Homeದಲಿತ್ ಫೈಲ್ಸ್ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

- Advertisement -
- Advertisement -

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು ಕೋಲುಗಳಿಂದ ಹೊಡೆದು, ಪಿಸ್ತೂಲ್ ತೋರಿಸಿ ಬಲವಂತವಾಗಿ ವಿವಸ್ತ್ರಗೊಳಿಸಲಾಗಿದೆ ಎನ್ನಲಾಗಿದೆ.

ಗುಂಪು ಆತನನ್ನು ತಮ್ಮ ಸ್ನೇಹಿತನೊಬ್ಬನ ಪಾದ ಮುಟ್ಟುವಂತೆ ಒತ್ತಾಯಿಸಿದ್ದಾರೆ. ಇಡೀ ಹಲ್ಲೆಯನ್ನು ವೀಡಿಯೊದಲ್ಲಿ ದಾಖಲಿಸಿದ್ದಾರೆ. ಈ ಘಟನೆ ನವೆಂಬರ್ 22 ರಂದು ಪ್ರೇಮ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ವಿಡಿಯೋ ತಡವಾಗಿ ಬಹಿರಂಗವಾಗಿದೆ. ಪೊಲೀಸರು ಈಗ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್‌ಗಢದ ಗೋಸ್ವಾಮಿ ರೆಸ್ಟೋರೆಂಟ್ ಬಳಿ ತಾನು ನಿಂತಿದ್ದಾಗ ನಿಶಾಂತ್ ಸಕ್ಸೇನಾ, ಸುಕೃತ್ ಮತ್ತು ಕನಿಷ್ಕ್ ನನ್ನನ್ನು ಥಳಿಸಿದರು ಎಂದು ಬಲಿಪಶು ಹೇಳಿದ್ದಾನೆ. “ಅವರು ಸಿಗರೇಟ್‌ ತರಲು ತಮ್ಮೊಂದಿಗೆ ಬರಲು ಹೇಳಿದರು. ನಾವು ನಾಲ್ವರೂ ಒಂದೇ ಸ್ಕೂಟರ್‌ನಲ್ಲಿ ಹೋಗಿದ್ದೆವು” ಎಂದು ಅವರು ಹೇಳಿದರು. ಆದರೆ ಅಂಗಡಿಗೆ ಕರೆದೊಯ್ಯುವ ಬದಲು, ಅವರು ನಿಶಾಂತ್ ಸಕ್ಸೇನಾ ಅವರ ಮನೆಗೆ ಕರೆದೊಯ್ದರು, ಅಲ್ಲಿ ಭಾನು ಪಾಲ್ ಮತ್ತು ರವೀಂದ್ರ ಎಂಬ ಇಬ್ಬರು ಆಗಲೇ ಇದ್ದರು. ಅವರೆಲ್ಲರೂ ನನ್ನನ್ನು ಅವರ ಕಾಲಿನಿಂದ ಮತ್ತು ಕೋಲುಗಳಿಂದ ಹೊಡೆದರು. ರವೀಂದ್ರ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅವರು ನನ್ನ ಮೇಲೆ ಜಾತಿ ನಿಂದನೆ ಮಾಡಿದರು” ಎಂದು ಅವರು ಹೇಳಿದರು.

ಸುಮಾರು ಐದು ನಿಮಿಷಗಳ ವೀಡಿಯೊದಲ್ಲಿ, ದಾಳಿಕೋರರು ಯುವಕರನ್ನು ಪದೇ ಪದೇ ಬೆದರಿಸುವುದು ಮತ್ತು ಅವಮಾನಿಸುವುದನ್ನು ಕೇಳಬಹುದು. ಒಂದು ಹಂತದಲ್ಲಿ ನಿಶಾಂತ್, ‘ನೀವು ಹೇಳಿದ್ದು ನೆನಪಿದೆಯೇ” ಎಂದು ಕೇಳುತ್ತಾನೆ. ಬಲಿಪಶು ಅವರಿಗೆ ಏನನ್ನೋ ವಿವರಿಸಲು ಪ್ರಯತ್ನಿಸುತ್ತಾನೆ. ಅವರ ಪಾದಗಳನ್ನು ಹಿಡಿದು, ದಯವಿಟ್ಟು ನನ್ನನ್ನು ಹೋಗಲು ಬಿಡಿ ಎಂದು ಬೇಡಿಕೊಳ್ಳುತ್ತಾನೆ.

