವರಿಸಲು ಪ್ರಯತ್ನಿಸುತ್ತಾನೆ. ಅವರ ಪಾದಗಳನ್ನು ಹಿಡಿದು, ದಯವಿಟ್ಟು ನನ್ನನ್ನು ಹೋಗಲು ಬಿಡಿ ಎಂದು ಬೇಡಿಕೊಳ್ಳುತ್ತಾನೆ.

ಆದರೂ ಹಲ್ಲೆ ಹೆಚ್ಚು ಹಿಂಸಾತ್ಮಕವಾಗುತ್ತದೆ. ಆರೋಪಿಗಳಲ್ಲಿ ಒಬ್ಬನು ಅವನನ್ನು ಬಲವಾಗಿ ಹೊಡೆದು, “ನಾನು ಯಾರೆಂದು ನಿನಗೆ ತಿಳಿದಿದೆಯೇ? ನಾನು ರಾಜ್‌ಗಢದ ರಾಜ” ಎಂದು ಹೇಳುತ್ತಾನೆ. ಬಲಿಪಶು ಅವನ ಕಿವಿಗಳನ್ನು ಹಿಡಿದು ಕ್ಷಮೆಯಾಚಿಸುತ್ತಾನೆ. ಅವನು ಯಾರಿಗೂ ಕರೆ ಮಾಡಿಲ್ಲ ಎಂದು ಹೇಳಿದಾಗ, ದಾಳಿಕೋರನು ಚಪ್ಪಲಿಯನ್ನು ಎತ್ತಿಕೊಂಡು ಪದೇ ಪದೇ ಹೊಡೆಯುತ್ತಾನೆ. ನಂತರ ನಿಶಾಂತ್ ಅವನತ್ತ ಪಿಸ್ತೂಲನ್ನು ತೋರಿಸಿ ಅವನ ಬಟ್ಟೆಗಳನ್ನು ತೆಗೆಯಲು ಆದೇಶಿಸುತ್ತಾನೆ. ಭಯಭೀತರಾದ ಬಲಿಪಶು, “ಸಹೋದರ, ನಾನು ನಿನ್ನ ಜೀವದ ಮೇಲೆ ಪ್ರಮಾಣ ಮಾಡುತ್ತೇನೆ, ನನ್ನನ್ನು ಹೋಗಲು ಬಿಡಿ” ಎಂದು ಹೇಳುತ್ತಾನೆ. ನಂತರ ಅವನ ಎದೆಗೆ ಒದ್ದು, ಕೋಲುಗಳಿಂದ ಹೊಡೆದು, ದಾಳಿಕೋರನ ಪಾದಗಳನ್ನು ಮುಟ್ಟುವಂತೆ ಒತ್ತಾಯಿಸಲಾಗುತ್ತದೆ. “ನಾನು ನನ್ನ ಮಗಳ ಮೇಲೆ ಪ್ರಮಾಣ ಮಾಡುತ್ತೇನೆ, ನಾನು ಮತ್ತೆ ತಪ್ಪು ಮಾಡುವುದಿಲ್ಲ” ಎಂದು ಬಲಿಪಶು ಕೈಮುಗಿದು ಹೇಳುತ್ತಾನೆ.

ವಿಡಿಯೋ ಬೆಳಕಿಗೆ ಬಂದ ನಂತರ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಜೊತೆಗೆ ಎಸ್‌ಸಿ ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಸಿಒ ಸದರ್ ರಾಮವೀರ್ ಸಿಂಗ್ ಹೇಳಿದ್ದಾರೆ. “ನಾವು ಸುಕೃತ್, ಆನಂದ್ ನಾಯಕ್ ಮತ್ತು ಕನಿಷ್ಕ್ ಅಹಿರ್ವಾರ್ ಅವರನ್ನು ಬಂಧಿಸಿದ್ದೇವೆ. ಪ್ರಮುಖ ಆರೋಪಿ ನಿಶಾಂತ್ ಸಕ್ಸೇನಾ ತಲೆಮರೆಸಿಕೊಂಡಿದ್ದಾನೆ. ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಹಲ್ಲೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...

ದ್ವೇಷ ಭಾಷಣ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ, ಕಠಿಣ ಶಿಕ್ಷೆ ಪ್ರಸ್ತಾವನೆ

ಕರ್ನಾಟಕ ಸಚಿವ ಸಂಪುಟವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಯನ್ನು ಅಂಗೀಕರಿಸಿದೆ, ದ್ವೇಷ ಭಾಷಣಕ್ಕೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹50,000 ದಂಡವನ್ನು ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾವನೆಯನ್ನು ಈ...

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...

ಪ್ರತಿಭಟನೆಗಿದ್ದ ಏಕೈಕ ಜಾಗ ‘ಬೆಂಗಳೂರಿನ ಫ್ರೀಡಂ ಪಾರ್ಕ್’ ತಾತ್ಕಾಲಿಕ ಬಂದ್, ಹೋರಾಟಗಾರರ ಪರದಾಟ

ಕರ್ನಾಟಕದ ಎಲ್ಲೆಡೆಯಿಂದ ರಾಜಧಾನಿ ಬೆಂಗಳೂರಿಗೆ ಬಂದು ಹೋರಾಟಗಾರರು ಹೋರಾಟ ಮಾಡುವ ಏಕೈಕ ಜಾಗ ಫ್ರೀಡಂ ಪಾರ್ಕ್. ಅಂಥಾ ಫ್ರೀಡಂ ಪಾರ್ಕ್‌ ಅನ್ನು ಈಗ ಬಂದ್ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ತಾತ್ಕಾಲಿಕವಾಗಿ...