Homeಮುಖಪುಟಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

ಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

- Advertisement -
- Advertisement -

ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಜೀವ ಬೆದರಿಕೆಯಿದೆ ಎಂದಿದ್ದ, ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆ ಮೂಲದ ಟಿವಿ ಪತ್ರಕರ್ತರೊಬ್ಬರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಪೊಲೀಸರು ಪತ್ರಕರ್ತರ ಸಾವನ್ನು “ಬೈಕ್ ಅಪಘಾತ” ಎಂದು ಕರೆದಿದ್ದಾರೆ.

ಎಬಿಪಿ ನ್ಯೂಸ್ ಮತ್ತು ಅದರ ಪ್ರಾದೇಶಿಕ ವಿಭಾಗವಾದ ಎಬಿಪಿ ಗಂಗಾ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸುಲಭ್ ಶ್ರೀವಾಸ್ತವ, ಶನಿವಾರವಷ್ಟೇ ತಮಗೆ ಜೀವ ಬೆದರಿಕೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಪ್ರತಾಪಗಢ ಜಿಲ್ಲೆಯಲ್ಲಿ ಇತ್ತೀಚೆಗೆ ಮದ್ಯ ಮಾಫಿಯಾಗಳ ವರದಿಯ ಮೇಲೆ ಪತ್ರಕರ್ತ ಸುಲಭ್ ಬೆಳಕು ಚೆಲ್ಲಿದ್ದರು. ನಂತರ ತನಗೆ ಬೆದರಿಕೆಯಿದೆ ಎಂದು ಹೇಳಿದ್ದರು.

“ಸುಲಭ್ ಶ್ರೀವಾಸ್ತವ ಅವರು ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಕೆಲಸದ ನಂತರ ತಮ್ಮ ಮೋಟಾರ್‌ ಸೈಕಲ್‌ನಲ್ಲಿ ಹಿಂದಿರುಗುತ್ತಿದ್ದರು. ಇಟ್ಟಿಗೆ ಗೂಡು ಬಳಿ ಅಪಘಾತಕ್ಕೆ ಈಡಾಗಿ ಬಿದ್ದಿದ್ದಾರೆ. ಕೆಲವು ಕಾರ್ಮಿಕರು ನೋಡಿ, ಅವರ ಸ್ನೇಹಿತರರಿಗೆ ಕರೆ ಮಾಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸುಲಭ್ ಶ್ರೀವಾಸ್ತವ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ” ಎಂದು ಪ್ರತಾಪಗಢದ ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ದ್ವಿವೇದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

“ಪ್ರಾಥಮಿಕ ತನಿಖೆಯಲ್ಲಿ ಅವರು ಒಬ್ಬರೇ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ರಸ್ತೆಯ ಹ್ಯಾಂಡ್‌ಪಂಪ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಾವು ಇತರ ಕೋನಗಳಲ್ಲಿಯೂ ಸಹ ತನಿಖೆ ನಡೆಸುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ದ್ವಿವೇದಿ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ತೆಗೆದಿರುವ ಪತ್ರಕರ್ತ ಸುಲಭ್ ಅವರ ಮೃತದೇಹದ ಛಾಯಾಚಿತ್ರದಲ್ಲಿ, ಪತ್ರಕರ್ತ ನೆಲದ ಮೇಲೆ ಬಿದ್ದಿರುವುದು, ಅವರ ಮುಖಕ್ಕೆ ತೀವ್ರ ಗಾಯಗಳಾಗಿರುವುದು, ಅವರು ತೊಟ್ಟಿರುವ ಬಟ್ಟೆಗಳನ್ನು ತೆಗೆದಿರುವ ರೀತಿಯಲ್ಲಿದೆ. ಶರ್ಟ್ ಸಂಪೂರ್ಣವಾಗಿ ತೆಗೆಯಲಾಗಿದ್ದು, ಪ್ಯಾಂಟ್ ಬಿಚ್ಚಿ ಕೆಳಕ್ಕೆ ಎಳೆದಿರುವುದನ್ನು ಛಾಯಾಚಿತ್ರದಲ್ಲಿ ನೋಡಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೃತ ಪತ್ರಕರ್ತ ಶನಿವಾರ ತಮಗೆ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಮಾಜಿ ಚಾನೆಲ್‌ನ ಹಿರಿಯ ಪತ್ರಕರ್ತರು ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

udhsc538

“ಜೂನ್ 9 ರಂದು ಜಿಲ್ಲೆಯಲ್ಲಿ ನಡೆಯುತ್ತಿರುವ ಮದ್ಯ ಮಾಫಿಯಾ ಕುರಿತ ನನ್ನ ವರದಿಯು ನನ್ನ ಚಾನೆಲ್ ನಡೆಸುತ್ತಿರುವ ನ್ಯೂಸ್ ಪೋರ್ಟಲ್‌ನಲ್ಲಿ ವರದಿಯಾಗಿದೆ. ಅಂದಿನಿಂದ ಈ ವರದಿಯ ಬಗ್ಗೆ ಸಾಕಷ್ಟು ಚರ್ಚೆಗಳಿವೆ. ನಾನು ನನ್ನ ಮನೆಯಿಂದ ಹೊರಬಂದಾಗ ಯಾರೋ ನನ್ನನ್ನು ಹಿಂಬಾಲಿಸುವಂತೆ ಅನಿಸುತ್ತಿದೆ.  ನನ್ನ ವರದಿಯ ಬಗ್ಗೆ ಮದ್ಯ ಮಾಫಿಯಾ ಅತೃಪ್ತಿ ಹೊಂದಿದೆ. ನನಗೆ ತೊಂದರೆಯಾಗಬಹುದು ಎಂದು ನನ್ನ ಮೂಲಗಳು ತಿಳಿಸಿವೆ. ಇದರಿಂದ ನನ್ನ ಕುಟುಂಬವೂ ತುಂಬಾ ಆತಂಕಕ್ಕೊಳಗಾಗಿದೆ “ಎಂದು ಸುಲಭ್ ಶ್ರೀವಾಸ್ತವ ಪತ್ರದಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪ್ರೇಮ್ ಪ್ರಕಾಶ್ ಅವರು ಎಬಿಪಿ ನ್ಯೂಸ್‌ಗೆ ಫೋನ್-ಇನ್ ಸಂದರ್ಶನದಲ್ಲಿ ಪತ್ರದ ಬಗ್ಗೆ ಮಾತನಾಡಿದ್ದು, ಬೆದರಿಕೆ ಬಗ್ಗೆ ತನಿಖೆ ನಡೆಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸುಲಭ್ ಶ್ರೀವಾಸ್ತವ ಸಾವಿಗೆ ಪ್ರತಿಪಕ್ಷದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, “ಸತ್ಯವನ್ನು ಬಹಿರಂಗಪಡಿಸಲು ಪತ್ರಕರ್ತರು ಅಪಾಯಕಾರಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸರ್ಕಾರ ನಿದ್ರಿಸುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೊಡಗು: ಪೊಲೀಸರ ದೌರ್ಜನ್ಯಕ್ಕೆ ಮಾನಸಿಕ ಅಸ್ವಸ್ಥ ಬಲಿ: ಎಂಟು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...