ಆದರೂ ಹಲ್ಲೆ ಹೆಚ್ಚು ಹಿಂಸಾತ್ಮಕವಾಗುತ್ತದೆ. ಆರೋಪಿಗಳಲ್ಲಿ ಒಬ್ಬನು ಅವನನ್ನು ಬಲವಾಗಿ ಹೊಡೆದು, “ನಾನು ಯಾರೆಂದು ನಿನಗೆ ತಿಳಿದಿದೆಯೇ? ನಾನು ರಾಜ್‌ಗಢದ ರಾಜ” ಎಂದು ಹೇಳುತ್ತಾನೆ. ಬಲಿಪಶು ಅವನ ಕಿವಿಗಳನ್ನು ಹಿಡಿದು ಕ್ಷಮೆಯಾಚಿಸುತ್ತಾನೆ. ಅವನು ಯಾರಿಗೂ ಕರೆ ಮಾಡಿಲ್ಲ ಎಂದು ಹೇಳಿದಾಗ, ದಾಳಿಕೋರನು ಚಪ್ಪಲಿಯನ್ನು ಎತ್ತಿಕೊಂಡು ಪದೇ ಪದೇ ಹೊಡೆಯುತ್ತಾನೆ. ನಂತರ ನಿಶಾಂತ್ ಅವನತ್ತ ಪಿಸ್ತೂಲನ್ನು ತೋರಿಸಿ ಅವನ ಬಟ್ಟೆಗಳನ್ನು ತೆಗೆಯಲು ಆದೇಶಿಸುತ್ತಾನೆ. ಭಯಭೀತರಾದ ಬಲಿಪಶು, “ಸಹೋದರ, ನಾನು ನಿನ್ನ ಜೀವದ ಮೇಲೆ ಪ್ರಮಾಣ ಮಾಡುತ್ತೇನೆ, ನನ್ನನ್ನು ಹೋಗಲು ಬಿಡಿ” ಎಂದು ಹೇಳುತ್ತಾನೆ. ನಂತರ ಅವನ ಎದೆಗೆ ಒದ್ದು, ಕೋಲುಗಳಿಂದ ಹೊಡೆದು, ದಾಳಿಕೋರನ ಪಾದಗಳನ್ನು ಮುಟ್ಟುವಂತೆ ಒತ್ತಾಯಿಸಲಾಗುತ್ತದೆ. “ನಾನು ನನ್ನ ಮಗಳ ಮೇಲೆ ಪ್ರಮಾಣ ಮಾಡುತ್ತೇನೆ, ನಾನು ಮತ್ತೆ ತಪ್ಪು ಮಾಡುವುದಿಲ್ಲ” ಎಂದು ಬಲಿಪಶು ಕೈಮುಗಿದು ಹೇಳುತ್ತಾನೆ.

ವಿಡಿಯೋ ಬೆಳಕಿಗೆ ಬಂದ ನಂತರ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಜೊತೆಗೆ ಎಸ್‌ಸಿ ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಸಿಒ ಸದರ್ ರಾಮವೀರ್ ಸಿಂಗ್ ಹೇಳಿದ್ದಾರೆ. “ನಾವು ಸುಕೃತ್, ಆನಂದ್ ನಾಯಕ್ ಮತ್ತು ಕನಿಷ್ಕ್ ಅಹಿರ್ವಾರ್ ಅವರನ್ನು ಬಂಧಿಸಿದ್ದೇವೆ. ಪ್ರಮುಖ ಆರೋಪಿ ನಿಶಾಂತ್ ಸಕ್ಸೇನಾ ತಲೆಮರೆಸಿಕೊಂಡಿದ್ದಾನೆ. ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಹಲ್ಲೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...